23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯಮಟ್ಟದ ಹ್ಯಾಂಡ್‌ಬಾಲ್‌ ಪಂದ್ಯಾಟ : ಉಜಿರೆ ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗವಿಜ್ಞಾನಗಳ ಮಹಾವಿದ್ಯಾಲಯ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

ಉಜಿರೆ: ಮಹಿಳೆಯರ ರಾಜ್ಯಮಟ್ಟದ ಹ್ಯಾಂಡ್‌ಬಾಲ್‌ ಪಂದ್ಯಾಟದಲ್ಲಿ ಪ್ರಕೃತಿ ಚಿಕಿತ್ಸಾ ಕಾಲೇಜು ಸಾಧನೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ಬೆಂಗಳೂರು ಹಾಗೂ ಮಂಡ್ಯ ವೈದ್ಯಕೀಯ ಕಾಲೇಜು, ಮಂಡ್ಯ ಇವರ ಸಹಯೋಗದಲ್ಲಿ ಡಿ.10 ಮತ್ತು 11 ರಂದು ಆಯೋಜಿಸಲಾದ ರಾಜ್ಯಮಟ್ಟದ ಮಹಿಳೆಯರ ಹ್ಯಾಂಡ್‌ಬಾಲ್ ಪಂದ್ಯಾಟದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗವಿಜ್ಞಾನಗಳ ಮಹಾವಿದ್ಯಾಲಯ, ಉಜಿರೆ ಕಾಲೇಜು ತಂಡವು ಉತ್ತಮ ಪ್ರದರ್ಶನ ನೀಡಿ ದ್ವಿತೀಯ ಸ್ಥಾನವನ್ನು ಗಳಿಸಿದೆ.

ಸೆಮಿಫೈನಲ್ ಪಂದ್ಯಾಟದಲ್ಲಿ ಎಸ್‌ಎಸ್‌ಐಎಂಎಸ್, ದಾವಣಗೆರೆ ತಂಡವನ್ನು 4–2 ಗೋಲುಗಳ ಅಂತರದಲ್ಲಿ ಸೋಲಿಸಿ ಫೈನಲ್‌ಗೆ ಪ್ರವೇಶಿಸಿತು. ಫೈನಲ್ ಪಂದ್ಯದಲ್ಲಿ ಕಾಲೇಜು ತಂಡವು ರನ್ನರ್-ಅಪ್ ಸ್ಥಾನವನ್ನು ಪಡೆದುಕೊಂಡಿತು.

ಕಾಲೇಜಿನ ವಿದ್ಯಾರ್ಥಿನಿಯರಿಗೆ ಎಸ್‌ಡಿಎಂ ಸ್ಪೋರ್ಟ್ಸ್ ಕ್ಲಬ್‌ನ ಹ್ಯಾಂಡ್‌ಬಾಲ್ ತರಬೇತಿದಾರರಾದ ಸುದೀನ್ ಅವರು ತರಬೇತಿ ನೀಡಿದ್ದು, ಕಾಲೇಜಿನ ದೈಹಿಕ ನಿರ್ದೇಶಕ ಧರ್ಮೇಂದ್ರ ಕುಮಾರ್ ಅವರು ಸಮಗ್ರ ಮಾರ್ಗದರ್ಶನ ನೀಡಿದರು.

Related posts

ಹತ್ಯಡ್ಕ-ಅರಸಿನಮಕ್ಕಿ ಸರಕಾರಿ ಪ. ಪೂ. ಕಾಲೇಜಿಗೆ ಶೇ.96 ಫಲಿತಾಂಶ

Suddi Udaya

ಪಡುಮಲೆ ಪರವನ್ ಕುಟುಂಬಸ್ಥರ ವಾರ್ಷಿಕ ತಂಬಿಲ ಹಾಗೂ ಸನ್ಮಾನ

Suddi Udaya

ಉಪ್ಪಿನಂಗಡಿಯಲ್ಲಿ ಕಾರ್ಮಿಕ ಕೊಲೆ ಪ್ರಕರಣ : ಆರೋಪಿ ಕಲ್ಮಂಜ ನಿವಾಸಿ ಬಾಬು ಬಂಧನ

Suddi Udaya

ಸುಳ್ಯ ನಗರ ಪಂಚಾಯಿತಿ ಮುಖ್ಯಾಧಿಕಾರಿ ಎಂ.ಎಚ್‌. ಸುಧಾಕರ್ ವರ್ಗಾವಣೆ

Suddi Udaya

ಚುನಾವಣಾ ಕಾನೂನು ಸುವ್ಯವಸ್ಥೆ, ಕಾಪಾಡುವ ಹಿತದೃಷ್ಟಿಯಿಂದ : ಎ.17 ಸೋಮವಾರ ಬೆಳ್ತಂಗಡಿ ಸಂತೆಕಟ್ಟೆ‌ಯಿಂದ ಬಸ್ ನಿಲ್ದಾಣದವರೆಗೆ ರಾಷ್ಟ್ರೀಯ ಹೆದ್ದಾರಿಯ ಇಕ್ಕೆಲಗಳಲ್ಲಿ ವ್ಯಾಪಾರ ನಿಷೇಧ

Suddi Udaya

ಸಂಸದ ಬ್ರಿಜೇಶ್ ಚೌಟ, ವಿ.ಪ. ಶಾಸಕ ಕಿಶೋರ್ ಕುಮಾರ್ ಪುತ್ತೂರು, ಮಾಜಿ ಶಾಸಕ ಸಂಜೀವ ಮಠಂದೂರು ರವರಿಗೆ ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡ ಮತ್ತು ಸಭಾಭವನ ಉದ್ಘಾಟನೆಯ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya
error: Content is protected !!