23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬೆಳ್ತಂಗಡಿ: ಸರಕಾರಿ ಶಾಲೆಗಳ ನೂತನ ಕೊಠಡಿ ನಿರ್ಮಾಣಕ್ಕೆ ರೂ.1.715 ಕೋಟಿ ಅನುದಾನ ಮಂಜೂರು: ಹರೀಶ್ ಪೂಂಜ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಲವು ಸರಕಾರಿ ಶಾಲೆಗಳಿಗೆ ವಿದ್ಯಾರ್ಥಿಗಳ ಸಂಖ್ಯಾಬಲಕ್ಕೆ ಅನುಗುಣವಾಗಿ ಕೊಠಡಿ ನಿರ್ಮಾಣಕ್ಕೆ ರೂ.1.715 ಕೋಟಿ ಅನುದಾನ ಮಂಜೂರು ಗೊಂಡಿರುತ್ತದೆ.

ಗ್ರಾಮೀಣ ವಿದ್ಯಾರ್ಥಿಗಳ ವಿದ್ಯಾರ್ಜನೆಯ ಹಿತದೃಷ್ಟಿಯಿಂದ ನೂತನ ಕೊಠಡಿಗಳ ನಿರ್ಮಾಣಕ್ಕೆ ಅನುದಾನ ಒದಗಿಸುವಂತೆ ಸರಕಾರಕ್ಕೆ ಶಾಸಕರಾದ ಹರೀಶ್ ಪೂಂಜರವರು ಮನವಿಯನ್ನು ಸಲ್ಲಿಸಿದ್ದು, ಸರಕಾರ ಶಾಸಕರ ಮನವಿಗೆ ಸ್ಪಂದಿಸಿ ತಾಲೂಕಿನ 9 ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಒಟ್ಟು 10 ನೂತನ ಕೊಠಡಿ ನಿರ್ಮಾಣ ಮಾಡಲು ರೂ.1.00 ಕೋಟಿ 71.50 ಲಕ್ಷ ಅನುದಾನವನ್ನು ಮಂಜೂರುಗೊಳಿಸಿರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಅನುದಾನ ಬಿಡುಗಡೆಗೊಳಿಸಿದ ರಾಜ್ಯ ಸರಕಾರಕ್ಕೆ ಹಾಗೂ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪರವರಿಗೆ ಶಾಸಕರಾದ ಹರೀಶ್ ಪೂಂಜರವರು ಧನ್ಯವಾದಗಳನ್ನು ಸಲ್ಲಿಸಿರುತ್ತಾರೆ.

Related posts

ಉಜಿರೆ ಬಸ್ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ

Suddi Udaya

ಎ.25: ಮರೋಡಿ ದೇವಸ್ಥಾನದಲ್ಲಿ ಚಂಡಿಕಾಯಾಗ, ಮೃತ್ಯುಂಜಯ ಹೋಮ

Suddi Udaya

ಸಾವ್ಯ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ಟ್ರಸ್ಟ್ ವತಿಯಿಂದ ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಾಚರಣೆ ಮತ್ತು ಸೈನಿಕರ ಸುರಕ್ಷತೆಗಾಗಿ ವಿಶೇಷ ಭಜನೆ ಮತ್ತು ಭಾರತ ಮಾತೆಗೆ ಪೂಜಾ ಕಾರ್ಯಕ್ರಮ

Suddi Udaya

ಕಣಿಯೂರು ವಲಯದ ಪದ್ಮುಂಜ ಕಾರ್ಯಕ್ಷೇತ್ರದಲ್ಲಿ ಶ್ರೀ ಗೌರಿ ಜ್ಞಾನ ವಿಕಾಸ ಕೇಂದ್ರದಲ್ಲಿ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಇಂದಬೆಟ್ಟು ಗ್ರಾ.ಪಂ. ನಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಪುತ್ತೂರು ನರಿಮೊಗರು ಕೊಡಿನೀರುನಲ್ಲಿ, ಮಾರುತಿ ಕಾರುಗಳ ನಡುವೆ ಅಪಘಾತ: ಕೊಕ್ಕಡದ ಮಹಿಳೆಗೆ ಗಾಯ ಆಸ್ಪತ್ರೆಗೆ ದಾಖಲು

Suddi Udaya
error: Content is protected !!