22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳಾಲು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ಗ್ರಾಮ ಸಮಿತಿಯ ವಾರ್ಷಿಕ ಕ್ರೀಡಾಕೂಟ

ಬೆಳಾಲು : ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಬೆಳಾಲು , ಗ್ರಾಮ ಸಮಿತಿ ಇದರ ವಾರ್ಷಿಕ ಕ್ರೀಡಾಕೂಟ ನಡೆಯಿತು. ಕ್ರೀಡಾಕೂಟದ ಉದ್ಘಾಟನೆಯನ್ನು ರಾಜಪ್ಪ ಗೌಡ ಪುಚ್ಚೆಹಿತ್ತಿಲು ಮತ್ತು ನೋಣಯ್ಯ ಗೌಡ ಕೊಲ್ಲಿಮಾರು ಇವರು ದೀಪ ಬೆಳಗಿಸಿ ಉದ್ಘಾಟಿಸಿ, ಕ್ರೀಡಾಕೂಟದ ಯಶಸ್ವಿಗೆ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಶ್ರೀಮತಿ ಕವಿತಾ ಉಮೇಶ್ ಗೌಡ ಮಂಜೊತ್ತು ಕ್ರೀಡೆಯನ್ನು ಕ್ರೀಡಾ ಸ್ಫೂರ್ತಿಯಿಂದ ತೆಗೆದುಕೊಂಡು, ಎಲ್ಲರೂ ಒಗ್ಗಟ್ಟಾಗಿ ಬಾಳಬೇಕೆಂದು ತಿಳಿಸಿದರು.
ಗ್ರಾಮ ಸಮಿತಿಯ ಅಧ್ಯಕ್ಷ ಧರ್ಮೇಂದ್ರ ಗೌಡ ಪುಚ್ಚೆಹಿತ್ತಿಲು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಗ್ರಾಮ ಸಮಿತಿಯ ಗೌರವಾಧ್ಯಕ್ಷರಾದ ವಿಜಯ ಗೌಡ ಸೌತೆಗದ್ದೆ, ಮಹಿಳಾ ವೇದಿಕೆಯ ಗೌರವಾಧ್ಯಕ್ಷೆ ಶ್ರೀಮತಿ ಕನ್ನಿಕಾ ಪದ್ಮ ಗೌಡ, ಯುವ ವೇದಿಕೆಯ ಗೌರವಾಧ್ಯಕ್ಷ ಉಮೇಶ್ ಗೌಡ ಮಂಜೊತ್ತು, ರಾಜ್ಯ ಮಟ್ಟದ ಯೋಗಪಟು ಧನಂಜಯ ಗೌಡ ಹೋಂಪೆಜಾಲು, ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ಲಕ್ಷ್ಮಣ ಗೌಡ ಸೌತೆಗದ್ದೆ, ಯುವ ವೇದಿಕೆಯ ಅಧ್ಯಕ್ಷ ಸಂಜೀವ ಗೌಡ ಕಾಡಂಡ, ಮಹಿಳಾ ವೇದಿಕೆಯ ಅಧ್ಯಕ್ಷೆ ಶ್ರೀಮತಿ ಲತಾ ಕೇಶವ ಗೌಡ, ತಾಲೂಕು ಮಹಿಳಾ ವೇದಿಕೆಯ ಕಾರ್ಯದರ್ಶಿ ಶ್ರೀಮತಿ ಲೀಲಾ ಸೌತೆಗದ್ದೆ ಮತ್ತು ಗ್ರಾಮ ಸಮಿತಿಯ ಪದಾಧಿಕಾರಿಗಳು ಹಾಗೂ ಸ್ವಜಾತಿ ಬಾಂಧವರು ಉಪಸ್ಥಿತರಿದ್ದರು.

ಮಹಿಳಾ ವೇದಿಕೆಯ ಕಾರ್ಯದರ್ಶಿ ಶ್ರೀಮತಿ ಜಯಶ್ರೀ ಮೋಹನ್ ಗೌಡ ನಿರೂಪಿಸಿದ ಕಾರ್ಯಕ್ರಮದಲ್ಲಿ ಗ್ರಾಮ ಸಮಿತಿಯ ಕಾರ್ಯದರ್ಶಿ ಶೇಖರ ಗೌಡ ಕೊಲ್ಲಿಮಾರು ಸ್ವಾಗತಿಸಿ, ಯುವ ವೇದಿಕೆಯ ಕಾರ್ಯದರ್ಶಿ ಸುಖೇಶ್ ಗೌಡ ಅರಿಪಾದೆ ಧನ್ಯವಾದವಿತ್ತರು.

Related posts

ರಕ್ತೇಶ್ವರಿ ಪದವು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ವಿ.ಹಿಂ.ಪ. ಮತ್ತು ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಇಂದಬೆಟ್ಟು-ನಾವೂರು ವತಿಯಿಂದ ವಿಜಯರತ್ನ ಪ್ರಶಸ್ತಿ ಪುರಸ್ಕೃತ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಗೌರವಾರ್ಪಣೆ

Suddi Udaya

ನ.23 : ವಿಮುಕ್ತಿ ಸ್ವ-ಸಹಾಯ ಸಂಘಗಳ ಟ್ರಸ್ಟ್ ಲಾಯಿಲ ಇದರ ಬೆಳ್ಳಿ ಹಬ್ಬ ಸಂಭ್ರಮ

Suddi Udaya

ಶಿಬರಾಜೆ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ನೂತನ ಕೇಂದ್ರ ಕಛೇರಿ ಶ್ರೀ ಗುರುಸಾನಿಧ್ಯ ವಾಣಿಜ್ಯ ಸಂಕೀರ್ಣ ಲೋಕಾರ್ಪಣೆ ಮತ್ತು ಆಡಳಿತ ಕಛೇರಿಯ ಉದ್ಘಾಟನೆ

Suddi Udaya

ರಾಜ್ಯಮಟ್ಟದ ನೃತ್ಯ ಸ್ಪರ್ಧೆ: ಬೀಟ್ ರಾಕರ್ಸ್ ಡ್ಯಾನ್ಸ್ ಅಕಾಡೆಮಿ ದ್ವಿತೀಯ ಸ್ಥಾನ

Suddi Udaya
error: Content is protected !!