22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಲ್ಪಾಡಿ ಸ.ಕಿ.ಪ್ರಾ. ಶಾಲೆಯಲ್ಲಿ ಶಾಲೆಯ ಅಭಿವೃದ್ಧಿಗಾಗಿ ‘ವಿದ್ಯಾನಿಧಿ’ ಯೋಜನೆಗೆ ಚಾಲನೆ

ಬೆಳಾಲು: ಇಲ್ಲಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೊಲ್ಪಾಡಿಯಲ್ಲಿ ಶಾಲಾ ಹಳೆ ವಿದ್ಯಾರ್ಥಿ ಸಂಘದ ನೇತೃತ್ವದಲ್ಲಿ ಶಾಲೆಯ ಅಭಿವೃದ್ಧಿಗಾಗಿ ‘ವಿದ್ಯಾನಿಧಿ’ ಯೋಜನೆಯನ್ನು ಡಿ.14 ರಂದು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಯಲ್ಲಿ ಲೋಕಾರ್ಪಣೆ ಮಾಡಲಾಯಿತು.

ವಿದ್ಯಾನಿಧಿಯನ್ನು ಲೋಕಾರ್ಪಣೆ ಮಾಡಿದ ಕ್ಷೇತ್ರದ ಧರ್ಮದರ್ಶಿ ಹರೀಶ್ ಆರಿಕೋಡಿಯವರು ಮಾತನಾಡಿ,’ ಶಾಲೆ ಎಂಬ ದೇವಾಲಯದಲ್ಲಿ ಎಲ್ಲಾ ಜಾತಿ, ಜನಾಂಗ, ಧರ್ಮದ ಮಕ್ಕಳು ವಿದ್ಯಾಭ್ಯಾಸವನ್ನು ಮಾಡುತ್ತಾರೆ. ಶಾಲೆ ಅಭಿವೃದ್ಧಿ ಹೊಂದಿದಾಗ ಇಡೀ ಊರೇ ಅಭಿವೃದ್ಧಿ ಆಗುತ್ತದೆ. ಹಳೆ ವಿದ್ಯಾರ್ಥಿಗಳ ಈ ಕಾರ್ಯ ಅತ್ಯಂತ ಶ್ರೇಷ್ಠ ವಾದದ್ದು’ ಎಂದು ಶುಭ ಹಾರೈಸಿದರು ಮತ್ತು ಮೊದಲ ದೇಣಿಗೆಯಾಗಿ ಕ್ಷೇತ್ರದ ವತಿಯಿಂದ ದೇಣಿಗೆಯ ಚೆಕ್ ಹಸ್ತಾಂತರ ಮಾಡಿದರು.

ಕಳೆದ 63 ವರ್ಷಗಳ ಹಿಂದೆ ಬೆಳಾಲು ಗ್ರಾಮದಲ್ಲೇ ಮೊಟ್ಟ ಮೊದಲನೆಯ ಶಾಲೆಯಾಗಿ ಸ್ಥಾಪನೆಯಾದ ಈ ಶಾಲೆ ಇತ್ತೀಚಿಗೆ ಮಕ್ಕಳ ಸಂಖ್ಯೆಯಲ್ಲಿ ಕೊರತೆಯಾಗುತ್ತಿರುವ ಸಂದರ್ಭದಲ್ಲಿ ಶಾಲೆಯನ್ನು ಇನ್ನಷ್ಟು ಅಭಿವೃದ್ಧಿಗೊಳಿಸಿ, ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಳೆ ವಿದ್ಯಾರ್ಥಿಗಳ ಸೇರಿಕೊಂಡು ‘ವಿದ್ಯಾನಿಧಿ’ಎಂಬ ಹೊಸದಾದ ಯೋಜನೆಯನ್ನು ಪ್ರಾರಂಭಿಸುತ್ತಿದ್ದು,ಇದರಲ್ಲಿ ಶಾಲಾ ಹಳೆ ವಿದ್ಯಾರ್ಥಿಗಳು, ವಿದ್ಯಾಭಿಮಾನಿಗಳು ತಮ್ಮ ದುಡಿಮೆಯ ಒಂದಂಶವನ್ನು ಶಾಲಾ ಚಟುವಟಿಕೆಗಳಿಗೆ ಪ್ರತಿ ತಿಂಗಳು ಅಥವಾ ವರ್ಷಕ್ಕೊಮ್ಮೆ ಯೋಜನೆಯ ಖಾತೆಗೆ ಸ್ಕ್ಯಾನ್ ಮಾಡುವ ಅವಕಾಶ ಕಲ್ಪಿಸಲಾಗಿದೆ.


ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಸುರೇಶ್ ಮಾಚಾರ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಲೋಕೇಶ್ ಓಣಾಜೆ, ಉಪಾಧ್ಯಕ್ಷರಾದ ಲೋಕೇಶ್ ಮಂಡಾಲ್, ಕೋಶಾಧಿಕಾರಿ ಕರಿಯಣ್ಣ ಬೇರಿಕೆ ಹಾಗೂ ಶಾಲಾ ಎಸ್‌.ಡಿ.ಎಂ.ಸಿ.ಅಧ್ಯಕ್ಷರಾದ ಹರೀಶ್ ಕೆರೆಕೋಡಿ ಮತ್ತು ಪೋಷಕರು, ಶಾಲಾ ಹಳೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಒಕ್ಕಲಿಗ ಗೌಡರ ಯುವ ವೇದಿಕೆ ನೇತೃತ್ವದಲ್ಲಿ,ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಕೆಂಪೇಗೌಡ ಜಯಂತಿ ಆಚರಣೆ, ಬೃಹತ್ ರಕ್ತದಾನ ಶಿಬಿರ ಮತ್ತು ಉಚಿತ ವೈದ್ಯಕೀಯ ತಪಾಸಣಾ ಶಿಬಿರ

Suddi Udaya

ಇಳಂತಿಲ ಶಾಲೆಗೆ ನುಗ್ಗಿದ ಕಳ್ಳರು: ಕಪಾಟಿನಲ್ಲಿ ಇಟ್ಟಿದ್ದ ನಗದು ಕಳವು

Suddi Udaya

ಧರ್ಮಸ್ಥಳ ಪ್ರಕರಣ: ಯೂಟ್ಯೂಬರ್ ಸಂತೋಷ್ ಕಡಬ ಬೆಂಗಳೂರು ಪೊಲೀಸ್ ವಶಕ್ಕೆ

Suddi Udaya

ಧರ್ಮಸ್ಥಳಕ್ಕೆ ಬಂದ ವ್ಯಕ್ತಿ ನಾಪತ್ತೆ: ಪ್ರಕರಣ ದಾಖಲು

Suddi Udaya

ನೆರಿಯ : ಗ್ರಾಮ ಪಂಚಾಯತಿನ ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಪ್ರಮೀಳರವರಿಗೆ ಹಿಮಾಲಯ ವೃಕ್ಷಮಣಿದಾರರ ಪ್ರಶಸ್ತಿ ಪ್ರದಾನ

Suddi Udaya
error: Content is protected !!