25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸರಕಾರದಿಂದ ಮಂಜೂರುಗೊಂಡಿರುವ ಜಾಗವನ್ನು ಸವೆ೯ ನಡೆಸಲು ನಾಗರಿಕರ ಆಕ್ಷೇಪಣೆ: ಶಿಶಿಲ ಗ್ರಾಮಸ್ಥರಿಂದ ಉಪ್ಪಿನಂಗಡಿ ಉಪ ವಲಯಾಣ್ಯಾಧಿಕಾರಿಗೆ ಮನವಿ

ಶಿಶಿಲ: ಕಳೆಂಜದ ಸರ್ವೇ ನಂಬರ್ 309ರ ಸರ್ವೇ ಕಾರ್ಯ, ಶಿಶಿಲ ಭಾಗದ ಅರಣ್ಯ ಪ್ರದೇಶದಲ್ಲಿ ನಡೆಯುತ್ತಿದ್ದು ಈ ಸಂದರ್ಭದಲ್ಲಿ ಅರಣ್ಯ ಇಲಾಖೆಯವರು, ಸರ್ವೇ ಅಧಿಕಾರಿಗಳು ತಮ್ಮ ಪಟ್ಟ ಜಮೀನುಗಳಲ್ಲಿ ಸರ್ವೇ ನಡೆಸಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದರಿಂದ ಬೇಸತ್ತ ಅಲ್ಲಿನ ನಿವಾಸಿಗಳು ಉಪ್ಪಿನಂಗಡಿ ಉಪವಲಯಾರಣ್ಯಧಿಕಾರಿಗೆ ದೂರು ನೀಡಿದ್ದು ದೂರಿನ ಪತ್ರದಲ್ಲಿ ಶಿಶಿಲ ಗ್ರಾಮದ ಹೊಳೆಗಂಡಿ, ದೇನೋಡಿ ಭಾಗದಲ್ಲಿ ಅಲ್ಲಿನ 80 ಕುಟುಂಬಗಳಿಗೆ 1966ರಲ್ಲಿ ಅಕ್ರಮ ಸಕ್ರಮದ ಅಡಿಯಲ್ಲಿ ಜಮೀನು ಮಂಜೂರಾಗಿದ್ದು ಅದು ಅರಣ್ಯದಿಂದ ಕಂದಾಯಕ್ಕೆ ವಿಂಗಡಣೆಯಾಗಿರುತ್ತದೆ. ಆದ್ದರಿಂದ ಸರಕಾರವು ಮಂಜೂರು ಮಾಡಿರುವ ಭೂಮಿಯನ್ನು ಹೊರತುಪಡಿಸಿ ತಮ್ಮ ಅರಣ್ಯ ಭಾಗವನ್ನು ಮಾತ್ರ ಸರ್ವೇ ಮಾಡಬೇಕೆಂಬುದು ನಮ್ಮ ಮನವಿ ಸರಕಾರದಿಂದ ದೇನೋಡಿ ಭಾಗದಲ್ಲಿ ಮಂಜೂರಾಗಿರುವ ಜಮೀನಿಗೆ ಅರಣ್ಯ ಇಲಾಖೆಯ ಅಧಿಕಾರಿಗಳು ಯಾವುದೇ ಮಾಹಿತಿ ನೀಡದೆ ಅಕ್ರಮವಾಗಿ ಪ್ರವೇಶ ಮಾಡಿ ಸರ್ವೇ ಮಾಡಿದ್ದು ಆ ಸರ್ವೇ ಕೂಡ ಅಸಮರ್ಪಕವಾಗಿದೆ.

ಇನ್ನೂ ಮುಂದಿನ ದಿನಗಳಲ್ಲಿ ಶಿಶಿಲ ಭಾಗದಲ್ಲಿ ಸರಕಾರದಿಂದ ಮಂಜೂರು ಗೊಂಡಿರುವ ಜಾಗವನ್ನು ಯಾವುದೇ ರೀತಿ ಸರ್ವೇ ನಡೆಸದಂತೆ ಆಕ್ಷೇಪಣೆ ಇರುತ್ತದೆ ಎಂದು ಉಪ್ಪಿನಂಗಡಿ ಉಪವಲಯಾರಣ್ಯಧಿಕಾರಿಗೆ ಶಿಶಿಲ ಗ್ರಾಮಸ್ಥರು ಮನವಿ ಸಲ್ಲಿಸಿದ್ದಾರೆ.

Related posts

ಎಸ್.ಐ.ಟಿ ಕಚೇರಿಗೆ ಸುಜಾತ ಭಟ್ ವಿಚಾರಣೆಗೆ ಹಾಜರು

Suddi Udaya

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಮುಂಡಾಜೆ ಶಾಲಾ ವಿದ್ಯಾರ್ಥಿಗಳಾದ ಚಿನ್ಮಯಿ, ಸಮೃದ್ಧಿರವರಿಗೆ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿಯ ಸ್ವರ್ಣ ಶಿಲ್ಪಿ ಎಚ್. ಗೋಪಾಲ ಆಚಾರ್ಯ ರವರಿಗೆ ‘ಎಸ್.ಕೆ.ಜಿ.ಐ ಪಾಲ್ಕೆ ಪ್ರಶಸ್ತಿ”

Suddi Udaya

ಗಿರೀಶ್ ಮಟ್ಟಣ್ಣನವರ್ ಆಕ್ಷೇಪಾರ್ಹ ಹೇಳಿಕೆ: ಮೂರು ವಾರಗಳಲ್ಲಿ ತನಿಖೆ ನಡೆಸುವಂತೆ ರಾಜ್ಯ ಮಹಿಳಾ ಆಯೋಗಕ್ಕೆ  ಹೈಕೋರ್ಟ್ ಸೂಚನೆ

Suddi Udaya

ಉಜಿರೆ ಹಳೆಪೇಟೆ ಶಾಲೆಯಲ್ಲಿ ಎಸ್‌ಡಿಎಂ ಆಸ್ಪತ್ರೆ ವತಿಯಿಂದ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ

Suddi Udaya

ಫೆ.23: ಕುತ್ಲೂರು ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನ ಸಂಯುಕ್ತ ಆಶ್ರಯದಲ್ಲಿ 12ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಮ್ಯಾಟ್‌ ಕಬಡ್ಡಿ ಪಂದ್ಯಾಟ ಹಾಗೂ ಬೃಹತ್ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

Suddi Udaya
error: Content is protected !!