July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಕಳೆದು ಹೋದಂತಹ ಚಿನ್ನದ ಬ್ರೇಸ್ಲೆಟ್ ನ್ನು ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಮಂಜೊಟ್ಟಿಯ ಶ್ರೀಧರ್ ಶೆಟ್ಟಿ

ಬೆಳ್ತಂಗಡಿ: ಕಳೆದು ಹೋದಂತಹ ಸುಮಾರು ರೂ.1.80ಲಕ್ಷ ಮೌಲ್ಯದ ಚಿನ್ನದ ಬ್ರೇಸ್ಲೆಟ್ ಅನ್ನು ನಡ ಗ್ರಾಮದ ಮಂಜೊಟ್ಟಿ ಚಿಕನ್ ಸೆಂಟರ್ ಮಾಲಕ ಶ್ರೀಧರ್ ಶೆಟ್ಟಿ ಅವರು ಸಂಬಂಧಪಟ್ಟವರಿಗೆ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.

ಘಟನೆ ವಿವರ: ಬೆಳ್ತಂಗಡಿ ಪೇಟೆಗೆ ಹೋದ ಸಂದರ್ಭದಲ್ಲಿ ನಿಲ್ಲಿಸಿದ ಸ್ಥಳದಲ್ಲಿ ಯಾವುದೋ ಹೊಳೆಯುತ್ತಿದ್ದ ಆಭರಣವನ್ನು ಕಂಡು ಮನೆಗೆ ತಂದು ಪರಿಶೀಲಿಸಲು ಹೇಳಿದಾಗ ಇದು ಅಸಲಿ ಚಿನ್ನದ ಆಭರಣವೆಂದು ಗೊತ್ತಾಗಿ ತನ್ನ ಮನೆಯವರಲ್ಲಿ ಈ ವಿಚಾರವನ್ನು ಫೋಟೋ ಸಮೇತ ವಾಟ್ಸಪ್ ಗ್ರೂಪ್ ನಲ್ಲಿ ಹಾಕಲು ಹೇಳಿದರು. ಎರಡು ದಿನಗಳಿಂದ ಸರಿಸುಮಾರು 85ಕ್ಕೂ ಹೆಚ್ಚು ಜನರು ಫೋನ್ ಕರೆ ಮಾಡಿ ಇದರ ಬಗ್ಗೆ ವಿಚಾರಣೆ ಮಾಡಿದರೂ, ನಿಜವಾಗಿಯೂ ಯಾರು ಕಳೆದುಕೊಂಡಿದ್ದಾರೆ ಅವರಿಗೆ ನ್ಯಾಯಯುತವಾಗಿ ಸಿಗಬೇಕು ಎಂಬ ದೃಷ್ಟಿಯಿಂದ ಪೊಲೀಸ್ ಇಲಾಖೆಯ ಸಹಕಾರವನ್ನು ಪಡೆದು ಕಳೆದುಕೊಂಡಂತಹ ಪ್ರಕಾಶ್ ಬಳಂಜ ಇವರಿಗೆ ಹಸ್ತಾಂತರಿಸಲಾಯಿತು.

Related posts

ಬಳಂಜ ಗ್ರಾ.ಪಂ. ನ ಮೊದಲ ಹಂತದ ಗ್ರಾಮಸಭೆ

Suddi Udaya

ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ: ನೆಕ್ಕಿಲು ಸ.ಕಿ.ಪ್ರಾ. ಶಾಲೆಗೆ ಹಲವು ಪ್ರಶಸ್ತಿ

Suddi Udaya

ಧರ್ಮಸ್ಥಳದಲ್ಲಿ ಶಿವರಾತ್ರಿಯ ರಥೋತ್ಸವ

Suddi Udaya

ಕಡಿರುದ್ಯಾವರ ಗ್ರಾ.ಪಂ. ಹಾಗೂ ಶ್ರೀ ಕ್ಷೇ.ಧ.ಗ್ರಾ.ಯೋಜನೆ ಸಹಭಾಗಿತ್ವದಲ್ಲಿ ನಿರ್ಮಾಣಗೊಂಡ ರುದ್ರಭೂಮಿ ಲೋಕಾರ್ಪಣೆ

Suddi Udaya

ಬೆಳ್ತಂಗಡಿ ಟೀಂ ಅಭಯಹಸ್ತ ಇದರ ಸಮಾಲೋಚನಾ ಸಭೆ

Suddi Udaya

ತಣ್ಣೀರುಪಂತ ಸಹಕಾರ ಸಂಘಗಳ ವ್ಯಾಪ್ತಿಯಲ್ಲಿ ರಾಸುಗಳ ಭ್ರೂಣ ವರ್ಗಾವಣೆ ಕಾರ್ಯಕ್ರಮ

Suddi Udaya
error: Content is protected !!