September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬೆಳ್ತಂಗಡಿ: ಸರಕಾರಿ ಶಾಲೆಗಳ ನೂತನ ಕೊಠಡಿ ನಿರ್ಮಾಣಕ್ಕೆ ರೂ.1.715 ಕೋಟಿ ಅನುದಾನ ಮಂಜೂರು: ಹರೀಶ್ ಪೂಂಜ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಲವು ಸರಕಾರಿ ಶಾಲೆಗಳಿಗೆ ವಿದ್ಯಾರ್ಥಿಗಳ ಸಂಖ್ಯಾಬಲಕ್ಕೆ ಅನುಗುಣವಾಗಿ ಕೊಠಡಿ ನಿರ್ಮಾಣಕ್ಕೆ ರೂ.1.715 ಕೋಟಿ ಅನುದಾನ ಮಂಜೂರು ಗೊಂಡಿರುತ್ತದೆ.

ಗ್ರಾಮೀಣ ವಿದ್ಯಾರ್ಥಿಗಳ ವಿದ್ಯಾರ್ಜನೆಯ ಹಿತದೃಷ್ಟಿಯಿಂದ ನೂತನ ಕೊಠಡಿಗಳ ನಿರ್ಮಾಣಕ್ಕೆ ಅನುದಾನ ಒದಗಿಸುವಂತೆ ಸರಕಾರಕ್ಕೆ ಶಾಸಕರಾದ ಹರೀಶ್ ಪೂಂಜರವರು ಮನವಿಯನ್ನು ಸಲ್ಲಿಸಿದ್ದು, ಸರಕಾರ ಶಾಸಕರ ಮನವಿಗೆ ಸ್ಪಂದಿಸಿ ತಾಲೂಕಿನ 9 ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಒಟ್ಟು 10 ನೂತನ ಕೊಠಡಿ ನಿರ್ಮಾಣ ಮಾಡಲು ರೂ.1.00 ಕೋಟಿ 71.50 ಲಕ್ಷ ಅನುದಾನವನ್ನು ಮಂಜೂರುಗೊಳಿಸಿರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಅನುದಾನ ಬಿಡುಗಡೆಗೊಳಿಸಿದ ರಾಜ್ಯ ಸರಕಾರಕ್ಕೆ ಹಾಗೂ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪರವರಿಗೆ ಶಾಸಕರಾದ ಹರೀಶ್ ಪೂಂಜರವರು ಧನ್ಯವಾದಗಳನ್ನು ಸಲ್ಲಿಸಿರುತ್ತಾರೆ.

Related posts

ಮಡಂತ್ಯಾರು: ಪಾರೆಂಕಿ ನಿವಾಸಿ ರೋಬರ್ಟ್ ಡಿಸೋಜಾ ನಿಧನ

Suddi Udaya

ಬುರುಡೆ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಯಾದ ಪ್ರದೀಪ್ : ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ ಎಸ್.ಐ.ಟಿ

Suddi Udaya

ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನಾ ಸಮಾರಂಭ

Suddi Udaya

ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ ಅವರಿಗೆ ಶಿಷ್ಯಂದಿರಿಂದ ಬೀಳ್ಕೊಡುಗೆ- ಸನ್ಮಾನ

Suddi Udaya

ಬಳ್ಳಮಂಜದಲ್ಲಿ ನಡೆದ ಮನೆ ಕಳ್ಳತನ ಸೇರಿದಂತೆ ಹಲವು ಪ್ರಕರಣಗಳ ಆರೋಪಿಗಳ ಬಂಧನ: ರೂ.23.67 ಲಕ್ಷದ ಸೊತ್ತುಗಳು ವಶಕ್ಕೆ

Suddi Udaya

22 ವರ್ಷ ಭಾರತಮಾತೆಯ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಲಾಯಿಲದ ಅಶೋಕ್ ಕುಮಾರ್ ರವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಸ್ವಾಗತ

Suddi Udaya
error: Content is protected !!