25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೆಸಿಐ ಅಭಿವೃದ್ಧಿ ಮತ್ತು ಬೆಳವಣಿಗೆ ವಿಭಾಗದ ವಲಯ ನಿರ್ದೇಶಕರಾಗಿ ರಂಜಿತ್ ಎಚ್ ಡಿ ಬಳಂಜ ಆಯ್ಕೆ

ಬೆಳ್ತಂಗಡಿ: ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳನೊಳಗೊಂಡ ಜೆಸಿಐ ಭಾರತದ ವಲಯ 15 ರ 2026 ನೇ ಸಾಲಿನ ಅಭಿವೃದ್ಧಿ ಮತ್ತು ಬೆಳವಣಿಗೆ (G&D) ವಿಭಾಗದ ವಲಯ ನಿರ್ದೇಶಕರಾಗಿ ಆಯ್ಕೆಗೊಂಡರು.

2015 ರಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮುಖಾಂತರ ಜೆಸಿಐ ಸಂಸ್ಥೆಗೆ ಪಾದಾರ್ಪಣೆಗೊಂಡು, 2024ನೇ ವರ್ಷ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಯ ಯಶಸ್ವಿ ಅಧ್ಯಕ್ಷರಾಗಿ ವರ್ಷಪೂರ್ತಿ ಹಲವಾರು ಕಾರ್ಯಕ್ರಮಗಳೊಂದಿಗೆ ಸಮಾಜಮುಖಿಯಾಗಿ ತೊಡಗಿಸಿಕೊಂಡು ವಲಯ ಸಮ್ಮೇಳನದಲ್ಲಿ ಅತ್ಯುತ್ತಮ ಘಟಕಾಧ್ಯಕ್ಷ ಪ್ರಶಸ್ತಿಯನ್ನು ಪಡೆದುಕೊಂಡವರು. ಬಳಂಜ ಶಾಲಾ ಅಮೃತ ಮಹೋತ್ಸವದ ಸವಿನೆನಪಿಗಾಗಿ ಜೆಸಿಐ ಭಾರತದ ರಾಷ್ಟ್ರಧ್ಯಕ್ಷರನ್ನು ಬಳಂಜ ಶಾಲೆಗೆ ಬರಮಾಡಿಕೊಂಡು ಸುಮಾರು ಒಂದು ಲಕ್ಷ ವೆಚ್ಚದ ಕೊಡುಗೆಗಳನ್ನು ಬಳಂಜ ಶಾಲೆ ಹಾಗೂ ಇತರ ಸಂಸ್ಥೆ ಗಳಿಗೆ ನೀಡಿರುತ್ತಾರೆ.

ಈ ವರ್ಷ ವಲಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿ 11 ಘಟಕಗಳ ಮೇಲುಸ್ತುವಾರಿಯನ್ನು ಯಶಸ್ವಿಯಾಗಿ ನಿಭಾಯಿಸಿಕೊಂಡು ಒಂದು ಹೊಸ ಘಟಕ ವನ್ನು ಕೂಡ ನೀಡುವಲ್ಲಿ ಯಶಸ್ವಿಯಾಗಿದ್ದರೆ.

ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಇವರು ಕಳೆದ 13 ವರ್ಷಗಳಿಂದ ಮೂಡುಬಿದ್ರಿಯ ಮೈಟ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Related posts

ಲಾಯಿಲ: ಆದರ್ಶ ನಗರದ ನಿವಾಸಿ ಶ್ರೀಮತಿ ಜಯಂತಿ ಹೆಗ್ಡೆ ನಿಧನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮೂಡಿಗೆರೆ ಶಾಸಕಿ ನಯನ ಮೋಟಮ್ಮ ಹಾಗೂ ಧಾರ್ಮಿಕ ಪರಿಷತ್ ರಾಜ್ಯ ಸದಸ್ಯೆ ಶ್ರೀಮತಿ ಮಲ್ಲಿಕಾ ಪ್ರಶಾಂತ್ ಪಕ್ಕಳ ಭೇಟಿ

Suddi Udaya

ಉಜಿರೆ: ಸರಳ ಸಂಸ್ಕೃತ ವ್ಯಾಕರಣ ಪುಸ್ತಕ ಬಿಡುಗಡೆ

Suddi Udaya

ಬಳಂಜ ಬೊಂಟ್ರೋಟ್ಟು ಕ್ಷೇತ್ರದ ಕಲಶಾಭಿಷೇಕದ ಕೂಪನ್ ಬಿಡುಗಡೆ: ಡಿ28 ರಿಂದ 31 ರವರೆಗೆ ಕಲಶಾಭಿಷೇಕ, ದೈವಗಳಿಗೆ ನರ್ತನ ಸೇವೆ, ಚಂಡಿಕಾಹೋಮ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಮಚ್ಚಿನ ಸರ್ಕಾರಿ ಪ್ರೌಢ ಶಾಲೆಗೆ ಹಸಿರು ನೈರ್ಮಲ್ಯ ಅಭ್ಯುದಯ ಪ್ರಶಸ್ತಿ ಪ್ರದಾನ

Suddi Udaya
error: Content is protected !!