23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಂತರಾಷ್ಟ್ರೀಯ ಉದ್ಯಮಿ,‌ ಧಾರ್ಮಿಕ ಮುಖಂಡ ಕುಟ್ಟೂರ್ ಹಾಜಿ ಬೆಳ್ತಂಗಡಿಗೆ ಭೇಟಿ

ಬೆಳ್ತಂಗಡಿ: ಕೇರಳದ ಪ್ರಖ್ಯಾತ “ನಾಲೆಡ್ಜ್ ಸಿಟಿ” ಇಲ್ಲಿನ ಗ್ರ್ಯಾಂಡ್ ಮಸ್ಜಿದ್ ಆಫ್ ಇಂಡಿಯಾ “ಜಾಮಿಯಲ್ ಫುತೂಹ್” ಇದರ ಚೇರ್ಮೆನ್, ಅಂತಾರಾಷ್ಟ್ರೀಯ ಉದ್ಯಮಿ ಸಿ.ಪಿ ಅಬ್ದುಲ್ ರಹಿಮಾನ್ ಹಾಜಿ (ಕೂಟ್ಟೂರ್ ಹಾಜಿ) ಅವರು ಡಿ.14 ರಂದು ಬೆಳ್ತಂಗಡಿಗೆ ಭೇಟಿ ನೀಡಿದರು.

ಅವರನ್ನು ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ನಾಯಕರಾದ ಅಬ್ಬೋನು ಮದ್ದಡ್ಕ, ಖ್ಯಾತ ಉದ್ಯಮಿ ಉಸ್ಮಾನ್ ಹಾಜಿ ಆಲಂದಿಲ, ಹಿರಿಯ ಪತ್ರಕರ್ತ ಹಾಗೂ ಎಸ್‌ವೈಎಸ್ ಝೋನ್ ಮಾಜಿ ಪ್ರಧಾನ ಕಾರ್ಯದರ್ಶಿ ಅಶ್ರಫ್ ಆಲಿಕುಂಞಿ ಮುಂಡಾಜೆ ಬರಮಾಡಿಕೊಂಡು ಗೌರವಿಸಿದರು.

ಸಿ.ಪಿ‌ ಅಬ್ದುಲ್ ರಹಿಮಾನ್ ಅವರು ಅಬುದಾಬಿಯ ಬನಿಯಾಸ್ ಸ್ಲೈಕ್ ಗ್ರೂಪ್ ಆಫ್ ಕಂಪೆನಿ ಹಾಗೂ ಫಾಲ್ಕನ್ ಇಂಡಸ್ಟ್ರೀಸ್
ಪ್ರೈ ಲಿಮಿಟೆಡ್ ಇದರ ಸಂಸ್ಥಾಪಕರು ಹಾಗೂ ಚೇರ್ಮೆನ್ ಕೂಡ ಆಗಿದ್ದಾರೆ.


ಇಂಡಿಯನ್ ಗ್ರ್ಯಾಂಡ್ ಮುಫ್ತಿ ಎ.ಪಿ ಉಸ್ತಾದ್ ಅವರ ಅತ್ಯಾಪ್ತರಲ್ಲಿ ಓರ್ವರಾಗಿರುವ ಅವರು ತನ್ನ ಕರ್ನಾಟಕ ಪ್ರವಾಸದ ಮಧ್ಯೆ ಮಾಣಿ ದಾರುಲ್ ಇರ್ಷಾದ್ ಸಂಸ್ಥೆಗೆ ಹಾಗೂ ತೈಬಾ ಗಾರ್ಡನ್ ಈಶ್ವರಮಂಗಳ ಇಲ್ಲಿಗೂ ಭೇಟಿ ನೀಡಿ ಬಳಿಕ ಚಿಕ್ಕಮಗಳೂರಿಗೆ ನಿರ್ಗಮಿಸಿದರು.

Related posts

ಎಸ್‌ಡಿಎಂ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಎಸ್‌ಡಿಎಂ ಕಾಲೇಜು ಆಫ್ ನ್ಯಾಚುರೋಪತಿ ಸಂಯುಕ್ತ ಆಶ್ರಯದಲ್ಲಿ ವಿಶ್ವ ಏಡ್ಸ್ ದಿನದ ಅಂಗವಾಗಿ ಜಾಗೃತಿ ಕಾರ್ಯಕ್ರಮ

Suddi Udaya

ಶೈಕ್ಷಣಿಕ ವರ್ಷದಲ್ಲಿ 8 ರಿಂದ 10ನೇ ತರಗತಿ ಮಕ್ಕಳಿಗೆ ತೆರೆದ ಪುಸ್ತಕ ಪರೀಕ್ಷೆ

Suddi Udaya

ಮಾಂಡೋವಿ ಮೋಟಾರ್ಸ್ ಗೆ 40 ವರ್ಷದ ಸಂಭ್ರಮ, ನೆಚ್ಚಿನ ಕಾರು ಖರೀದಿಗೆ ಸುವರ್ಣವಕಾಶ

Suddi Udaya

ವೇಣೂರು- ಪೆರ್ಮುಡ ಸೂರ್ಯ ಚಂದ್ರ ಜೋಡುಕರೆ ಕಂಬಳ ಸಮಿತಿಯ ಗೌರವಾಧ್ಯಕ್ಷರಾಗಿ ರಕ್ಷಿತ್ ಶಿವರಾಂ ಆಯ್ಕೆ

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜು – ರಾಷ್ಟ್ರೀಯ ಸೇವಾ ಯೋಜನೆಯ ನಾಯಕ ಸುದರ್ಶನ ನಾಯಕ್ ಹಾಗೂ ನಾಯಕಿ ದಕ್ಷಾ ಆಯ್ಕೆ

Suddi Udaya

ಅನರ್ಹ ಬಿಪಿಎಲ್ ಕಾರ್ಡ್ ಪತ್ತೆ ಪ್ರಕ್ರಿಯೆಗೆ ಇಲಾಖೆಯಿಂದ ಕ್ರಮ: ತಾಲೂಕಿನಲ್ಲಿ 7,024 ಬಿಪಿಎಲ್ ಪಡಿತರ ಚೀಟಿಗಳ ಪರಿಶೀಲನೆ: 53 ಕುಟುಂಬಗಳ ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಪರಿವರ್ತನೆ

Suddi Udaya
error: Content is protected !!