23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೆಸಿಐ ಅಭಿವೃದ್ಧಿ ಮತ್ತು ಬೆಳವಣಿಗೆ ವಿಭಾಗದ ವಲಯ ನಿರ್ದೇಶಕರಾಗಿ ರಂಜಿತ್ ಎಚ್ ಡಿ ಬಳಂಜ ಆಯ್ಕೆ

ಬೆಳ್ತಂಗಡಿ: ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳನೊಳಗೊಂಡ ಜೆಸಿಐ ಭಾರತದ ವಲಯ 15 ರ 2026 ನೇ ಸಾಲಿನ ಅಭಿವೃದ್ಧಿ ಮತ್ತು ಬೆಳವಣಿಗೆ (G&D) ವಿಭಾಗದ ವಲಯ ನಿರ್ದೇಶಕರಾಗಿ ಆಯ್ಕೆಗೊಂಡರು.

2015 ರಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮುಖಾಂತರ ಜೆಸಿಐ ಸಂಸ್ಥೆಗೆ ಪಾದಾರ್ಪಣೆಗೊಂಡು, 2024ನೇ ವರ್ಷ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಯ ಯಶಸ್ವಿ ಅಧ್ಯಕ್ಷರಾಗಿ ವರ್ಷಪೂರ್ತಿ ಹಲವಾರು ಕಾರ್ಯಕ್ರಮಗಳೊಂದಿಗೆ ಸಮಾಜಮುಖಿಯಾಗಿ ತೊಡಗಿಸಿಕೊಂಡು ವಲಯ ಸಮ್ಮೇಳನದಲ್ಲಿ ಅತ್ಯುತ್ತಮ ಘಟಕಾಧ್ಯಕ್ಷ ಪ್ರಶಸ್ತಿಯನ್ನು ಪಡೆದುಕೊಂಡವರು. ಬಳಂಜ ಶಾಲಾ ಅಮೃತ ಮಹೋತ್ಸವದ ಸವಿನೆನಪಿಗಾಗಿ ಜೆಸಿಐ ಭಾರತದ ರಾಷ್ಟ್ರಧ್ಯಕ್ಷರನ್ನು ಬಳಂಜ ಶಾಲೆಗೆ ಬರಮಾಡಿಕೊಂಡು ಸುಮಾರು ಒಂದು ಲಕ್ಷ ವೆಚ್ಚದ ಕೊಡುಗೆಗಳನ್ನು ಬಳಂಜ ಶಾಲೆ ಹಾಗೂ ಇತರ ಸಂಸ್ಥೆ ಗಳಿಗೆ ನೀಡಿರುತ್ತಾರೆ.

ಈ ವರ್ಷ ವಲಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿ 11 ಘಟಕಗಳ ಮೇಲುಸ್ತುವಾರಿಯನ್ನು ಯಶಸ್ವಿಯಾಗಿ ನಿಭಾಯಿಸಿಕೊಂಡು ಒಂದು ಹೊಸ ಘಟಕ ವನ್ನು ಕೂಡ ನೀಡುವಲ್ಲಿ ಯಶಸ್ವಿಯಾಗಿದ್ದರೆ.

ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಇವರು ಕಳೆದ 13 ವರ್ಷಗಳಿಂದ ಮೂಡುಬಿದ್ರಿಯ ಮೈಟ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Related posts

ಬೆಳ್ತಂಗಡಿ: ಸಂತ ತೆರೇಸಾ ಶಾಲಾ ಹಳೆ ವಿದ್ಯಾರ್ಥಿಗಳ ಸಮ್ಮಿಲನ

Suddi Udaya

ಅಂಡಿಂಜೆ : ಸಂಕಪ್ಪ ದೇವಾಡಿಗ ನಿಧನ

Suddi Udaya

ಶಿರ್ಲಾಲು ರಮಾನಂದ ಟೈಲರ್ ನಿಧನ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿಯಿಂದ ಇಫ್ತಾರ್ ಸ್ನೇಹ ಸಮ್ಮಿಲನ ಕಾರ್ಯಕ್ರಮ

Suddi Udaya

ಸಿವಿಲ್‌ ಇಂಜಿನಿಯರಿಂಗ್‌ ಪ್ರಾಜೆಕ್ಟ್ ಆವಿಷ್ಕಾರಕ್ಕೆ ಇಂಗ್ಲೆಂಡ್‌ ಮೂಲದ ಪೇಟೆಂಟ್ ಲಭ್ಯ

Suddi Udaya
error: Content is protected !!