24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಮುಂಡೂರು ನಾಗಕಲ್ಲುರ್ಟಿ ಕ್ಷೇತ್ರದಲ್ಲಿ ಕುಣಿತ ಭಜನೋತ್ಸವ

ಮುಂಡೂರು: ಶ್ರೀ ನಾಗಾಂಬಿಕಾ ದೇವಸ್ಥಾನ, ಶ್ರೀ ನಾಗಕಲ್ಲುರ್ಟಿ ದೈವಸ್ಥಾನ ಶ್ರೀ ಕ್ಷೇತ್ರ ಮಂಗಳಗಿರಿ, ಮುಂಡೂರು ಶ್ರೀ ನಾಗಾಂಬಿಕ ಭಜನಾ ಮಂಡಳಿ ಶ್ರೀ ಕ್ಷೇತ್ರ ಮಂಗಳಗಿರಿ ಹಾಗೂ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಗುರುವಾಯನಕೆರೆ ಇದರ ಸಹಯೋಗದೊಂದಿಗೆ ಡಿ.14 ರಂದು ತಾಲೂಕಿನ 40 ಭಜನಾ ಮಂಡಳಿಗಳ ಭಜಕರಿಂದ ಏಕಕಾಲದಲ್ಲಿ ಭಜನೋತ್ಸವ ನಡೆಯಿತು.

ಶ್ರೀ ನಾಗಾಂಬಿಕಾ ಕ್ಷೇತ್ರ ಮಂಗಳಗಿರಿಯಲ್ಲಿ 12 ವರ್ಷಗಳ ನಂತರ ನಡೆಯಲಿರುವ ದೇವಸ್ಥಾನದ ಹಾಗೂ ದೈವಗಳ ಗುಡಿಗೋಪುರಗಳ ನವೀಕರಣ ಹಾಗೂ ಬ್ರಹ್ಮಕಲಶೋತ್ಸದ ಪೂರ್ವಭಾವಿಯಾಗಿ ಅಗಲಿರುವ ಕೆಲಸ ಕಾರ್ಯಗಳು ಶೀಘ್ರವಾಗಿ ನೆರವೇರಲು ಹಾಗೂ ಗ್ರಾಮದ ಮತ್ತು ಭಕ್ತರ ಶ್ರೇಯೋಭಿವೃದ್ಧಿಗೋಸ್ಕರ ಶ್ರೀ ನಾಗಬಿಂಕ ಭಜನಾ ಮಂಡಳಿ ಸದಸ್ಯರಿಂದ ಹಾಗೂ ಪೋಷಕರಿಂದ ದಿನಕ್ಕೆ ಒಬ್ಬರ ನೇತೃತ್ವದಲ್ಲಿ 48 ದಿನಗಳ ಭಜನಾ ಕಾರ್ಯಕ್ರಮವು ನಡೆಯಿತು. ಡಿ. 11 ರಂದು ಭಜನೆಯ ಮಂಗಳೋತ್ಸವ ಕುಣಿತ ಭಜನಾ ಕಾರ್ಯಕ್ರಮ ಹಾಗೂ ರಂಗ ಪೂಜೆ ಸೇವೆ ಆಡಳಿತ ಮೊಕ್ತೇಸರ ರಾಜೀವ್ ಇವರ ನೇತೃತ್ವದಲ್ಲಿ ಜರುಗಿತು.

ಭಜನೋತ್ಸವಕ್ಕೆ ಕಾಶಿಮಠ ವಾರಾಣಾಶಿಯ ಶ್ರೀ ವಿದ್ಯಾಶಂಕರನಂದಾ ಸರಸ್ವತಿ ಗುರೂಜಿ ದೀಪ ಪ್ರಜ್ವಲಿಸಿ ಚಾಲನೆ ನೀಡಿ, ಮಾತನಾಡಿ, ಕುಣಿತ ಭಜನೆಯನ್ನು ನನ್ನ ಜೀವನದಲ್ಲಿ ಪ್ರಥಮವಾಗಿ ನೋಡುತ್ತಿದ್ದೇನೆ. ದೈವಿಕ ಶಕ್ತಿಯನ್ನು ಈ ರೀತಿಯ ಭಜನೆಯಿಂದಲೂ ಅಹವಾನೆ ಮಾಡಿಕೊಳ್ಳಬಹುದು ಎಂಬುದಕ್ಕೆ ಮುಂಡೂರು ಶ್ರೀ ನಾಗಕಲ್ಲುರ್ಟಿ ಕ್ಷೇತ್ರದಲ್ಲಿ ನಡೆದ ಭಜನೋತ್ಸವ ಸಾಕ್ಷಿಯಾಗಿದೆ. ಮಕ್ಕಳಿಗೆ ಭಜನಾ ಸಂಸ್ಕಾರ ಕಲಿಸಬೇಕು. ದೈವ ದೇವರ ಮೇಲೆ ನಂಬಿಕೆ ಬೇಕು ಎಂದು ತಿಳಿಸಿದರು.


ಉದ್ಯಮಿ ಕಿರಣ್‌ಚಂದ್ರ ಪುಷ್ಪಗಿರಿ ಅವರು ಮಾತನಾಡಿ, ಕುಣಿತ ಭಜನೆಯಿಂದ ಮಕ್ಕಳಲ್ಲಿ ದೈಹಿಕ ಆರೋಗ್ಯದ ಜೊತೆ, ದೇವರ ಮೇಲೆ ಭಕ್ತಿ, ನಂಬಿಕೆಯ ಜಾಗೃತಿ ಮನೋಭಾವ ಬೆಳೆಸುತ್ತದೆ ಎಂದು ತಿಳಿಸಿದರು. ಶ್ರೀ ನಾಗಕಲ್ಲುರ್ಟಿ ಕ್ಷೇತ್ರದ ಆಡಳಿತ ಮೋಕ್ತೇಸರ ರಾಜೀವ್ ಅವರ ಮಾರ್ಗದರ್ಶನದಲ್ಲಿ ಭಜನೋತ್ಸವ ಜರುಗಿತು.ಕಾರ್ಯಕ್ರಮದಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿ ಧನ್ಯತೆಯನ್ನು ಪಡೆದರು. ಶ್ರೀ ನಾಗಂಬಿಕಾ ಭಜನಾ ಮಂಡಳಿಯ ಅಧ್ಯಕ್ಷರು ಹಾಗೂ ಸದಸ್ಯರು ಪೂರ್ಣ ಸಹಕಾರ ನೀಡಿದರು.

Related posts

ಉಜಿರೆ ಬೆನಕ ಹೆಲ್ತ್ ಸೆಂಟರ್ ನ ಡಾ. ಗೋಪಾಲಕೃಷ್ಣ ಕೆ ಅವರಿಗೆ “ಆಯುಷ್ ಶ್ರೀ” ಪ್ರಶಸ್ತಿ

Suddi Udaya

ತುಮಕೂರು ಮೂವರ ಹತ್ಯೆ ಪ್ರಕರಣ: ವಕ್ಫ್ ಜಿಲ್ಲಾ ಸಲಹಾ ಸಮಿತಿ ಪದಾಧಿಕಾರಿಗಳು, ಕಾಜೂರು ಆಡಳಿತ ಸಮಿತಿ ಭೇಟಿ: ಸಾಂತ್ವಾನ ಮತ್ತು ಸಹಾಯದ ಭರವಸೆ

Suddi Udaya

ಜನಪದ ಗೀತಗಾಯನ ಸ್ಪರ್ಧೆ: ವಾಣಿ ಕಾಲೇಜಿನ ರೇಂಜರ್ಸ್ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಕಣಿಯೂರು ವಲಯದ ಅಂಡೆತಡ್ಕ ಕಾರ್ಯಕ್ಷೇತ್ರದಲ್ಲಿ ಸೃಜನಾ ಶೀಲಾ ಕಾರ್ಯಕ್ರಮ

Suddi Udaya

ರಾಷ್ಟ್ರೀಯ ಜೂನಿಯರ್ ತ್ರೋಬಾಲ್ ಚಾಂಪಿಯನ್ ಶಿಪ್ : ವಾಣಿ ಕಾಲೇಜಿನ ಸಾಹಿತ್ಯ ಕುಶಾಲ್ ಮತ್ತು ಸೃಜನ್ ಗೆ ಪ್ರಥಮ ಬಹುಮಾನ

Suddi Udaya

ನಾಳ ಹಾಲು ಉತ್ಪಾದಕರ ಸಹಕಾರಿ ಸಂಘದಿಂದ ಶ್ರಮದಾನ

Suddi Udaya
error: Content is protected !!