22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ದಿನಾಚರಣೆ : ಯಕ್ಷ ಶಿಕ್ಷಣ ವಿದ್ಯಾರ್ಥಿಗಳಿಂದ ಯಕ್ಷಗಾನ ಪ್ರದರ್ಶನ

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿನ ಪ್ರತಿಭಾ ದಿನಾಚರಣೆಯ ಸಂದರ್ಭದಲ್ಲಿ ಯಕ್ಷ ಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಯಕ್ಷ ಶಿಕ್ಷಣ ವಿದ್ಯಾರ್ಥಿಗಳಿಂದ ಪೂರ್ವರಂಗ ಮತ್ತು ಯಕ್ಷಗಾನ ಮೇದಿನಿ ನಿರ್ಮಾಣ ಪ್ರದರ್ಶನಗೊಂಡಿತು. ಒಟ್ಟು 30 ವಿದ್ಯಾರ್ಥಿಗಳು ಪ್ರದರ್ಶನದಲ್ಲಿ ಪಾಲ್ಗೊಂಡಿದ್ದರು. ಟ್ರಸ್ಟ್ ನ ಸಂಚಾಲಕರಾದ ವಾಸುದೇವ ಐತಾಳ್ ಇವರು ಪಟ್ಲ ಫೌಂಡೇಶನ್ ನಿಂದ ಶಾಲೆಗಳಲ್ಲಿ ನಡೆಯುವ ಯಕ್ಷ ಶಿಕ್ಷಣ ಕಾರ್ಯಕ್ರಮ ಬಗ್ಗೆ ತಿಳಿಸುತ್ತಾ ನಿಡ್ಲೆ ಶಾಲೆಯಲ್ಲಿ ಮೂರು ವರ್ಷದಿಂದ ಈ ಕಾರ್ಯಕ್ರಮ ನಡೆಯುತ್ತಿದ್ದು ಮಕ್ಕಳು ಭಾಗವಹಿಸುವಂತೆ ಪೋಷಕರು ಕೂಡ ಪ್ರೇರೇಪಿಸಬೇಕು ಎಂಬ ಕಿವಿ ಮಾತು ಹೇಳಿದರು.

ಈ ಕಾರ್ಯಕ್ರಮಕ್ಕೆ ಫೌಂಡೇಶನ್ ವತಿಯಿಂದ ರೂ. 15000 ನ ಚೆಕ್ ನೀಡಿದರು. ಬೆಳ್ತಂಗಡಿ ಘಟಕದ ಅಧ್ಯಕ್ಷ ಸುರೇಶ್ ಶೆಟ್ಟಿ ಉಪಸ್ಥಿತರಿದ್ದರು. ಯಕ್ಷ ಶಿಕ್ಷಕರಾದ ಈಶ್ವರ ಪ್ರಸಾದ್, ಶಾಲಾ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ಎಸ್ ಡಿ ಎಮ್ ಸಿ ಅಧ್ಯಕ್ಷರು ಮತ್ತು ಸದಸ್ಯರು, ಪೋಷಕರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು. ಈ ಸಂದರ್ಭದಲ್ಲಿ ಯಕ್ಷ ಗುರುಗಳಾದ ಈಶ್ವರ ಪ್ರಸಾದ್ ಇವರನ್ನು ಗೌರವಿಸಲಾಯಿತು. ಒಟ್ಟಿನಲ್ಲಿ ಕಾರ್ಯಕ್ರಮ ಉತ್ತಮವಾಗಿ ಮೂಡಿಬಂದಿತು.

Related posts

ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ: ಧ್ವಜಾರೋಹಣ

Suddi Udaya

ಸವಣಾಲು ಶ್ರೀ ಭೈರವ ಕ್ಷೇತ್ರಕ್ಕೆ ನೂತನ ಶಿಲಾಮಯ ಗಭ೯ಗುಡಿಯ ಶಿಲೆಗಳ ಮೆರವಣಿಗೆ

Suddi Udaya

ಯುಟ್ಯೂಬರ್ ಸಮೀರ್ ಎಂ.ಡಿಗೆ ಮಂಗಳೂರಿನ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು

Suddi Udaya

ಧರ್ಮಸ್ಥಳ: ಜೋಡುಸ್ಥಾನ ನಿವಾಸಿ ಟೈಲರ್ ಬಿ. ಕೃಷ್ಣ ಮಡಿವಾಳ ನಿಧನ

Suddi Udaya

ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ಕಲರವ-2025 ಕಾರ್ಯಕ್ರಮ ಉದ್ಘಾಟನೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಕಡಿರ ಬನದಲ್ಲಿ ನಾಲ್ಕು ನಾಗನ ಕಲ್ಲುಗಳು ಹಾಗೂ ಎರಡು ಮಣ್ಣಿನ ಮಡಕೆ, ಒಂದು ತಿಬಿಲೆ ಪತ್ತೆ

Suddi Udaya
error: Content is protected !!