37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಲ್ಪಾಡಿ ಸ.ಕಿ.ಪ್ರಾ. ಶಾಲೆಯಲ್ಲಿ ಶಾಲೆಯ ಅಭಿವೃದ್ಧಿಗಾಗಿ ‘ವಿದ್ಯಾನಿಧಿ’ ಯೋಜನೆಗೆ ಚಾಲನೆ

ಬೆಳಾಲು: ಇಲ್ಲಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೊಲ್ಪಾಡಿಯಲ್ಲಿ ಶಾಲಾ ಹಳೆ ವಿದ್ಯಾರ್ಥಿ ಸಂಘದ ನೇತೃತ್ವದಲ್ಲಿ ಶಾಲೆಯ ಅಭಿವೃದ್ಧಿಗಾಗಿ ‘ವಿದ್ಯಾನಿಧಿ’ ಯೋಜನೆಯನ್ನು ಡಿ.14 ರಂದು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಯಲ್ಲಿ ಲೋಕಾರ್ಪಣೆ ಮಾಡಲಾಯಿತು.

ವಿದ್ಯಾನಿಧಿಯನ್ನು ಲೋಕಾರ್ಪಣೆ ಮಾಡಿದ ಕ್ಷೇತ್ರದ ಧರ್ಮದರ್ಶಿ ಹರೀಶ್ ಆರಿಕೋಡಿಯವರು ಮಾತನಾಡಿ,’ ಶಾಲೆ ಎಂಬ ದೇವಾಲಯದಲ್ಲಿ ಎಲ್ಲಾ ಜಾತಿ, ಜನಾಂಗ, ಧರ್ಮದ ಮಕ್ಕಳು ವಿದ್ಯಾಭ್ಯಾಸವನ್ನು ಮಾಡುತ್ತಾರೆ. ಶಾಲೆ ಅಭಿವೃದ್ಧಿ ಹೊಂದಿದಾಗ ಇಡೀ ಊರೇ ಅಭಿವೃದ್ಧಿ ಆಗುತ್ತದೆ. ಹಳೆ ವಿದ್ಯಾರ್ಥಿಗಳ ಈ ಕಾರ್ಯ ಅತ್ಯಂತ ಶ್ರೇಷ್ಠ ವಾದದ್ದು’ ಎಂದು ಶುಭ ಹಾರೈಸಿದರು ಮತ್ತು ಮೊದಲ ದೇಣಿಗೆಯಾಗಿ ಕ್ಷೇತ್ರದ ವತಿಯಿಂದ ದೇಣಿಗೆಯ ಚೆಕ್ ಹಸ್ತಾಂತರ ಮಾಡಿದರು.

ಕಳೆದ 63 ವರ್ಷಗಳ ಹಿಂದೆ ಬೆಳಾಲು ಗ್ರಾಮದಲ್ಲೇ ಮೊಟ್ಟ ಮೊದಲನೆಯ ಶಾಲೆಯಾಗಿ ಸ್ಥಾಪನೆಯಾದ ಈ ಶಾಲೆ ಇತ್ತೀಚಿಗೆ ಮಕ್ಕಳ ಸಂಖ್ಯೆಯಲ್ಲಿ ಕೊರತೆಯಾಗುತ್ತಿರುವ ಸಂದರ್ಭದಲ್ಲಿ ಶಾಲೆಯನ್ನು ಇನ್ನಷ್ಟು ಅಭಿವೃದ್ಧಿಗೊಳಿಸಿ, ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಳೆ ವಿದ್ಯಾರ್ಥಿಗಳ ಸೇರಿಕೊಂಡು ‘ವಿದ್ಯಾನಿಧಿ’ಎಂಬ ಹೊಸದಾದ ಯೋಜನೆಯನ್ನು ಪ್ರಾರಂಭಿಸುತ್ತಿದ್ದು,ಇದರಲ್ಲಿ ಶಾಲಾ ಹಳೆ ವಿದ್ಯಾರ್ಥಿಗಳು, ವಿದ್ಯಾಭಿಮಾನಿಗಳು ತಮ್ಮ ದುಡಿಮೆಯ ಒಂದಂಶವನ್ನು ಶಾಲಾ ಚಟುವಟಿಕೆಗಳಿಗೆ ಪ್ರತಿ ತಿಂಗಳು ಅಥವಾ ವರ್ಷಕ್ಕೊಮ್ಮೆ ಯೋಜನೆಯ ಖಾತೆಗೆ ಸ್ಕ್ಯಾನ್ ಮಾಡುವ ಅವಕಾಶ ಕಲ್ಪಿಸಲಾಗಿದೆ.


ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಸುರೇಶ್ ಮಾಚಾರ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಲೋಕೇಶ್ ಓಣಾಜೆ, ಉಪಾಧ್ಯಕ್ಷರಾದ ಲೋಕೇಶ್ ಮಂಡಾಲ್, ಕೋಶಾಧಿಕಾರಿ ಕರಿಯಣ್ಣ ಬೇರಿಕೆ ಹಾಗೂ ಶಾಲಾ ಎಸ್‌.ಡಿ.ಎಂ.ಸಿ.ಅಧ್ಯಕ್ಷರಾದ ಹರೀಶ್ ಕೆರೆಕೋಡಿ ಮತ್ತು ಪೋಷಕರು, ಶಾಲಾ ಹಳೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಕೆಂಪುಕಲ್ಲು-ಮರಳು ಸಮಸ್ಯೆ, ಟಿಪ್ಪರ್ ಚಾಲಕ-ಮಾಲಕರು ಕಂಗಾಲು

Suddi Udaya

ಖೋ- ಖೋ ಪಂದ್ಯಾಟ: ನಡ ಪದವಿ ಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆಯ ಖಾಸಗಿ ಲಾಡ್ಜ್ ನಲ್ಲಿ ವ್ಯಕ್ತಿ ಆತ್ಮಹತ್ಯೆ

Suddi Udaya

ನರಸಿಂಹಗಡದಲ್ಲಿ ಶ್ರೀ ಲಕ್ಷೀ ನರಸಿಂಹ ಉತ್ಸವ-ಧರ್ಮ ದೈವಗಳ ಪರ್ವಸೇವೆ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಕುಂಭಶ್ರೀ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ತಾಲೂಕು ಮರಾಟಿ ಸಮಾಜ ಸೇವಾ ಸಂಘದ ಮಾಸಿಕ ಸಭೆ

Suddi Udaya
error: Content is protected !!