23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಬೀದಿ ನಾಯಿ ಕಡಿತದ ಮತ್ತು ರೇಬಿಸ್ ರೋಗದ ಬಗ್ಗೆ ಮಾಹಿತಿ

ಉಜಿರೆ: ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಬೀದಿ ನಾಯಿ ಕಡಿತದ ಮತ್ತು ರೇಬಿಸ್ ರೋಗದ ಬಗ್ಗೆ ಮಾಹಿತಿ ಕಾರ್ಯಕ್ರಮವು ನಡೆಯಿತು.

ಇತ್ತೀಚೆಗೆ ಬೀದಿ ನಾಯಿಗಳ ದಾಳಿಯಿಂದ ಅನೇಕ ಮಕ್ಕಳು, ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದನ್ನು ಘನನ್ಯಾಯಾಲಯವು ಸುಮೋಟೋ ಕೇಸ್ ದಾಖಲಿಸಿದ್ದು, ಪ್ರತೀ ಇಲಾಖೆಗಳ ಜವಾಬ್ದಾರಿಯನ್ನು ಕೂಡ ನಿಗದಿಪಡಿಸಿದೆ. ನಮ್ಮ ಇಲಾಖೆ ಕೂಡಾ ಸೂಚನೆ ನೀಡಿದ್ದು ಜಾಗೃತಿ ಮೂಡಿಸಿ ವರದಿ ನೀಡುವಂತೆ ಸೂಚಿಸಿದೆ.ಪೋಷಕರ ಎಚ್ಚರಿಕೆ, ಇವುಗಳ ಬಗ್ಗೆ ಜಾಗೃತಿ ಮೂಡಿಸಿ. ಅಲ್ಲದೆ ಶಾಲಾ ಅಕ್ಕ ಪಕ್ಕದಲ್ಲಿ ಬೀದಿ ನಾಯಿಗಳು ಕಂಡುಬಂದರೆ ತಕ್ಷಣ ಗ್ರಾಮ ಪಂಚಾಯತ್, ಆರೋಗ್ಯ ಇಲಾಖೆ, ವೆಟರಿನರಿ ಇಲಾಖೆ, ಪೊಲೀಸ್ ಇಲಾಖೆಗೆ ಮಾಹಿತಿ ನೀಡಿ. ಅಲ್ಲದೆ, ಉಳಿಕೆಯಾದ ಬಿಸಿಯೂಟ, ತಿಂಡಿ ತಿನಸುಗಳನ್ನು ಶಾಲಾ ವರಾಂಡ ಅಥವಾ ಸುತ್ತ ಮುತ್ತ, ಎಲ್ಲೆಂದರಲ್ಲಿ ಚೆಲ್ಲದಂತೆ ಜಾಗ್ರತೆ ವಹಿಸಿ. ಕೆಲವೊಂದು ನಾಯಿಗಳು ಶಾಲಾ ವರಾಂಡದಲ್ಲೇ ಸುತ್ತುತ್ತಿರುತ್ತದೆ ಒಟ್ಟಾರೆಯಾಗಿ ನಮ್ಮ ಮಕ್ಕಳು ಬೀದಿನಾಯಿಗಳ ಆಕ್ರಮಣಕ್ಕೆ ತುತ್ತಾಗದಿರಲಿ ಎಂದು ಉಜಿರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನೀರಿಕ್ಷಣಾಧಿಕಾರಿ ಸ್ವತಂತ್ರ ರಾವ್ ಹಾಗೂ ಮುಂಡಾಜೆ ಪ್ರಾಥಮಿಕ ಆರೋಗ್ಯ ನೀರಿಕ್ಷಣಾಧಿಕಾರಿ ಗೌರೀಶ್ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ವಿದ್ಯಾ ಕಿರಣ್ ನಿಮ್ಮ ಪೋಷಕರಿಗೆ ಈ ಮಾಹಿತಿಯನ್ನು ತಿಳಿಸಿ ಎಂದರು.
ವೇದಿಕೆಯಲ್ಲಿ ಹಿರಿಯ ಶಿಕ್ಷಕ ರಾಧಾಕೃಷ್ಣ ಉಪಸ್ಥಿತರಿದ್ದರು. ಶಿಕ್ಷಕಿಯಾದ ಉಷಾ ವಂದಿಸಿದರು. ಲಲಿತಾ ಎಂ ಶೆಟ್ಟಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

Related posts

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಸಮ್ಮರ್ ಸ್ಪಾರ್ಕ್ ಬೇಸಿಗೆ ಶಿಬಿರದ ಸಮಾರೋಪ ಹಾಗೂ ಪ್ರದರ್ಶನ-ಮಾರಾಟ ಮೇಳ

Suddi Udaya

ಲಾಯಿಲ: ಹಳೆಪೇಟೆ ಮುಹಿಯುದ್ದಿನ್ ಜುಮ್ಮಾ ಮಸ್ಜಿದ್ ಯಲ್ಲಿ ಸಂಭ್ರಮದ ಈದ್ ಮಿಲಾದ್

Suddi Udaya

ಮಗುವಿಗೊಂದು ಮರ ಯೋಜನೆಗೆ ಮುಂದಾದ ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆ

Suddi Udaya

ಪಾಲಡ್ಕ ಹಾಲು ಉತ್ಪಾದಕರ ಸಹಕಾರ ಸಂಘ: ಅಧ್ಯಕ್ಷರಾಗಿ ಧರ್ಣಪ್ಪ ಕುಲಾಲ್, ಉಪಾಧ್ಯಕ್ಷರಾಗಿ ಹರೀಶ್ ಗೌಡ ಆಯ್ಕೆ

Suddi Udaya

ಸೌತಡ್ಕ ಸೇವಾಧಾಮದಲ್ಲಿ ಗಾಲಿಕುರ್ಚಿ ವಿತರಣಾ ಕಾರ್ಯಕ್ರಮ ಉದ್ಘಾಟನೆ

Suddi Udaya

ಕನ್ಯಾಡಿ: ಮತ್ತಿಲ ನಿವಾಸಿ ಶಿವರಾಜ್ ಆತ್ಮಹತ್ಯೆ

Suddi Udaya
error: Content is protected !!