ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಂತರಾಷ್ಟ್ರೀಯ ಉದ್ಯಮಿ,‌ ಧಾರ್ಮಿಕ ಮುಖಂಡ ಕುಟ್ಟೂರ್ ಹಾಜಿ ಬೆಳ್ತಂಗಡಿಗೆ ಭೇಟಿ

ಬೆಳ್ತಂಗಡಿ: ಕೇರಳದ ಪ್ರಖ್ಯಾತ “ನಾಲೆಡ್ಜ್ ಸಿಟಿ” ಇಲ್ಲಿನ ಗ್ರ್ಯಾಂಡ್ ಮಸ್ಜಿದ್ ಆಫ್ ಇಂಡಿಯಾ “ಜಾಮಿಯಲ್ ಫುತೂಹ್” ಇದರ ಚೇರ್ಮೆನ್, ಅಂತಾರಾಷ್ಟ್ರೀಯ ಉದ್ಯಮಿ ಸಿ.ಪಿ ಅಬ್ದುಲ್ ರಹಿಮಾನ್ ಹಾಜಿ (ಕೂಟ್ಟೂರ್ ಹಾಜಿ) ಅವರು ಡಿ.14 ರಂದು ಬೆಳ್ತಂಗಡಿಗೆ ಭೇಟಿ ನೀಡಿದರು.

ಅವರನ್ನು ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ನಾಯಕರಾದ ಅಬ್ಬೋನು ಮದ್ದಡ್ಕ, ಖ್ಯಾತ ಉದ್ಯಮಿ ಉಸ್ಮಾನ್ ಹಾಜಿ ಆಲಂದಿಲ, ಹಿರಿಯ ಪತ್ರಕರ್ತ ಹಾಗೂ ಎಸ್‌ವೈಎಸ್ ಝೋನ್ ಮಾಜಿ ಪ್ರಧಾನ ಕಾರ್ಯದರ್ಶಿ ಅಶ್ರಫ್ ಆಲಿಕುಂಞಿ ಮುಂಡಾಜೆ ಬರಮಾಡಿಕೊಂಡು ಗೌರವಿಸಿದರು.

ಸಿ.ಪಿ‌ ಅಬ್ದುಲ್ ರಹಿಮಾನ್ ಅವರು ಅಬುದಾಬಿಯ ಬನಿಯಾಸ್ ಸ್ಲೈಕ್ ಗ್ರೂಪ್ ಆಫ್ ಕಂಪೆನಿ ಹಾಗೂ ಫಾಲ್ಕನ್ ಇಂಡಸ್ಟ್ರೀಸ್
ಪ್ರೈ ಲಿಮಿಟೆಡ್ ಇದರ ಸಂಸ್ಥಾಪಕರು ಹಾಗೂ ಚೇರ್ಮೆನ್ ಕೂಡ ಆಗಿದ್ದಾರೆ.


ಇಂಡಿಯನ್ ಗ್ರ್ಯಾಂಡ್ ಮುಫ್ತಿ ಎ.ಪಿ ಉಸ್ತಾದ್ ಅವರ ಅತ್ಯಾಪ್ತರಲ್ಲಿ ಓರ್ವರಾಗಿರುವ ಅವರು ತನ್ನ ಕರ್ನಾಟಕ ಪ್ರವಾಸದ ಮಧ್ಯೆ ಮಾಣಿ ದಾರುಲ್ ಇರ್ಷಾದ್ ಸಂಸ್ಥೆಗೆ ಹಾಗೂ ತೈಬಾ ಗಾರ್ಡನ್ ಈಶ್ವರಮಂಗಳ ಇಲ್ಲಿಗೂ ಭೇಟಿ ನೀಡಿ ಬಳಿಕ ಚಿಕ್ಕಮಗಳೂರಿಗೆ ನಿರ್ಗಮಿಸಿದರು.

Related posts

ಗುರುವಾಯನಕೆರೆಯಲ್ಲಿ “ಕಿಂಗ್‌ಡಂ ಗೋಲ್ಡ್ & ಡೈಮಂಡ್ ಜ್ಯುವೆಲ್ಸ್” ಉದ್ಘಾಟನೆ

Suddi Udaya

ಸೆ.3: ಬೈಂದೂರಿನಲ್ಲಿ ಶ್ರೀರಾಮ ಕ್ಷೇತ್ರದ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕದ 18ನೇ ವರ್ಧಂತ್ಯುತ್ಸವ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜು-‘ಆಟಿಡೊಂಜಿ ದಿನ’ ಕಾರ್ಯಕ್ರಮ.

Suddi Udaya

ಪುಂಜಾಲಕಟ್ಟೆ: ಪಿಲಾತಬೆಟ್ಟು ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷರಾಗಿ ಜಿ.ಪಂ. ಮಾಜಿ ಉಪಾಧ್ಯಕ್ಷ ಎಂ ತುಂಗಪ್ಪ ಬಂಗೇರ ಆಯ್ಕೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ಮಕ್ಕಳ ಹಕ್ಕುಗಳ ಸಪ್ತಾಹ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳರೋಗ ತಪಾಸಣಾ ಶಿಬಿರ

Suddi Udaya
error: Content is protected !!