July 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಪಿಲಿಚಾಮುಂಡಿಕಲ್ಲಿನಲ್ಲಿ ದೊಂಪದ ಬಲಿ ಉತ್ಸವ

ಗುರುವಾಯನಕೆರೆ: ಕುವೆಟ್ಟು ಗ್ರಾಮ ಗುರುವಾಯನಕೆರೆ ಪಿಲಿಚಾಮುಂಡಿ ಕಲ್ಲಿನಲ್ಲಿ ದೊಂಪದಬಲಿ ಉತ್ಸವ ಸಮಿತಿ ಇದರ ಆಶ್ರಯದಲ್ಲಿ ವರ್ಷಂಪ್ರತಿ ನಡೆಯುವ ಕಾರಣಿಕ ದೈವ ಶ್ರೀ ಪಿಲಿಚಾಮುಂಡಿ ದೈವದ ದೊಂಪದ ಬಲಿ ಉತ್ಸವವು ಡಿ.13ರಂದು ಸಂಭ್ರಮ ಸಡಗರದಿಂದ ನಡೆಯಿತು.

ಸಂಜೆ 7ಕ್ಕೆ ಪಾಡ್ಯಾರುಬೀಡು ಮನೆಯಿಂದ ಭವ್ಯವಾದ ಮೆರವಣಿಗೆಯಲ್ಲಿ ದೈವದ ಭಂಡಾರವನ್ನು ಪಿಲಿಚಾಮುಂಡಿ ಕಲ್ಲಿಗೆ ತರಲಾಯಿತು. ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ರಾತ್ರಿ 10ರಿಂದ ರಾತ್ರಿ 2 ಗಂಟೆಯ ತನಕ ಕಾರಣಿಕ ದೈವ ಶ್ರೀ ಪಿಲಿಚಾಮುಂಡಿ ದೈವದ ದೊಂಪದಬಲಿ ಉತ್ಸವ ಅತ್ಯಂತ ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮದಲ್ಲಿ ಊರು ಹಾಗೂ ಪರವೂರಿನಿಂದ ಬೃಹತ್ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿ ಶ್ರೀ ಪಿಲಿಚಾಮುಂಡಿ ದೈವದ ಗಂಧಪ್ರಸಾದವನ್ನು ಸ್ವೀಕರಿಸಿ ಧನ್ಯತೆಯನ್ನು ಪಡೆದರು.
ಸಮಿತಿಯ ಗೌರವಾಧ್ಯಕ್ಷರು ಅಧ್ಯಕ್ಷರು, ಪದಾಧಿಕಾರಿಗಳು ಸಹಕಾರ ನೀಡಿದರು.

Related posts

ನಡ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಓಡಿಲ್ನಾಳ: ವಲೇರಿಯನ್ ಪಾಯಸ್ ನಿಧನ

Suddi Udaya

ಕಳೆಂಜ ಗ್ರಾ.ಪಂ. ಮಾಜಿ ಸದಸ್ಯ ಕುಶಾಲಪ್ಪ ಗೌಡ ರಿಗೆ ಮಾತೃ ವಿಯೋಗ

Suddi Udaya

ಸ್ಕೂಟರ್-ಕಾರು ಅಪಘಾತ : ಸ್ಕೂಟರ್ ಸವಾರೆ ಸಾವು, ಗುರುವಾಯನಕೆರೆ ಸಹ ಸವಾರೆಗೆ ಗಂಭೀರ ಗಾಯ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಸಂತ ತೆರೇಸಾ ಪ್ರೌಢಶಾಲೆಯಲ್ಲಿ ಮಾದಕ ವಸ್ತು ವಿರೋಧಿ ದಿನಾಚರಣೆ ಪ್ರಯುಕ್ತ ಮಾಹಿತಿ ಕಾರ್ಯಾಗಾರ

Suddi Udaya

ಆಳ್ವಾಸ್ ಪದವಿ ಕಾಲೇಜಿನಲ್ಲಿ ವಾರ್ಷಿಕ ಕಾರ್ಯಕ್ರಮ ‘ಇನಾಮು 2026’

Suddi Udaya
error: Content is protected !!