25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸರಕಾರದಿಂದ ಮಂಜೂರುಗೊಂಡಿರುವ ಜಾಗವನ್ನು ಸವೆ೯ ನಡೆಸಲು ನಾಗರಿಕರ ಆಕ್ಷೇಪಣೆ: ಶಿಶಿಲ ಗ್ರಾಮಸ್ಥರಿಂದ ಉಪ್ಪಿನಂಗಡಿ ಉಪ ವಲಯಾಣ್ಯಾಧಿಕಾರಿಗೆ ಮನವಿ

ಶಿಶಿಲ: ಕಳೆಂಜದ ಸರ್ವೇ ನಂಬರ್ 309ರ ಸರ್ವೇ ಕಾರ್ಯ, ಶಿಶಿಲ ಭಾಗದ ಅರಣ್ಯ ಪ್ರದೇಶದಲ್ಲಿ ನಡೆಯುತ್ತಿದ್ದು ಈ ಸಂದರ್ಭದಲ್ಲಿ ಅರಣ್ಯ ಇಲಾಖೆಯವರು, ಸರ್ವೇ ಅಧಿಕಾರಿಗಳು ತಮ್ಮ ಪಟ್ಟ ಜಮೀನುಗಳಲ್ಲಿ ಸರ್ವೇ ನಡೆಸಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದರಿಂದ ಬೇಸತ್ತ ಅಲ್ಲಿನ ನಿವಾಸಿಗಳು ಉಪ್ಪಿನಂಗಡಿ ಉಪವಲಯಾರಣ್ಯಧಿಕಾರಿಗೆ ದೂರು ನೀಡಿದ್ದು ದೂರಿನ ಪತ್ರದಲ್ಲಿ ಶಿಶಿಲ ಗ್ರಾಮದ ಹೊಳೆಗಂಡಿ, ದೇನೋಡಿ ಭಾಗದಲ್ಲಿ ಅಲ್ಲಿನ 80 ಕುಟುಂಬಗಳಿಗೆ 1966ರಲ್ಲಿ ಅಕ್ರಮ ಸಕ್ರಮದ ಅಡಿಯಲ್ಲಿ ಜಮೀನು ಮಂಜೂರಾಗಿದ್ದು ಅದು ಅರಣ್ಯದಿಂದ ಕಂದಾಯಕ್ಕೆ ವಿಂಗಡಣೆಯಾಗಿರುತ್ತದೆ. ಆದ್ದರಿಂದ ಸರಕಾರವು ಮಂಜೂರು ಮಾಡಿರುವ ಭೂಮಿಯನ್ನು ಹೊರತುಪಡಿಸಿ ತಮ್ಮ ಅರಣ್ಯ ಭಾಗವನ್ನು ಮಾತ್ರ ಸರ್ವೇ ಮಾಡಬೇಕೆಂಬುದು ನಮ್ಮ ಮನವಿ ಸರಕಾರದಿಂದ ದೇನೋಡಿ ಭಾಗದಲ್ಲಿ ಮಂಜೂರಾಗಿರುವ ಜಮೀನಿಗೆ ಅರಣ್ಯ ಇಲಾಖೆಯ ಅಧಿಕಾರಿಗಳು ಯಾವುದೇ ಮಾಹಿತಿ ನೀಡದೆ ಅಕ್ರಮವಾಗಿ ಪ್ರವೇಶ ಮಾಡಿ ಸರ್ವೇ ಮಾಡಿದ್ದು ಆ ಸರ್ವೇ ಕೂಡ ಅಸಮರ್ಪಕವಾಗಿದೆ.

ಇನ್ನೂ ಮುಂದಿನ ದಿನಗಳಲ್ಲಿ ಶಿಶಿಲ ಭಾಗದಲ್ಲಿ ಸರಕಾರದಿಂದ ಮಂಜೂರು ಗೊಂಡಿರುವ ಜಾಗವನ್ನು ಯಾವುದೇ ರೀತಿ ಸರ್ವೇ ನಡೆಸದಂತೆ ಆಕ್ಷೇಪಣೆ ಇರುತ್ತದೆ ಎಂದು ಉಪ್ಪಿನಂಗಡಿ ಉಪವಲಯಾರಣ್ಯಧಿಕಾರಿಗೆ ಶಿಶಿಲ ಗ್ರಾಮಸ್ಥರು ಮನವಿ ಸಲ್ಲಿಸಿದ್ದಾರೆ.

Related posts

ಅರಸಿನಮಕ್ಕಿ ಕಾಪು ಉಪ್ಪರಡ್ಕ ದೈವಸ್ಥಾನದಲ್ಲಿ ದೈವಗಳ ವಾರ್ಷಿಕ ಜಾತ್ರೆ

Suddi Udaya

ಬೆಳ್ತಂಗಡಿ: ಮಗುವಿನ ನೆರವಿಗಾಗಿ ರಾಜಕೇಸರಿ ಸೇವಾ ಟ್ರಸ್ಟ್ ನಿಂದ ಪೆನ್ನು ಮಾರಾಟ

Suddi Udaya

ಮೂಡುಕೋಡಿ: ಆಲಡ್ಕ ನಿವಾಸಿ ಜಿನ್ನಪ್ಪ ಪೂಜಾರಿ ನಿಧನ

Suddi Udaya

ಮುಂಡಾಜೆ: ಔಷಧೀಯ ಮೂಲಿಕಾ ವನ ನಿರ್ಮಾಣ 

Suddi Udaya

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಬೆಳ್ತಂಗಡಿ ಶಾಖಾ ಕಟ್ಟಡದಲ್ಲಿ ಆ. 27 ರಂದು ಹೊಸ ಎಟಿಎಂ ಮತ್ತು ಲಿಪ್ಟ್ ನ ಉದ್ಘಾಟನೆ

Suddi Udaya

ಅಳದಂಗಡಿ ಬೆಟ್ಟದ ಬಸದಿ ಭಗವಾನ್ ಶ್ರೀ ಬ್ರಹ್ಮದೇವರ ಬಸದಿ, ಜೀರ್ಣೋದ್ಧಾರಕ್ಕೆ ಸರ್ಕಾರದಿಂದ 50 ಲಕ್ಷ ಮತ್ತು ಸವಣಾಲು ಶ್ರೀ ಆದಿನಾಥ ಸ್ವಾಮಿ ಬಸದಿ, ಜೀರ್ಣೋದ್ಧಾರಕ್ಕೆ 9 ಲಕ್ಷ ಅನುದಾನ ಮಂಜೂರು: ರಕ್ಷಿತ್ ಶಿವರಾಂ

Suddi Udaya
error: Content is protected !!