25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸರಕಾರದಿಂದ ಮಂಜೂರುಗೊಂಡಿರುವ ಜಾಗವನ್ನು ಸವೆ೯ ನಡೆಸಲು ನಾಗರಿಕರ ಆಕ್ಷೇಪಣೆ: ಶಿಶಿಲ ಗ್ರಾಮಸ್ಥರಿಂದ ಉಪ್ಪಿನಂಗಡಿ ಉಪ ವಲಯಾಣ್ಯಾಧಿಕಾರಿಗೆ ಮನವಿ

ಶಿಶಿಲ: ಕಳೆಂಜದ ಸರ್ವೇ ನಂಬರ್ 309ರ ಸರ್ವೇ ಕಾರ್ಯ, ಶಿಶಿಲ ಭಾಗದ ಅರಣ್ಯ ಪ್ರದೇಶದಲ್ಲಿ ನಡೆಯುತ್ತಿದ್ದು ಈ ಸಂದರ್ಭದಲ್ಲಿ ಅರಣ್ಯ ಇಲಾಖೆಯವರು, ಸರ್ವೇ ಅಧಿಕಾರಿಗಳು ತಮ್ಮ ಪಟ್ಟ ಜಮೀನುಗಳಲ್ಲಿ ಸರ್ವೇ ನಡೆಸಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದರಿಂದ ಬೇಸತ್ತ ಅಲ್ಲಿನ ನಿವಾಸಿಗಳು ಉಪ್ಪಿನಂಗಡಿ ಉಪವಲಯಾರಣ್ಯಧಿಕಾರಿಗೆ ದೂರು ನೀಡಿದ್ದು ದೂರಿನ ಪತ್ರದಲ್ಲಿ ಶಿಶಿಲ ಗ್ರಾಮದ ಹೊಳೆಗಂಡಿ, ದೇನೋಡಿ ಭಾಗದಲ್ಲಿ ಅಲ್ಲಿನ 80 ಕುಟುಂಬಗಳಿಗೆ 1966ರಲ್ಲಿ ಅಕ್ರಮ ಸಕ್ರಮದ ಅಡಿಯಲ್ಲಿ ಜಮೀನು ಮಂಜೂರಾಗಿದ್ದು ಅದು ಅರಣ್ಯದಿಂದ ಕಂದಾಯಕ್ಕೆ ವಿಂಗಡಣೆಯಾಗಿರುತ್ತದೆ. ಆದ್ದರಿಂದ ಸರಕಾರವು ಮಂಜೂರು ಮಾಡಿರುವ ಭೂಮಿಯನ್ನು ಹೊರತುಪಡಿಸಿ ತಮ್ಮ ಅರಣ್ಯ ಭಾಗವನ್ನು ಮಾತ್ರ ಸರ್ವೇ ಮಾಡಬೇಕೆಂಬುದು ನಮ್ಮ ಮನವಿ ಸರಕಾರದಿಂದ ದೇನೋಡಿ ಭಾಗದಲ್ಲಿ ಮಂಜೂರಾಗಿರುವ ಜಮೀನಿಗೆ ಅರಣ್ಯ ಇಲಾಖೆಯ ಅಧಿಕಾರಿಗಳು ಯಾವುದೇ ಮಾಹಿತಿ ನೀಡದೆ ಅಕ್ರಮವಾಗಿ ಪ್ರವೇಶ ಮಾಡಿ ಸರ್ವೇ ಮಾಡಿದ್ದು ಆ ಸರ್ವೇ ಕೂಡ ಅಸಮರ್ಪಕವಾಗಿದೆ.

ಇನ್ನೂ ಮುಂದಿನ ದಿನಗಳಲ್ಲಿ ಶಿಶಿಲ ಭಾಗದಲ್ಲಿ ಸರಕಾರದಿಂದ ಮಂಜೂರು ಗೊಂಡಿರುವ ಜಾಗವನ್ನು ಯಾವುದೇ ರೀತಿ ಸರ್ವೇ ನಡೆಸದಂತೆ ಆಕ್ಷೇಪಣೆ ಇರುತ್ತದೆ ಎಂದು ಉಪ್ಪಿನಂಗಡಿ ಉಪವಲಯಾರಣ್ಯಧಿಕಾರಿಗೆ ಶಿಶಿಲ ಗ್ರಾಮಸ್ಥರು ಮನವಿ ಸಲ್ಲಿಸಿದ್ದಾರೆ.

Related posts

ಕಟೀಲ್ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಾನಕ್ಕೆ ಗರ್ಡಾಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಿಂದ ಸುಮಾರು 30 ಭಕ್ತರಿಂದ ಪಾದಯಾತ್ರೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ನಡೆದ 74 ಅಸಹಜ ಸಾವಿನ ಪ್ರಕರಣ: ವರದಿ ನೀಡಲು ಹೈಕೋರ್ಟ್ ಆದೇಶ

Suddi Udaya

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಉರುವಾಲು :ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಚಪ್ಪರ ಮೂಹೂರ್ತ

Suddi Udaya

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರರವರಿಂದ ಮತದಾನ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೀವನ ಕೌಶಲ್ಯ ಕಾರ್ಯಾಗಾರ

Suddi Udaya
error: Content is protected !!