July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಂತರಾಷ್ಟ್ರೀಯ ಉದ್ಯಮಿ,‌ ಧಾರ್ಮಿಕ ಮುಖಂಡ ಕುಟ್ಟೂರ್ ಹಾಜಿ ಬೆಳ್ತಂಗಡಿಗೆ ಭೇಟಿ

ಬೆಳ್ತಂಗಡಿ: ಕೇರಳದ ಪ್ರಖ್ಯಾತ “ನಾಲೆಡ್ಜ್ ಸಿಟಿ” ಇಲ್ಲಿನ ಗ್ರ್ಯಾಂಡ್ ಮಸ್ಜಿದ್ ಆಫ್ ಇಂಡಿಯಾ “ಜಾಮಿಯಲ್ ಫುತೂಹ್” ಇದರ ಚೇರ್ಮೆನ್, ಅಂತಾರಾಷ್ಟ್ರೀಯ ಉದ್ಯಮಿ ಸಿ.ಪಿ ಅಬ್ದುಲ್ ರಹಿಮಾನ್ ಹಾಜಿ (ಕೂಟ್ಟೂರ್ ಹಾಜಿ) ಅವರು ಡಿ.14 ರಂದು ಬೆಳ್ತಂಗಡಿಗೆ ಭೇಟಿ ನೀಡಿದರು.

ಅವರನ್ನು ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ನಾಯಕರಾದ ಅಬ್ಬೋನು ಮದ್ದಡ್ಕ, ಖ್ಯಾತ ಉದ್ಯಮಿ ಉಸ್ಮಾನ್ ಹಾಜಿ ಆಲಂದಿಲ, ಹಿರಿಯ ಪತ್ರಕರ್ತ ಹಾಗೂ ಎಸ್‌ವೈಎಸ್ ಝೋನ್ ಮಾಜಿ ಪ್ರಧಾನ ಕಾರ್ಯದರ್ಶಿ ಅಶ್ರಫ್ ಆಲಿಕುಂಞಿ ಮುಂಡಾಜೆ ಬರಮಾಡಿಕೊಂಡು ಗೌರವಿಸಿದರು.

ಸಿ.ಪಿ‌ ಅಬ್ದುಲ್ ರಹಿಮಾನ್ ಅವರು ಅಬುದಾಬಿಯ ಬನಿಯಾಸ್ ಸ್ಲೈಕ್ ಗ್ರೂಪ್ ಆಫ್ ಕಂಪೆನಿ ಹಾಗೂ ಫಾಲ್ಕನ್ ಇಂಡಸ್ಟ್ರೀಸ್
ಪ್ರೈ ಲಿಮಿಟೆಡ್ ಇದರ ಸಂಸ್ಥಾಪಕರು ಹಾಗೂ ಚೇರ್ಮೆನ್ ಕೂಡ ಆಗಿದ್ದಾರೆ.


ಇಂಡಿಯನ್ ಗ್ರ್ಯಾಂಡ್ ಮುಫ್ತಿ ಎ.ಪಿ ಉಸ್ತಾದ್ ಅವರ ಅತ್ಯಾಪ್ತರಲ್ಲಿ ಓರ್ವರಾಗಿರುವ ಅವರು ತನ್ನ ಕರ್ನಾಟಕ ಪ್ರವಾಸದ ಮಧ್ಯೆ ಮಾಣಿ ದಾರುಲ್ ಇರ್ಷಾದ್ ಸಂಸ್ಥೆಗೆ ಹಾಗೂ ತೈಬಾ ಗಾರ್ಡನ್ ಈಶ್ವರಮಂಗಳ ಇಲ್ಲಿಗೂ ಭೇಟಿ ನೀಡಿ ಬಳಿಕ ಚಿಕ್ಕಮಗಳೂರಿಗೆ ನಿರ್ಗಮಿಸಿದರು.

Related posts

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ವಾಣಿ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಮತ್ತು ವಾಣಿ ಶಿಕ್ಷಣ ಸಂಸ್ಥೆಗಳ ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya

ಹಳೆಕೋಟೆ ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ ಹೆಚ್. ಪದ್ಮ ಗೌಡ, ಉಪಾಧ್ಯಕ್ಷರಾಗಿ ಕುಶಾಲಪ್ಪ ಗೌಡ ಪೂವಾಜೆ

Suddi Udaya

ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಶರತ್ ಕೃಷ್ಣ ಪಡ್ವೆಟ್ನಾಯ ಭೇಟಿ : ಸಕಲ ಸಿದ್ಧತೆಗಳ ವೀಕ್ಷಣೆ

Suddi Udaya

ಎಸ್.ಡಿ.ಎಂ ಕಾಲೇಜಿನಲ್ಲಿ ‘ಸಿಗ್ಮಾ’ ಅಸೋಸಿಯೇಷನ್ ಉದ್ಘಾಟನೆ

Suddi Udaya

ನಾಳೆ (ಅ.30): ವಿದ್ಯುತ್ ನಿಲುಗಡೆ

Suddi Udaya

ರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್: ಕಾಯರ್ತಡ್ಕ ದಿವ್ಯಜ್ಯೋತಿ ಶಾಲಾ ವಿದ್ಯಾರ್ಥಿ ಆ್ಯಡ್ಲಿನ್ ಎಲಿಜಬೆತ್ ಜೆರಿನ್ ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ

Suddi Udaya
error: Content is protected !!