ನಿಡ್ಲೆ: ಇಲ್ಲಿಯ ಕುದುರಾಯ ತಲೆಕ್ಕಿ ಕ್ರಾಸ್ ಬಳಿ ಖಾಸಗಿ ಬಸ್ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ಗಳು ಮುಖಾಮುಖಿ ಡಿಕ್ಕಿಯಾದ ಘಟನೆ ಇಂದು (ಡಿ.15ರಂದು) ಮುಂಜಾನೆ 7:15 ಸುಮಾರಿಗೆ ನಡೆದಿದೆ.
ಹಾಸನದಿಂದ ಧರ್ಮಸ್ಥಳ ಕಡೆ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ ಹಾಗೂ ಧರ್ಮಸ್ಥಳ ಕಡೆಯಿಂದ ಕೊಕ್ಕಡ ಕಡೆ ಹೋಗುತ್ತಿದ್ದ ಅಯ್ಯಪ್ಪ ಮಾಲಾಧಾರಿಗಳು ಇದ್ದ ಖಾಸಗಿ ಬಸ್ ಗಳು ಆಗಿದ್ದು ಪ್ರಯಾಣಿಕರಿಗೆ ಹಾಗೂ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿರುತ್ತದೆ. ಸುಮಾರು ಒಂದು ಗಂಟೆಗಳ ಕಾಲ ರಸ್ತೆ ಸಂಚಾರ ವ್ಯವಸ್ಥೆಯಲ್ಲಿ ವ್ಯತ್ಯಾಸಗಳು ಕಂಡು ಬಂದಿದ್ದು, ಸದ್ಯ ಸಂಚಾರ ಸರಿಯಾಗಿರುತ್ತದೆ.











