22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘದ ವತಿಯಿಂದ ದಿ| ಅಮ್ಮುಕುಮಾರ್ ರವರಿಗೆ ನುಡಿನಮನ

ಬೆಳ್ತಂಗಡಿ : ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘ ತಾಲೂಕು ಘಟಕ ಬೆಳ್ತಂಗಡಿ, ಇದರ ಗೌರವ ಸಲಹೆಗಾರರು ಅಮ್ಮು ಕುಮಾರ್ ಅಳದಂಗಡಿ ಇವರು ಇತ್ತೀಚೆಗೆ ನಿಧನರಾಗಿದ್ದು ತಾಲೂಕು ಘಟಕದ ವತಿಯಿಂದ ನುಡಿನಮನ ಕಾರ್ಯಕ್ರಮವು ಬೆಳ್ತಂಗಡಿಯ ಡಾ|| ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಡಿ.14 ರಂದು ನಡೆಯಿತು.

ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘದ ನಿಕಟಪೂರ್ವ ಗೌರವಾಧ್ಯಕ್ಷ ಶೀನ ಮಾಸ್ತಿಕಟ್ಟೆರವರು ದೀಪ ಬೆಳಗಿ, ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಸಂಘಟನೆಗೆ ಮತ್ತು ಸಮುದಾಯಕ್ಕೆ ಅವರು ನೀಡಿದ ಕೊಡುಗೆಗಳನ್ನು ವಿವರಿಸುವುದರ ಮೂಲಕ ನುಡಿನಮನ ಸಲ್ಲಿಸಿದರು.

ಆದಿದ್ರಾವಿಡ ಸಮುದಾಯದ ಮತ್ತು ಸಂಘಟನೆಯ ಪ್ರಮುಖರಾದ ವೆಂಕಪ್ಪ ಪಿ.ಎಸ್, ಶೀಮತಿ ಯಮುನ ನಾರಾವಿ, ಗೋಪಾಲಕೃಷ್ಣ ಕುಕ್ಕಳ, ರಾಘವ ಕಲ್ಮಂಜ, ದಿನೇಶ್ ಕೆ, ಕೊಕ್ಕಡ, ಶೇಖರ್ ವಿ. ಧರ್ಮಸ್ಥಳ, ಶರತ್ ಕೊಕ್ಕಡ, ಇವರುಗಳು ದಿ| ಅಮ್ಮುಕುಮಾರ್ ಇವರ ಬಾಲ್ಯದ ಕಷ್ಟಕರ ಜೀವನ, ಕಲಿಕೆ ಮತ್ತು ಉದ್ಯೋಗವನ್ನು ಪಡೆದುಕೊಳ್ಳುವಲ್ಲಿನ ಆಸಕ್ತಿ, ವ್ಯಕ್ತಿತ್ವ, ಅವರ ಸಂತೃಪ್ತ ಸಾಂಸಾರಿಕ ಜೀವನ, ಹಾಗೂ ಸಾಮಾಜಿಕವಾಗಿ, ಸಂಘಟನಾತ್ಮಕವಾಗಿ ಸಮುದಾಯಕ್ಕೆ ಓರ್ವ ವ್ಯಕಿಯಾಗಿ ಮತ್ತು ಶಕ್ತಿಯಾಗಿ ನೀಡಿದ ಕೊಡುಗೆಗಳನ್ನು ಮನನ ಮಾಡಿಕೊಳ್ಳುವುದರ ಮೂಲಕ ಅವರಿಗೆ ನುಡಿನಮನ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ತಾಲೂಕು ಮತ್ತು ಗ್ರಾಮ ಸಮಿತಿಯ ಪದಾಧಿಕಾರಿಗಳು, ಆದಿದ್ರಾವಿಡ ಸಮುದಾಯದ ಪ್ರಮುಖರು ಉಪಸ್ಥಿತರಿದ್ದರು.
ಕಾರ್ಯಕ್ರವನ್ನು ತಾಲೂಕು ಘಟಕದ ಪ್ರಧಾನ ಕಾರ್ಯದರ್ಶಿಯಾದ ಶೇಖರ್ ವಿ. ಧರ್ಮಸ್ಥಳ ಸ್ವಾಗತಿಸಿ, ಧನ್ಯವಾದ ನೀಡಿದರು.

Related posts

ಗ್ರಾಮ ಪಂಚಾಯತ್ ನೌಕರರ ಶ್ರೇಯ ಅಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷರಾಗಿ ಸತೀಶ್ ನಾರಾವಿ ಆಯ್ಕೆ

Suddi Udaya

ಬೆಳ್ತಂಗಡಿ: ಚರ್ಮಗಂಟು ರೋಗದ ಎರಡನೇ ಅಲೆಯೇ ಎಂಬ ಸಂದೇಹ

Suddi Udaya

ಹೈಕೋರ್ಟ್ ಇ.ಡಿ ಪರ ವಕೀಲರಾಗಿ ಕರುಣಾಕರ ಗೌಡ ಪಿ. ಕೊಯ್ಯೂರು ಆಯ್ಕೆ

Suddi Udaya

ಕುವೆಟ್ಟು: ಎರಂಗಲ್ಲು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಶಾಸಕ ಹರೀಶ್ ಪೂಂಜರ ವಿರುದ್ಧ ಪ್ರಕರಣ: ಎರಡೂ ಕೇಸುಗಳ ಬಗ್ಗೆ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ

Suddi Udaya

ಉಜಿರೆ: ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನಲ್ಲಿ ಯುವ ದಿನಾಚರಣೆ

Suddi Udaya
error: Content is protected !!