September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯಮಟ್ಟದ ಹ್ಯಾಂಡ್‌ಬಾಲ್‌ ಪಂದ್ಯಾಟ : ಉಜಿರೆ ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗವಿಜ್ಞಾನಗಳ ಮಹಾವಿದ್ಯಾಲಯ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

ಉಜಿರೆ: ಮಹಿಳೆಯರ ರಾಜ್ಯಮಟ್ಟದ ಹ್ಯಾಂಡ್‌ಬಾಲ್‌ ಪಂದ್ಯಾಟದಲ್ಲಿ ಪ್ರಕೃತಿ ಚಿಕಿತ್ಸಾ ಕಾಲೇಜು ಸಾಧನೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ಬೆಂಗಳೂರು ಹಾಗೂ ಮಂಡ್ಯ ವೈದ್ಯಕೀಯ ಕಾಲೇಜು, ಮಂಡ್ಯ ಇವರ ಸಹಯೋಗದಲ್ಲಿ ಡಿ.10 ಮತ್ತು 11 ರಂದು ಆಯೋಜಿಸಲಾದ ರಾಜ್ಯಮಟ್ಟದ ಮಹಿಳೆಯರ ಹ್ಯಾಂಡ್‌ಬಾಲ್ ಪಂದ್ಯಾಟದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗವಿಜ್ಞಾನಗಳ ಮಹಾವಿದ್ಯಾಲಯ, ಉಜಿರೆ ಕಾಲೇಜು ತಂಡವು ಉತ್ತಮ ಪ್ರದರ್ಶನ ನೀಡಿ ದ್ವಿತೀಯ ಸ್ಥಾನವನ್ನು ಗಳಿಸಿದೆ.

ಸೆಮಿಫೈನಲ್ ಪಂದ್ಯಾಟದಲ್ಲಿ ಎಸ್‌ಎಸ್‌ಐಎಂಎಸ್, ದಾವಣಗೆರೆ ತಂಡವನ್ನು 4–2 ಗೋಲುಗಳ ಅಂತರದಲ್ಲಿ ಸೋಲಿಸಿ ಫೈನಲ್‌ಗೆ ಪ್ರವೇಶಿಸಿತು. ಫೈನಲ್ ಪಂದ್ಯದಲ್ಲಿ ಕಾಲೇಜು ತಂಡವು ರನ್ನರ್-ಅಪ್ ಸ್ಥಾನವನ್ನು ಪಡೆದುಕೊಂಡಿತು.

ಕಾಲೇಜಿನ ವಿದ್ಯಾರ್ಥಿನಿಯರಿಗೆ ಎಸ್‌ಡಿಎಂ ಸ್ಪೋರ್ಟ್ಸ್ ಕ್ಲಬ್‌ನ ಹ್ಯಾಂಡ್‌ಬಾಲ್ ತರಬೇತಿದಾರರಾದ ಸುದೀನ್ ಅವರು ತರಬೇತಿ ನೀಡಿದ್ದು, ಕಾಲೇಜಿನ ದೈಹಿಕ ನಿರ್ದೇಶಕ ಧರ್ಮೇಂದ್ರ ಕುಮಾರ್ ಅವರು ಸಮಗ್ರ ಮಾರ್ಗದರ್ಶನ ನೀಡಿದರು.

Related posts

ಉಜಿರೆ ಸಂತ ಅಂತೋನಿ ಚರ್ಚ್ ನಿಂದ ಅರ್ಹ ಕುಟುಂಬದ ಮನೆ ನಿರ್ಮಾಣಕ್ಕೆ ಶಿಲಾನ್ಯಾಸ

Suddi Udaya

ಗೋಳಿಯಂಗಡಿ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya

ನೆಲ್ಯಾಡಿ ಲಾವತಡ್ಕದಲ್ಲಿ ಕಾರು ಪಲ್ಟಿ : 6 ಮಂದಿಗೆ ಗಂಭೀರ ಗಾಯ

Suddi Udaya

ಯಶೋಧ ಕೃಷ್ಣ ವೀಡಿಯೋ ಸ್ಪರ್ಧೆ: ಕಲ್ಮಂಜದ ರಿದ್ವಿ ಡಿ.ಆರ್ ಹಾಗೂ ಭಕ್ತಿ ಜಿ. ವಿನ್ನರ್

Suddi Udaya

ಬ್ರಿಜೇಶ್ ಚೌಟ ಗೆಲುವು, ಉಜಿರೆಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ ಬಿಜೆಪಿ ಕಾರ್ಯಕರ್ತರು

Suddi Udaya

ಲಾಯಿಲ: ಗುರಿಂಗಾನದಲ್ಲಿ ಅಪಾಯ ಮಟ್ಟದಲ್ಲಿ ನದಿ ನೀರು,: ಸುತ್ತಮುತ್ತಲ ಮನೆಗಳಿಗೆ ತುಂಬಿದ ನೀರು, ಸ್ಥಳಿಯ ನಿವಾಸಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ

Suddi Udaya
error: Content is protected !!