ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಂತರಾಷ್ಟ್ರೀಯ ಉದ್ಯಮಿ,‌ ಧಾರ್ಮಿಕ ಮುಖಂಡ ಕುಟ್ಟೂರ್ ಹಾಜಿ ಬೆಳ್ತಂಗಡಿಗೆ ಭೇಟಿ

ಬೆಳ್ತಂಗಡಿ: ಕೇರಳದ ಪ್ರಖ್ಯಾತ “ನಾಲೆಡ್ಜ್ ಸಿಟಿ” ಇಲ್ಲಿನ ಗ್ರ್ಯಾಂಡ್ ಮಸ್ಜಿದ್ ಆಫ್ ಇಂಡಿಯಾ “ಜಾಮಿಯಲ್ ಫುತೂಹ್” ಇದರ ಚೇರ್ಮೆನ್, ಅಂತಾರಾಷ್ಟ್ರೀಯ ಉದ್ಯಮಿ ಸಿ.ಪಿ ಅಬ್ದುಲ್ ರಹಿಮಾನ್ ಹಾಜಿ (ಕೂಟ್ಟೂರ್ ಹಾಜಿ) ಅವರು ಡಿ.14 ರಂದು ಬೆಳ್ತಂಗಡಿಗೆ ಭೇಟಿ ನೀಡಿದರು.

ಅವರನ್ನು ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ನಾಯಕರಾದ ಅಬ್ಬೋನು ಮದ್ದಡ್ಕ, ಖ್ಯಾತ ಉದ್ಯಮಿ ಉಸ್ಮಾನ್ ಹಾಜಿ ಆಲಂದಿಲ, ಹಿರಿಯ ಪತ್ರಕರ್ತ ಹಾಗೂ ಎಸ್‌ವೈಎಸ್ ಝೋನ್ ಮಾಜಿ ಪ್ರಧಾನ ಕಾರ್ಯದರ್ಶಿ ಅಶ್ರಫ್ ಆಲಿಕುಂಞಿ ಮುಂಡಾಜೆ ಬರಮಾಡಿಕೊಂಡು ಗೌರವಿಸಿದರು.

ಸಿ.ಪಿ‌ ಅಬ್ದುಲ್ ರಹಿಮಾನ್ ಅವರು ಅಬುದಾಬಿಯ ಬನಿಯಾಸ್ ಸ್ಲೈಕ್ ಗ್ರೂಪ್ ಆಫ್ ಕಂಪೆನಿ ಹಾಗೂ ಫಾಲ್ಕನ್ ಇಂಡಸ್ಟ್ರೀಸ್
ಪ್ರೈ ಲಿಮಿಟೆಡ್ ಇದರ ಸಂಸ್ಥಾಪಕರು ಹಾಗೂ ಚೇರ್ಮೆನ್ ಕೂಡ ಆಗಿದ್ದಾರೆ.


ಇಂಡಿಯನ್ ಗ್ರ್ಯಾಂಡ್ ಮುಫ್ತಿ ಎ.ಪಿ ಉಸ್ತಾದ್ ಅವರ ಅತ್ಯಾಪ್ತರಲ್ಲಿ ಓರ್ವರಾಗಿರುವ ಅವರು ತನ್ನ ಕರ್ನಾಟಕ ಪ್ರವಾಸದ ಮಧ್ಯೆ ಮಾಣಿ ದಾರುಲ್ ಇರ್ಷಾದ್ ಸಂಸ್ಥೆಗೆ ಹಾಗೂ ತೈಬಾ ಗಾರ್ಡನ್ ಈಶ್ವರಮಂಗಳ ಇಲ್ಲಿಗೂ ಭೇಟಿ ನೀಡಿ ಬಳಿಕ ಚಿಕ್ಕಮಗಳೂರಿಗೆ ನಿರ್ಗಮಿಸಿದರು.

Related posts

ಉಜಿರೆಯ ಬೆನಕ ಹೆಲ್ತ್ ಸೆಂಟರ್ ನಲ್ಲಿ ಅಂತರಾಷ್ಟ್ರೀಯ ದಾದಿಯರ ದಿನಾಚರಣೆ

Suddi Udaya

ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ: ಶ್ರೀ ಭಾರತೀ ಆಂ.ಮಾ.ಪ್ರೌ. ಶಾಲೆಯ ಬಾಲಕಿಯರ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಉಜಿರೆ ಮಹಾಶಕ್ತಿಕೇಂದ್ರದ ಸಭೆ

Suddi Udaya

ಗುರುವಾಯನಕೆರೆ: ಜ್ಞಾನ ವಿಕಾಸ ಕೇಂದ್ರಗಳ ಸದಸ್ಯರ ಅಧ್ಯಯನ ಪ್ರವಾಸ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಂತ್ರಿಮಂಡಲದ ಉದ್ಘಾಟನಾ ಸಮಾರಂಭ

Suddi Udaya

ಬೆಳ್ತಂಗಡಿ 47ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಉದ್ಘಾಟನೆ

Suddi Udaya
error: Content is protected !!