July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಂತರಾಷ್ಟ್ರೀಯ ಉದ್ಯಮಿ,‌ ಧಾರ್ಮಿಕ ಮುಖಂಡ ಕುಟ್ಟೂರ್ ಹಾಜಿ ಬೆಳ್ತಂಗಡಿಗೆ ಭೇಟಿ

ಬೆಳ್ತಂಗಡಿ: ಕೇರಳದ ಪ್ರಖ್ಯಾತ “ನಾಲೆಡ್ಜ್ ಸಿಟಿ” ಇಲ್ಲಿನ ಗ್ರ್ಯಾಂಡ್ ಮಸ್ಜಿದ್ ಆಫ್ ಇಂಡಿಯಾ “ಜಾಮಿಯಲ್ ಫುತೂಹ್” ಇದರ ಚೇರ್ಮೆನ್, ಅಂತಾರಾಷ್ಟ್ರೀಯ ಉದ್ಯಮಿ ಸಿ.ಪಿ ಅಬ್ದುಲ್ ರಹಿಮಾನ್ ಹಾಜಿ (ಕೂಟ್ಟೂರ್ ಹಾಜಿ) ಅವರು ಡಿ.14 ರಂದು ಬೆಳ್ತಂಗಡಿಗೆ ಭೇಟಿ ನೀಡಿದರು.

ಅವರನ್ನು ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ನಾಯಕರಾದ ಅಬ್ಬೋನು ಮದ್ದಡ್ಕ, ಖ್ಯಾತ ಉದ್ಯಮಿ ಉಸ್ಮಾನ್ ಹಾಜಿ ಆಲಂದಿಲ, ಹಿರಿಯ ಪತ್ರಕರ್ತ ಹಾಗೂ ಎಸ್‌ವೈಎಸ್ ಝೋನ್ ಮಾಜಿ ಪ್ರಧಾನ ಕಾರ್ಯದರ್ಶಿ ಅಶ್ರಫ್ ಆಲಿಕುಂಞಿ ಮುಂಡಾಜೆ ಬರಮಾಡಿಕೊಂಡು ಗೌರವಿಸಿದರು.

ಸಿ.ಪಿ‌ ಅಬ್ದುಲ್ ರಹಿಮಾನ್ ಅವರು ಅಬುದಾಬಿಯ ಬನಿಯಾಸ್ ಸ್ಲೈಕ್ ಗ್ರೂಪ್ ಆಫ್ ಕಂಪೆನಿ ಹಾಗೂ ಫಾಲ್ಕನ್ ಇಂಡಸ್ಟ್ರೀಸ್
ಪ್ರೈ ಲಿಮಿಟೆಡ್ ಇದರ ಸಂಸ್ಥಾಪಕರು ಹಾಗೂ ಚೇರ್ಮೆನ್ ಕೂಡ ಆಗಿದ್ದಾರೆ.


ಇಂಡಿಯನ್ ಗ್ರ್ಯಾಂಡ್ ಮುಫ್ತಿ ಎ.ಪಿ ಉಸ್ತಾದ್ ಅವರ ಅತ್ಯಾಪ್ತರಲ್ಲಿ ಓರ್ವರಾಗಿರುವ ಅವರು ತನ್ನ ಕರ್ನಾಟಕ ಪ್ರವಾಸದ ಮಧ್ಯೆ ಮಾಣಿ ದಾರುಲ್ ಇರ್ಷಾದ್ ಸಂಸ್ಥೆಗೆ ಹಾಗೂ ತೈಬಾ ಗಾರ್ಡನ್ ಈಶ್ವರಮಂಗಳ ಇಲ್ಲಿಗೂ ಭೇಟಿ ನೀಡಿ ಬಳಿಕ ಚಿಕ್ಕಮಗಳೂರಿಗೆ ನಿರ್ಗಮಿಸಿದರು.

Related posts

ಗಿರೀಶ್ ಮಟ್ಟಣ್ಣವರ್ ಮತ್ತು ಕುಡ್ಲ ರಾಂಪೇಜ್ ಯೂಟ್ಯೂಬ್ ಚಾನಲ್ ವಿರುದ್ಧ ಪ್ರಕರಣ ದಾಖಲು

Suddi Udaya

ಯುವವಾಹಿನಿ ವೇಣೂರು ಘಟಕದ ವಿನೂತನ ಯೋಜನೆ “ಬೆಳಕು” ಕಾರ್ಯಕ್ರಮ

Suddi Udaya

ಮುಂಡಾಜೆ: ಡಿಜಿಟಲ್ ಸಾಕ್ಷರತಾ ಕಾರ್ಯಾಗಾರ

Suddi Udaya

ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ.229.55 ಕೋಟಿ ವ್ಯವಹಾರ-ರೂ.82.10 ಲಕ್ಷ ಲಾಭ- ಶೇ 10.50 ಡಿವಿಡೆಂಡ್

Suddi Udaya

ಡಿ.ಕೆ.ಆರ್. ಡಿ.ಎಸ್ ಬೆಳ್ತಂಗಡಿ ನೇತೃತ್ವದಲ್ಲಿ ಕ್ಯಾನ್ಸರ್ ಜನಜಾಗೃತಿ ಕಾರ್ಯಕ್ರಮ ಹಾಗೂ ಧನ ಸಹಾಯ ಸಂಗ್ರಹಣಾ ಅಭಿಯಾನ

Suddi Udaya

ಗುಂಡೂರಿ: ಗುಡ್ಡ ಜರಿದು ಮನೆ ಬದಿಯಲ್ಲಿ ಬಿದ್ದ ಮಣ್ಣಿನ ರಾಶಿಯ ತೆರವು ಕಾರ್ಯ

Suddi Udaya
error: Content is protected !!