July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಪುಂಜಾಲಕಟ್ಟೆ: ಅಕ್ರಮ ಗೋಸಾಗಾಟ ಪ್ರಕರಣ ದಾಖಲು:ಜಾನುವಾರು ನೀಡಿದ ಮಾಲೀಕನ ಮನೆ ಮತ್ತು ಕೊಟ್ಟಿಗೆ ಒಪ್ತಿ

ಬೆಳ್ತಂಗಡಿ: ಬಂಟ್ವಾಳ ಉಳಿ ಗ್ರಾಮದ ಮಣಿನಾಲ್ಕೂರು- ತೆಕ್ಕಾರು ರಸ್ತೆಯಲ್ಲಿ ಗೂಡ್ಸ್ ಅಟೋದಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಜಾನುವಾರನ್ನು ಸಾಗಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಬಂದ ಮೇರೆಗೆ ಡಿ.13 ರಂದು ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕ ರಾಜೇಶ್ ಮತ್ತು ಸಿಬ್ಬಂದಿಗಳು KA-70-8686 ನೇ ನೊಂದಣಿಯ ಗೂಡ್ಸ್ ಅಟೋವನ್ನು ತಡೆದು ಪರಿಶೀಲಿಸಿದಾಗ ಅದರಲ್ಲಿ ಒಂದು ಜಾನುವಾರನ್ನು ಹಗ್ಗದಿಂದ ಹಿಂಸಾತ್ಮಕವಾಗಿ ಕಟ್ಟಿ ಹಾಕಿರುವುದು ಪತ್ತೆ ಹಚ್ಚಿದ್ದಾರೆ.

ಜಾನುವಾರು ಸಾಗಿಸುತ್ತಿದ್ದ ವಾಹನ ಚಾಲಕ ಬಂಟ್ವಾಳ ಮಣಿನಾಲ್ಕೂರು ಗ್ರಾಮದ ನಿವಾಸಿ ಶ್ರೀಧರ ಪೂಜಾರಿ(56) ಎಂಬುದಾಗಿ ತಿಳಿದುಬಂದಿದ್ದು. ಈ ಜಾನುವಾರನ್ನು ಬಂಟ್ವಾಳ ಸರಪ್ಪಾಡಿ ಎಂಬಲ್ಲಿ ಭೋಜ ಮೂಲ್ಯ ಎಂಬವರ ಮನೆಯಿಂದ ಯಾವುದೇ ದಾಖಲಾತಿ ಪರವಾನಿಗೆ ಇಲ್ಲದೇ ಗೋಹತ್ಯೆ ಮಾಡಿ ಮಾಂಸ ಮಾಡುವ ಉದ್ದೇಶದಿಂದ ಜಾನುವಾರನ್ನು ಹಿಂಸಾತ್ಮಕ ರೀತಿಯಲ್ಲಿ ಸಾಗಾಟ ಮಾಡಿರುವುದು ಕಂಡುಬಂದಿರುತ್ತದೆ.

ಪತ್ತೆ ಹಚ್ಚಿದ ಒಂದು ಜಾನುವಾರು, ಅಟೋ ಹಾಗು ಒಂದು ಮೊಬೈಲ್ ಫೋನ್ ನನ್ನು ವಶಕ್ಕೆ ಪಡೆದು ಆರೋಪಿಗಳ ವಿರುದ್ಧ ಪುಂಜಾಲಕಟ್ಟೆ ಠಾಣೆಯಲ್ಲಿ ಕಲಂ: 5, 7, 12 ಕರ್ನಾಟಕ ಗೋಹತ್ಯೆ ನಿಷೇಧ ಕಾಯಿದೆ ಮತ್ತು ಜಾನುವಾರು ಸಂರಕ್ಷಣಾ ಕಾಯಿದೆ 2020 ಮತ್ತು ಕಲಂ: 11(1)(ಡಿ) ಪ್ರಾಣಿ ಹಿಂಸೆ ತಡೆ ಕಾಯಿದೆಯಡಿ ಪ್ರಕರಣ ದಾಖಲಿಸಲಾಗಿದೆ.ಮುಂದುವರಿದಂತೆ ತನಿಖೆ ಭಾಗವಾಗಿ ಜಾನುವಾರು ನೀಡಿದ ಆರೋಪಿ ಬಂಟ್ವಾಳ ಗ್ರಾಮದ ಸರಪ್ಪಾಡಿ ನಿವಾಸಿ ಭೋಜ ಮೂಲ್ಯರವರ ಮನೆ ಹಾಗೂ ಜಾನುವಾರು ಕೊಟ್ಟಿಗೆ ಸೇರಿದಂತೆ ಆವರಣವನ್ನು ಪುಂಜಾಲಕಟ್ಟೆ ಪೊಲೀಸರು ಡಿ.14 ರಂದು ಕಾನೂನು ಪ್ರಕ್ರಿಯೆಯಂತೆ ಜಪ್ತಿ ಮಾಡಿದ್ದಾರೆ.

Related posts

ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶ್ರೀ ರಾಮ ನಗರ ಮೈರಲ್ಕೆ ಓಡಿಲ್ನಾಳ ವರ್ಷಾವಧಿ ಜಾತ್ರೋತ್ಸವ

Suddi Udaya

ಜೂ.16: ತಾಲೂಕು ಕಛೇರಿಯಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ದ.ಕ. ಉಡುಪಿ ಜಿಲ್ಲೆ ಬೆಳ್ತಂಗಡಿ ವಲಯದ ನೂತನ ಪದಾಧಿಕಾರಿಗಳ ಪದಪ್ರಧಾನ ಕಾರ್ಯಕ್ರಮ

Suddi Udaya

ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya

ಅಳದಂಗಡಿ ಶ್ರೀ ಸತ್ಯದೇವತೆ ದೇವಸ್ಥಾನಕ್ಕೆ ವಸಂತ್ ಶೆಟ್ಟಿ ಕಲ್ಲುಗುಡ್ಡೆ 92 ಹೇರೂರು ಕಾಪು ರವರಿಂದ 75 ಕುರ್ಚಿಗಳ ಕೊಡುಗೆ

Suddi Udaya

ಉಜಿರೆಯ ಎಸ್.ಡಿ.ಎಂ ಕಾಲೇಜಿನಲ್ಲಿ ‘ಭಾಸ್ಕರ ಪರ್ವ’: ಮೂರು ದಶಕಗಳ ವೃತ್ತಿ ಬದುಕಿಗೆ ಗೌರವದ ಬೀಳ್ಕೊಡುಗೆ

Suddi Udaya
error: Content is protected !!