25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯಮಟ್ಟದ ಹ್ಯಾಂಡ್‌ಬಾಲ್‌ ಪಂದ್ಯಾಟ : ಉಜಿರೆ ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗವಿಜ್ಞಾನಗಳ ಮಹಾವಿದ್ಯಾಲಯ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

ಉಜಿರೆ: ಮಹಿಳೆಯರ ರಾಜ್ಯಮಟ್ಟದ ಹ್ಯಾಂಡ್‌ಬಾಲ್‌ ಪಂದ್ಯಾಟದಲ್ಲಿ ಪ್ರಕೃತಿ ಚಿಕಿತ್ಸಾ ಕಾಲೇಜು ಸಾಧನೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ಬೆಂಗಳೂರು ಹಾಗೂ ಮಂಡ್ಯ ವೈದ್ಯಕೀಯ ಕಾಲೇಜು, ಮಂಡ್ಯ ಇವರ ಸಹಯೋಗದಲ್ಲಿ ಡಿ.10 ಮತ್ತು 11 ರಂದು ಆಯೋಜಿಸಲಾದ ರಾಜ್ಯಮಟ್ಟದ ಮಹಿಳೆಯರ ಹ್ಯಾಂಡ್‌ಬಾಲ್ ಪಂದ್ಯಾಟದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗವಿಜ್ಞಾನಗಳ ಮಹಾವಿದ್ಯಾಲಯ, ಉಜಿರೆ ಕಾಲೇಜು ತಂಡವು ಉತ್ತಮ ಪ್ರದರ್ಶನ ನೀಡಿ ದ್ವಿತೀಯ ಸ್ಥಾನವನ್ನು ಗಳಿಸಿದೆ.

ಸೆಮಿಫೈನಲ್ ಪಂದ್ಯಾಟದಲ್ಲಿ ಎಸ್‌ಎಸ್‌ಐಎಂಎಸ್, ದಾವಣಗೆರೆ ತಂಡವನ್ನು 4–2 ಗೋಲುಗಳ ಅಂತರದಲ್ಲಿ ಸೋಲಿಸಿ ಫೈನಲ್‌ಗೆ ಪ್ರವೇಶಿಸಿತು. ಫೈನಲ್ ಪಂದ್ಯದಲ್ಲಿ ಕಾಲೇಜು ತಂಡವು ರನ್ನರ್-ಅಪ್ ಸ್ಥಾನವನ್ನು ಪಡೆದುಕೊಂಡಿತು.

ಕಾಲೇಜಿನ ವಿದ್ಯಾರ್ಥಿನಿಯರಿಗೆ ಎಸ್‌ಡಿಎಂ ಸ್ಪೋರ್ಟ್ಸ್ ಕ್ಲಬ್‌ನ ಹ್ಯಾಂಡ್‌ಬಾಲ್ ತರಬೇತಿದಾರರಾದ ಸುದೀನ್ ಅವರು ತರಬೇತಿ ನೀಡಿದ್ದು, ಕಾಲೇಜಿನ ದೈಹಿಕ ನಿರ್ದೇಶಕ ಧರ್ಮೇಂದ್ರ ಕುಮಾರ್ ಅವರು ಸಮಗ್ರ ಮಾರ್ಗದರ್ಶನ ನೀಡಿದರು.

Related posts

ಮಡಂತ್ಯಾರು ಸಹಕಾರಿ ಸಂಘದ ಚುನಾವಣೆ: ಹೈಕೋರ್ಟು ತೀರ್ಪು ಪ್ರಕಟ ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ನಿರ್ದೇಶಕ ಸ್ಥಾನ 7 ರಿಂದ 9 ಕ್ಕೆ ಏರಿಕೆ

Suddi Udaya

ಉಜಿರೆಯಲ್ಲಿ ಮೆಸ್ಕಾಂ ಜನಸಂಪರ್ಕ ಸಭೆ

Suddi Udaya

ಎಸ್.ಡಿ.ಎಂ ಬಿ.ವೋಕ್ ರಿಟೇಲ್ ಮತ್ತು ಸಪ್ಲೈ ಚೈನ್ ಮ್ಯಾನೇಜ್‌ಮೆಂಟ್ ಹೊಸ ಮೈಲಿಗಲ್ಲು

Suddi Udaya

ವಿಶ್ವ ಪ್ರಜಾಪ್ರಭುತ್ವ ದಿನ ಪ್ರಯುಕ್ತ ವಿಮ್ ಬೆಳ್ತಂಗಡಿ ವತಿಯಿಂದ ಸೆಮಿನಾರ್ ಕಾರ್ಯಕ್ರಮ

Suddi Udaya

ದ.ಕ. ಜಿಲ್ಲಾ ಯೋಜನಾ ಸಮಿತಿಯ ಸಭೆ: ಉಜಿರೆ ಗ್ರಾ.ಪಂ. ಅಧ್ಯಕ್ಷೆ ಉಷಾಕಿರಣ್ ಕಾರಂತ್ ರಿಗೆ ಆಹ್ವಾನ

Suddi Udaya

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ವತಿಯಿಂದ ಭಾರತೀಯ ಸೇನೆಗೆ ನೇಮಕಗೊಂಡಿರುವ ಮನೋಹರ್ ಪೂಜಾರಿಯವರಿಗೆ ಗೌರವಾರ್ಪಣೆ

Suddi Udaya
error: Content is protected !!