22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಬೀದಿ ನಾಯಿ ಕಡಿತದ ಮತ್ತು ರೇಬಿಸ್ ರೋಗದ ಬಗ್ಗೆ ಮಾಹಿತಿ

ಉಜಿರೆ: ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಬೀದಿ ನಾಯಿ ಕಡಿತದ ಮತ್ತು ರೇಬಿಸ್ ರೋಗದ ಬಗ್ಗೆ ಮಾಹಿತಿ ಕಾರ್ಯಕ್ರಮವು ನಡೆಯಿತು.

ಇತ್ತೀಚೆಗೆ ಬೀದಿ ನಾಯಿಗಳ ದಾಳಿಯಿಂದ ಅನೇಕ ಮಕ್ಕಳು, ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದನ್ನು ಘನನ್ಯಾಯಾಲಯವು ಸುಮೋಟೋ ಕೇಸ್ ದಾಖಲಿಸಿದ್ದು, ಪ್ರತೀ ಇಲಾಖೆಗಳ ಜವಾಬ್ದಾರಿಯನ್ನು ಕೂಡ ನಿಗದಿಪಡಿಸಿದೆ. ನಮ್ಮ ಇಲಾಖೆ ಕೂಡಾ ಸೂಚನೆ ನೀಡಿದ್ದು ಜಾಗೃತಿ ಮೂಡಿಸಿ ವರದಿ ನೀಡುವಂತೆ ಸೂಚಿಸಿದೆ.ಪೋಷಕರ ಎಚ್ಚರಿಕೆ, ಇವುಗಳ ಬಗ್ಗೆ ಜಾಗೃತಿ ಮೂಡಿಸಿ. ಅಲ್ಲದೆ ಶಾಲಾ ಅಕ್ಕ ಪಕ್ಕದಲ್ಲಿ ಬೀದಿ ನಾಯಿಗಳು ಕಂಡುಬಂದರೆ ತಕ್ಷಣ ಗ್ರಾಮ ಪಂಚಾಯತ್, ಆರೋಗ್ಯ ಇಲಾಖೆ, ವೆಟರಿನರಿ ಇಲಾಖೆ, ಪೊಲೀಸ್ ಇಲಾಖೆಗೆ ಮಾಹಿತಿ ನೀಡಿ. ಅಲ್ಲದೆ, ಉಳಿಕೆಯಾದ ಬಿಸಿಯೂಟ, ತಿಂಡಿ ತಿನಸುಗಳನ್ನು ಶಾಲಾ ವರಾಂಡ ಅಥವಾ ಸುತ್ತ ಮುತ್ತ, ಎಲ್ಲೆಂದರಲ್ಲಿ ಚೆಲ್ಲದಂತೆ ಜಾಗ್ರತೆ ವಹಿಸಿ. ಕೆಲವೊಂದು ನಾಯಿಗಳು ಶಾಲಾ ವರಾಂಡದಲ್ಲೇ ಸುತ್ತುತ್ತಿರುತ್ತದೆ ಒಟ್ಟಾರೆಯಾಗಿ ನಮ್ಮ ಮಕ್ಕಳು ಬೀದಿನಾಯಿಗಳ ಆಕ್ರಮಣಕ್ಕೆ ತುತ್ತಾಗದಿರಲಿ ಎಂದು ಉಜಿರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನೀರಿಕ್ಷಣಾಧಿಕಾರಿ ಸ್ವತಂತ್ರ ರಾವ್ ಹಾಗೂ ಮುಂಡಾಜೆ ಪ್ರಾಥಮಿಕ ಆರೋಗ್ಯ ನೀರಿಕ್ಷಣಾಧಿಕಾರಿ ಗೌರೀಶ್ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ವಿದ್ಯಾ ಕಿರಣ್ ನಿಮ್ಮ ಪೋಷಕರಿಗೆ ಈ ಮಾಹಿತಿಯನ್ನು ತಿಳಿಸಿ ಎಂದರು.
ವೇದಿಕೆಯಲ್ಲಿ ಹಿರಿಯ ಶಿಕ್ಷಕ ರಾಧಾಕೃಷ್ಣ ಉಪಸ್ಥಿತರಿದ್ದರು. ಶಿಕ್ಷಕಿಯಾದ ಉಷಾ ವಂದಿಸಿದರು. ಲಲಿತಾ ಎಂ ಶೆಟ್ಟಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ ಶ್ರೀ ಗುರುದೇವ ವಿವಿದೋದ್ದೇಶ ಸಹಕಾರಿ ಸಂಘಕ್ಕೆ ತೆಲಂಗಾಣ ಸರಕಾರದ ಸಚಿವ ಪೊನ್ನಂ ಪ್ರಭಾಕರ್ ಭೇಟಿ

Suddi Udaya

ಜ.23-ಫೆ.1: ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಜಾತ್ರಾ ಮಹೋತ್ಸವ: ಶ್ರೀಕೃಷ್ಣ ಕಥಾಮೃತ, ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣ, ಕಮ್ಮಟ ಭಜನೋತ್ಸವ, ಆಳ್ವಾಸ್ ಸಾಂಸ್ಕೃತಿಕ ವೈಭವ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕರಾಗಿ ಕಮಲ್ ತೇಜು ರಾಜಪೂತ್ ನೇಮಕ

Suddi Udaya

ಮದ್ದಡ್ಕದಲ್ಲಿ ಸ್ಕೂಟಿ ಹಾಗೂ ಆಪೆ ರಿಕ್ಷಾ ಡಿಕ್ಕಿ

Suddi Udaya

ಪಡಂಗಡಿ ಗ್ರಾ.ಪಂ. ನಲ್ಲಿ ಕ್ರಿಯಾ ಯೋಜನೆ ತಯಾರಿ ಬಗ್ಗೆ ವಿಶೇಷ ಗ್ರಾಮ ಸಭೆ

Suddi Udaya

ಲಾಯಿಲದಲ್ಲಿ ನಡೆದಿರುವುದು ವಾಮಾಚಾರ ಅಲ್ಲ, ದೋಷ ಪರಿಹಾರದ ಪೂಜೆ

Suddi Udaya
error: Content is protected !!