30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆ

ವೇಣೂರು ಐಟಿಐಯಲ್ಲಿ ವಾರ್ಷಿಕ ಕ್ರೀಡೋತ್ಸವ

ವೇಣೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆ ಇಲ್ಲಿನ ವಾರ್ಷಿಕ ಕ್ರೀಡಾಕೂಟವು ಕುಕ್ಕೇಡಿ ಇಂದಿರಾಗಾಂಧಿ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆಯಿತು.

ಮುಖ್ಯ ಅತಿಥಿಯಾಗಿ ವೇಣೂರು ಆರಕ್ಷಕ ಉಪನೀರೀಕ್ಷಕರಾದ ಅಕ್ಷಯ್ ಡಿ., ಅವರು ಭಾಗವಹಿಸಿ ಧ್ವಜಾರೋಹಣಗೈದು ಕ್ರೀಡಾ ಕೂಟವನ್ನು ಉದ್ಘಾಟಿಸಿ, ವಿದ್ಯಾರ್ಥಿಗಳ ಪಥಸಂಚಲನದಲ್ಲಿ ಗೌರವ ರಕ್ಷೆ ಸ್ವೀಕರಿಸಿ ಮಾತನಾಡಿ ವಿದ್ಯಾರ್ಥಿಗಳಿಗೆ ಶಿಸ್ತು, ದೈಹಿಕ ಆರೋಗ್ಯ ಹಾಗೂ ಕ್ರೀಡೆಯ ಮಹತ್ವವನ್ನು ವಿವರಿಸಿದರು.

ಸಮಾರೋಪ ಸಮಾರಂಭ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಗಂಗಾಧರ್, ಪ್ರಾಂಶುಪಾಲರು, ಸರ್ಕಾರಿ ಪದವಿಪೂರ್ವ ಕಾಲೇಜು ವೇಣೂರು ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ವಿವಿಧ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಿ ಶುಭ ಹಾರೈಸಿದರು.

ಭಾರತೀಯ ಜೀವವಿಮಾ ನಿಗಮದ ಪ್ರತಿನಿಧಿ ಜಗನ್ನಾಥ ದೇವಾಡಿಗ ಮುಖ್ಯ ಅತಿಥಿಯಾಗಿ ಭಾಗವಹಿಸಿ ವಿವಿಧ ಸ್ಫರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಸುಮಾರು ರೂಪಾಯಿ 17,000 ನಗದು ಬಹುಮಾನ ನೀಡಿ ಪ್ರೋತ್ಸಾಹಿಸಿದರು.
ಸಂಸ್ಥೆಯ ಪ್ರಾಚಾರ್ಯರಾದ ವಿಶ್ವೇಶ್ವರ ಪ್ರಸಾದ್‌ ಕೆ. ಆರ್‌. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ವಿದ್ಯಾರ್ಥಿಗಳು ಪಠ್ಯದ ಜೊತ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ತೊಡಗಿಸಿಕೊಂಡು ಸರ್ವಾಂಗೀಣ ಅಭಿವೃದ್ಧಿ ಹೊಂದಬೇಕೇಂದು ಕರೆನೀಡಿದರು.

ವೇದಿಕೆಯಲ್ಲಿ ಉಪಸ್ಥಿತರಿದ್ದ ಕ್ರೀಡಾ ಸಂಚಾಲಕ ವಿನಯಚಂದ್ರರಾಜ್‌ ಪ್ರಾಸ್ತವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಕಿರಿಯ ತರಬೇತಿ ಅಧಿಕಾರಿಗಳಾದ ಶ್ರೀಧರ ಡಿ. ಬಹುಮಾನ ವಿಜೇತರ ಪಟ್ಟಿ ವಾಚಿಸಿ, ನುತಿಪ್ರಿಯ ಧನ್ಯವಾದಗೈದ ಕಾರ್ಯಕ್ರಮವನ್ನು ಪ್ರಸನ್ನ ಕುಮಾರ್‌ ನಿರ್ವಹಿಸಿದರು.

Related posts

ಕನ್ನಡ, ತುಳು ಸಾರಸ್ವತ ಲೋಕದ ಖ್ಯಾತ ಸಾಹಿತಿ, ಯಕ್ಷಗಾನ ಪ್ರಸಂಗಕರ್ತರಾಗಿ ಪ್ರಸಿದ್ಧರಾಗಿದ್ದ ಡಾ. ಅಮೃತ ಸೋಮೇಶ್ವರ ರವರ ನಿಧನಕ್ಕೆ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಮಾ 31-ಎ 4: ತುಳುನಾಡಿನ ಸತ್ಯನಾಪುರದ ಸತ್ಯೋದ ಸಿರಿಯ ಮೂಲ ಆಲಡೆ ಕ್ಷೇತ್ರ ಕಾರಣಿಕದ ಮಣ್ಣು ಲೋಕನಾಡು ಶ್ರೀ ಲೋಕನಾಥೇಶ್ವರ ಕ್ಷೇತ್ರದಲ್ಲಿ ವಾರ್ಷಿಕ ಸಿರಿ ಜಾತ್ರೆ

Suddi Udaya

ಗುರುವಾಯನಕೆರೆ ವಲಯದ ಪವಿತ್ರ ಜ್ಞಾನವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ದಿನ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ನೇರ್ತನೆ ನಿವಾಸಿ ಸ್ಟ್ಯಾನಿ ಜೋಸೆಫ್ ನಿಧನ

Suddi Udaya

ಗೌಡರ ಯಾನೆ ಒಕ್ಕಲಿಗ ಗ್ರಾಮ ಸಮಿತಿ ಹಾಗೂ ಶಿಶಿಲ ಗ್ರಾಮದ ಬೈಲುವಾರು ಸಮಿತಿಯ ಪದಾಧಿಕಾರಿಗಳ ಸಭೆ

Suddi Udaya

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಂಗಳೂರು ಮತ್ತು ತುಳು ಸಂಘ ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜು ಆಶ್ರಯದಲ್ಲಿ ಎರಡು ದಿನಗಳ ತಾಲೂಕು ಮಟ್ಟದ ತುಳು ಸಾಹಿತ್ಯ ರಚನಾ ಕಮ್ಮಟ ಉದ್ಘಾಟನೆ

Suddi Udaya
error: Content is protected !!