22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘದ ವತಿಯಿಂದ ದಿ| ಅಮ್ಮುಕುಮಾರ್ ರವರಿಗೆ ನುಡಿನಮನ

ಬೆಳ್ತಂಗಡಿ : ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘ ತಾಲೂಕು ಘಟಕ ಬೆಳ್ತಂಗಡಿ, ಇದರ ಗೌರವ ಸಲಹೆಗಾರರು ಅಮ್ಮು ಕುಮಾರ್ ಅಳದಂಗಡಿ ಇವರು ಇತ್ತೀಚೆಗೆ ನಿಧನರಾಗಿದ್ದು ತಾಲೂಕು ಘಟಕದ ವತಿಯಿಂದ ನುಡಿನಮನ ಕಾರ್ಯಕ್ರಮವು ಬೆಳ್ತಂಗಡಿಯ ಡಾ|| ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಡಿ.14 ರಂದು ನಡೆಯಿತು.

ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘದ ನಿಕಟಪೂರ್ವ ಗೌರವಾಧ್ಯಕ್ಷ ಶೀನ ಮಾಸ್ತಿಕಟ್ಟೆರವರು ದೀಪ ಬೆಳಗಿ, ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಸಂಘಟನೆಗೆ ಮತ್ತು ಸಮುದಾಯಕ್ಕೆ ಅವರು ನೀಡಿದ ಕೊಡುಗೆಗಳನ್ನು ವಿವರಿಸುವುದರ ಮೂಲಕ ನುಡಿನಮನ ಸಲ್ಲಿಸಿದರು.

ಆದಿದ್ರಾವಿಡ ಸಮುದಾಯದ ಮತ್ತು ಸಂಘಟನೆಯ ಪ್ರಮುಖರಾದ ವೆಂಕಪ್ಪ ಪಿ.ಎಸ್, ಶೀಮತಿ ಯಮುನ ನಾರಾವಿ, ಗೋಪಾಲಕೃಷ್ಣ ಕುಕ್ಕಳ, ರಾಘವ ಕಲ್ಮಂಜ, ದಿನೇಶ್ ಕೆ, ಕೊಕ್ಕಡ, ಶೇಖರ್ ವಿ. ಧರ್ಮಸ್ಥಳ, ಶರತ್ ಕೊಕ್ಕಡ, ಇವರುಗಳು ದಿ| ಅಮ್ಮುಕುಮಾರ್ ಇವರ ಬಾಲ್ಯದ ಕಷ್ಟಕರ ಜೀವನ, ಕಲಿಕೆ ಮತ್ತು ಉದ್ಯೋಗವನ್ನು ಪಡೆದುಕೊಳ್ಳುವಲ್ಲಿನ ಆಸಕ್ತಿ, ವ್ಯಕ್ತಿತ್ವ, ಅವರ ಸಂತೃಪ್ತ ಸಾಂಸಾರಿಕ ಜೀವನ, ಹಾಗೂ ಸಾಮಾಜಿಕವಾಗಿ, ಸಂಘಟನಾತ್ಮಕವಾಗಿ ಸಮುದಾಯಕ್ಕೆ ಓರ್ವ ವ್ಯಕಿಯಾಗಿ ಮತ್ತು ಶಕ್ತಿಯಾಗಿ ನೀಡಿದ ಕೊಡುಗೆಗಳನ್ನು ಮನನ ಮಾಡಿಕೊಳ್ಳುವುದರ ಮೂಲಕ ಅವರಿಗೆ ನುಡಿನಮನ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ತಾಲೂಕು ಮತ್ತು ಗ್ರಾಮ ಸಮಿತಿಯ ಪದಾಧಿಕಾರಿಗಳು, ಆದಿದ್ರಾವಿಡ ಸಮುದಾಯದ ಪ್ರಮುಖರು ಉಪಸ್ಥಿತರಿದ್ದರು.
ಕಾರ್ಯಕ್ರವನ್ನು ತಾಲೂಕು ಘಟಕದ ಪ್ರಧಾನ ಕಾರ್ಯದರ್ಶಿಯಾದ ಶೇಖರ್ ವಿ. ಧರ್ಮಸ್ಥಳ ಸ್ವಾಗತಿಸಿ, ಧನ್ಯವಾದ ನೀಡಿದರು.

Related posts

ಪೆರಿಂಜೆ ಶ್ರೀ ಧ.ಮಂ.ಅ. ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಹಸಿರು ಕ್ರಾಂತಿ ರೈತರ ಕಲ್ಯಾಣ ಮತ್ತು ಯೋಗ ಕ್ಷೇಮಕ್ಕಾಗಿ ಪ್ರತಿ ಗ್ರಾಮ ಮಟ್ಟದಲ್ಲೂ ರೈತ ಸಂಘಟನೆ ರಚನೆ: ಯುವ ರೈತರನ್ನು ಒಗ್ಗೂಡಿಸುವ ಸಲುವಾಗಿ ರೈತ ಸಂಘವನ್ನು ಸಧೃಡವಾಗಿ ಕಟ್ಟುವ ಉದ್ದೇಶ: ಆದಿತ್ಯ ಕೊಲ್ಲಾಜೆ

Suddi Udaya

ವೆಯಿಟ್ ಲಿಫ್ಟಿಂಗ್ ನಲ್ಲಿ ಗರ್ಡಾಡಿಯ ರಕ್ಷಿತ್ ಪೈ ಪ್ರಥಮ ಸ್ಥಾನ

Suddi Udaya

ತೆಕ್ಕಾರು: ಹಿಟಾಚಿ ತುಂಬಿದ್ದ ಟಿಪ್ಪರ್ ಪಲ್ಟಿ

Suddi Udaya

ಅನಾರು ದೇವಸ್ಥಾನ ವರ್ಷಾವಧಿ ಜಾತ್ರಾ ಮಹೋತ್ಸವ: ತೋರಣ ಮುಹೂರ್ತ, ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ಕ್ಯಾಲೆಂಡರ್ ಬಿಡುಗಡೆ

Suddi Udaya
error: Content is protected !!