23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಬೀದಿ ನಾಯಿ ಕಡಿತದ ಮತ್ತು ರೇಬಿಸ್ ರೋಗದ ಬಗ್ಗೆ ಮಾಹಿತಿ

ಉಜಿರೆ: ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಬೀದಿ ನಾಯಿ ಕಡಿತದ ಮತ್ತು ರೇಬಿಸ್ ರೋಗದ ಬಗ್ಗೆ ಮಾಹಿತಿ ಕಾರ್ಯಕ್ರಮವು ನಡೆಯಿತು.

ಇತ್ತೀಚೆಗೆ ಬೀದಿ ನಾಯಿಗಳ ದಾಳಿಯಿಂದ ಅನೇಕ ಮಕ್ಕಳು, ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದನ್ನು ಘನನ್ಯಾಯಾಲಯವು ಸುಮೋಟೋ ಕೇಸ್ ದಾಖಲಿಸಿದ್ದು, ಪ್ರತೀ ಇಲಾಖೆಗಳ ಜವಾಬ್ದಾರಿಯನ್ನು ಕೂಡ ನಿಗದಿಪಡಿಸಿದೆ. ನಮ್ಮ ಇಲಾಖೆ ಕೂಡಾ ಸೂಚನೆ ನೀಡಿದ್ದು ಜಾಗೃತಿ ಮೂಡಿಸಿ ವರದಿ ನೀಡುವಂತೆ ಸೂಚಿಸಿದೆ.ಪೋಷಕರ ಎಚ್ಚರಿಕೆ, ಇವುಗಳ ಬಗ್ಗೆ ಜಾಗೃತಿ ಮೂಡಿಸಿ. ಅಲ್ಲದೆ ಶಾಲಾ ಅಕ್ಕ ಪಕ್ಕದಲ್ಲಿ ಬೀದಿ ನಾಯಿಗಳು ಕಂಡುಬಂದರೆ ತಕ್ಷಣ ಗ್ರಾಮ ಪಂಚಾಯತ್, ಆರೋಗ್ಯ ಇಲಾಖೆ, ವೆಟರಿನರಿ ಇಲಾಖೆ, ಪೊಲೀಸ್ ಇಲಾಖೆಗೆ ಮಾಹಿತಿ ನೀಡಿ. ಅಲ್ಲದೆ, ಉಳಿಕೆಯಾದ ಬಿಸಿಯೂಟ, ತಿಂಡಿ ತಿನಸುಗಳನ್ನು ಶಾಲಾ ವರಾಂಡ ಅಥವಾ ಸುತ್ತ ಮುತ್ತ, ಎಲ್ಲೆಂದರಲ್ಲಿ ಚೆಲ್ಲದಂತೆ ಜಾಗ್ರತೆ ವಹಿಸಿ. ಕೆಲವೊಂದು ನಾಯಿಗಳು ಶಾಲಾ ವರಾಂಡದಲ್ಲೇ ಸುತ್ತುತ್ತಿರುತ್ತದೆ ಒಟ್ಟಾರೆಯಾಗಿ ನಮ್ಮ ಮಕ್ಕಳು ಬೀದಿನಾಯಿಗಳ ಆಕ್ರಮಣಕ್ಕೆ ತುತ್ತಾಗದಿರಲಿ ಎಂದು ಉಜಿರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನೀರಿಕ್ಷಣಾಧಿಕಾರಿ ಸ್ವತಂತ್ರ ರಾವ್ ಹಾಗೂ ಮುಂಡಾಜೆ ಪ್ರಾಥಮಿಕ ಆರೋಗ್ಯ ನೀರಿಕ್ಷಣಾಧಿಕಾರಿ ಗೌರೀಶ್ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ವಿದ್ಯಾ ಕಿರಣ್ ನಿಮ್ಮ ಪೋಷಕರಿಗೆ ಈ ಮಾಹಿತಿಯನ್ನು ತಿಳಿಸಿ ಎಂದರು.
ವೇದಿಕೆಯಲ್ಲಿ ಹಿರಿಯ ಶಿಕ್ಷಕ ರಾಧಾಕೃಷ್ಣ ಉಪಸ್ಥಿತರಿದ್ದರು. ಶಿಕ್ಷಕಿಯಾದ ಉಷಾ ವಂದಿಸಿದರು. ಲಲಿತಾ ಎಂ ಶೆಟ್ಟಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

Related posts

ಜಿಲ್ಲಾ ಮಟ್ಟದ ಅಂತರ್ ಐಟಿಐ ತ್ರೋಬಾಲ್ ಪಂದ್ಯಾಟ: ಎಸ್ ಡಿ ಎಂ ಮಹಿಳಾ ಐಟಿಐ ಪ್ರಥಮ

Suddi Udaya

ಕೊಕ್ಕಡದಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟನೆ

Suddi Udaya

ಸಿಎ ಪರೀಕ್ಷೆಯಲ್ಲಿ ಬೆಳ್ತಂಗಡಿಯ ಕೇಶವ ಕಾಮತ್ ತೇರ್ಗಡೆ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಸಂಘದ ರೈತ ಸದಸ್ಯರಿಗೆ ಉಚಿತ ತರಕಾರಿ ಬೀಜ ವಿತರಣಾ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಅಯ್ಯಪ್ಪ ಸ್ವಾಮಿ ಮಂದಿರದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಕರ್ನಾಟಕ ದೇವಸ್ಥಾನ- ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ಜಿಲ್ಲಾ ಮಟ್ಟದ ಪರಿಷತ್ತು

Suddi Udaya
error: Content is protected !!