September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಬೀದಿ ನಾಯಿ ಕಡಿತದ ಮತ್ತು ರೇಬಿಸ್ ರೋಗದ ಬಗ್ಗೆ ಮಾಹಿತಿ

ಉಜಿರೆ: ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಬೀದಿ ನಾಯಿ ಕಡಿತದ ಮತ್ತು ರೇಬಿಸ್ ರೋಗದ ಬಗ್ಗೆ ಮಾಹಿತಿ ಕಾರ್ಯಕ್ರಮವು ನಡೆಯಿತು.

ಇತ್ತೀಚೆಗೆ ಬೀದಿ ನಾಯಿಗಳ ದಾಳಿಯಿಂದ ಅನೇಕ ಮಕ್ಕಳು, ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದನ್ನು ಘನನ್ಯಾಯಾಲಯವು ಸುಮೋಟೋ ಕೇಸ್ ದಾಖಲಿಸಿದ್ದು, ಪ್ರತೀ ಇಲಾಖೆಗಳ ಜವಾಬ್ದಾರಿಯನ್ನು ಕೂಡ ನಿಗದಿಪಡಿಸಿದೆ. ನಮ್ಮ ಇಲಾಖೆ ಕೂಡಾ ಸೂಚನೆ ನೀಡಿದ್ದು ಜಾಗೃತಿ ಮೂಡಿಸಿ ವರದಿ ನೀಡುವಂತೆ ಸೂಚಿಸಿದೆ.ಪೋಷಕರ ಎಚ್ಚರಿಕೆ, ಇವುಗಳ ಬಗ್ಗೆ ಜಾಗೃತಿ ಮೂಡಿಸಿ. ಅಲ್ಲದೆ ಶಾಲಾ ಅಕ್ಕ ಪಕ್ಕದಲ್ಲಿ ಬೀದಿ ನಾಯಿಗಳು ಕಂಡುಬಂದರೆ ತಕ್ಷಣ ಗ್ರಾಮ ಪಂಚಾಯತ್, ಆರೋಗ್ಯ ಇಲಾಖೆ, ವೆಟರಿನರಿ ಇಲಾಖೆ, ಪೊಲೀಸ್ ಇಲಾಖೆಗೆ ಮಾಹಿತಿ ನೀಡಿ. ಅಲ್ಲದೆ, ಉಳಿಕೆಯಾದ ಬಿಸಿಯೂಟ, ತಿಂಡಿ ತಿನಸುಗಳನ್ನು ಶಾಲಾ ವರಾಂಡ ಅಥವಾ ಸುತ್ತ ಮುತ್ತ, ಎಲ್ಲೆಂದರಲ್ಲಿ ಚೆಲ್ಲದಂತೆ ಜಾಗ್ರತೆ ವಹಿಸಿ. ಕೆಲವೊಂದು ನಾಯಿಗಳು ಶಾಲಾ ವರಾಂಡದಲ್ಲೇ ಸುತ್ತುತ್ತಿರುತ್ತದೆ ಒಟ್ಟಾರೆಯಾಗಿ ನಮ್ಮ ಮಕ್ಕಳು ಬೀದಿನಾಯಿಗಳ ಆಕ್ರಮಣಕ್ಕೆ ತುತ್ತಾಗದಿರಲಿ ಎಂದು ಉಜಿರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನೀರಿಕ್ಷಣಾಧಿಕಾರಿ ಸ್ವತಂತ್ರ ರಾವ್ ಹಾಗೂ ಮುಂಡಾಜೆ ಪ್ರಾಥಮಿಕ ಆರೋಗ್ಯ ನೀರಿಕ್ಷಣಾಧಿಕಾರಿ ಗೌರೀಶ್ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ವಿದ್ಯಾ ಕಿರಣ್ ನಿಮ್ಮ ಪೋಷಕರಿಗೆ ಈ ಮಾಹಿತಿಯನ್ನು ತಿಳಿಸಿ ಎಂದರು.
ವೇದಿಕೆಯಲ್ಲಿ ಹಿರಿಯ ಶಿಕ್ಷಕ ರಾಧಾಕೃಷ್ಣ ಉಪಸ್ಥಿತರಿದ್ದರು. ಶಿಕ್ಷಕಿಯಾದ ಉಷಾ ವಂದಿಸಿದರು. ಲಲಿತಾ ಎಂ ಶೆಟ್ಟಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

Related posts

ಹಿರಿಯ ಮೀನು ವ್ಯಾಪಾರಿ, ಚಾರ್ಮಾಡಿ ಗ್ರಾ.ಪಂ ಮಾಜಿ ಸದಸ್ಯ ಜಿ.ಕೆ ಅಹ್ಮದ್‌ ಕುಂಞಿ(ಮೀನ್ ಮೋಣಾಕ) ಸೌದಿ ಅರೇಬಿಯಾದ ಮೆಕ್ಕಾದಲ್ಲಿ ನಿಧನ

Suddi Udaya

ಮುಂಡಾಜೆ ವಲಯದ ಕಾನರ್ಪ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ಗೆ ಅಭಿವೃದ್ಧಿ ಅಧಿಕಾರಿಯಾಗಿ ರಶ್ಮಿ ಬಿ.ಪಿ. ವರ್ಗಾವಣೆ

Suddi Udaya

ಕೆಲ್ಲಗುತ್ತು ಶ್ರೀ ಸತ್ಯಸಾರಮುಪ್ಪಣ್ಯ ಮತ್ತು ಸ್ವಾಮಿ ಕೊರಗಜ್ಜ ದೈವದ ವಾರ್ಷಿಕ ನೇಮೋತ್ಸವ

Suddi Udaya

ತಣ್ಣೀರುಪಂತ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಸಾಧನಾ ಪ್ರಶಸ್ತಿ

Suddi Udaya

ಮಾಜಿ ಮುಖ್ಯ ಮಂತ್ರಿ ಹೆಚ್. ಡಿ ಕುಮಾರ ಸ್ವಾಮಿ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ

Suddi Udaya
error: Content is protected !!