25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಕಳೆದು ಹೋದಂತಹ ಚಿನ್ನದ ಬ್ರೇಸ್ಲೆಟ್ ನ್ನು ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಮಂಜೊಟ್ಟಿಯ ಶ್ರೀಧರ್ ಶೆಟ್ಟಿ

ಬೆಳ್ತಂಗಡಿ: ಕಳೆದು ಹೋದಂತಹ ಸುಮಾರು ರೂ.1.80ಲಕ್ಷ ಮೌಲ್ಯದ ಚಿನ್ನದ ಬ್ರೇಸ್ಲೆಟ್ ಅನ್ನು ನಡ ಗ್ರಾಮದ ಮಂಜೊಟ್ಟಿ ಚಿಕನ್ ಸೆಂಟರ್ ಮಾಲಕ ಶ್ರೀಧರ್ ಶೆಟ್ಟಿ ಅವರು ಸಂಬಂಧಪಟ್ಟವರಿಗೆ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.

ಘಟನೆ ವಿವರ: ಬೆಳ್ತಂಗಡಿ ಪೇಟೆಗೆ ಹೋದ ಸಂದರ್ಭದಲ್ಲಿ ನಿಲ್ಲಿಸಿದ ಸ್ಥಳದಲ್ಲಿ ಯಾವುದೋ ಹೊಳೆಯುತ್ತಿದ್ದ ಆಭರಣವನ್ನು ಕಂಡು ಮನೆಗೆ ತಂದು ಪರಿಶೀಲಿಸಲು ಹೇಳಿದಾಗ ಇದು ಅಸಲಿ ಚಿನ್ನದ ಆಭರಣವೆಂದು ಗೊತ್ತಾಗಿ ತನ್ನ ಮನೆಯವರಲ್ಲಿ ಈ ವಿಚಾರವನ್ನು ಫೋಟೋ ಸಮೇತ ವಾಟ್ಸಪ್ ಗ್ರೂಪ್ ನಲ್ಲಿ ಹಾಕಲು ಹೇಳಿದರು. ಎರಡು ದಿನಗಳಿಂದ ಸರಿಸುಮಾರು 85ಕ್ಕೂ ಹೆಚ್ಚು ಜನರು ಫೋನ್ ಕರೆ ಮಾಡಿ ಇದರ ಬಗ್ಗೆ ವಿಚಾರಣೆ ಮಾಡಿದರೂ, ನಿಜವಾಗಿಯೂ ಯಾರು ಕಳೆದುಕೊಂಡಿದ್ದಾರೆ ಅವರಿಗೆ ನ್ಯಾಯಯುತವಾಗಿ ಸಿಗಬೇಕು ಎಂಬ ದೃಷ್ಟಿಯಿಂದ ಪೊಲೀಸ್ ಇಲಾಖೆಯ ಸಹಕಾರವನ್ನು ಪಡೆದು ಕಳೆದುಕೊಂಡಂತಹ ಪ್ರಕಾಶ್ ಬಳಂಜ ಇವರಿಗೆ ಹಸ್ತಾಂತರಿಸಲಾಯಿತು.

Related posts

ಮೈರೋಳ್ತಡ್ಕ ಸ. ಉ. ಹಿ.ಪ್ರಾ.ಶಾಲೆಯ ನೂತನ ಶಾಲಾಭಿವೃದ್ಧಿ ಸಮಿತಿ ರಚನೆ

Suddi Udaya

ಕೊಯ್ಯೂರು ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ: ಏಷಿಯನ್ ಯೋಗ ಚಾಂಪಿಯನ್ ಚಿನ್ನದ ಪದಕ ವಿಜೇತೆ ನಿರ್ಮಲಾ ಸುಭಾಷ್ ಕೊಡ್ಲಿಕಾರ ಅಭಿನಂದನೆ

Suddi Udaya

ಕುವೆಟ್ಟು: ವಿದ್ಯುತ್ ಅವಘಡದಿಂದ ಸಹಾಯಕ ಪವರ್‌ಮ್ಯಾನ್ ಮೃತ್ಯು

Suddi Udaya

ನಾರಾವಿ ವಲಯದ ಪ್ರೌಢಶಾಲಾ ಮಟ್ಟದ ಪ್ರತಿಭಾ ಕಾರಂಜಿ

Suddi Udaya

ಎ.2: ಬಿಜೆಪಿ ಬೆಳ್ತಂಗಡಿ ಮಂಡಲ ಪದಾಧಿಕಾರಿಗಳ, ವಿವಿಧ ಮೋರ್ಚಾಗಳ, ಮಹಾಶಕ್ತಿಕೇಂದ್ರ, ಶಕ್ತಿಕೇಂದ್ರ ಹಾಗೂ ಬೂತ್ ಸಮಿತಿ ಪದಾಧಿಕಾರಿಗಳ ಪದಗ್ರಹಣ ಹಾಗೂ ಕಾರ್ಯಕರ್ತರ ಸಮಾವೇಶ

Suddi Udaya

ನಿಡ್ಲೆ: ಯಕ್ಷ ಧ್ರುವ ಪಟ್ಲ ಫೌಂಡೇಶನ್ ವತಿಯಿಂದ ನಾಟ್ಯ ತರಬೇತಿ ಶಿಕ್ಷಣ ಅಭಿಯಾನ

Suddi Udaya
error: Content is protected !!