September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇಲಂತಬೆಟ್ಟು ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ನಾಗಬ್ರಹ್ಮಮಂಡಲ ಸೇವೆ ಕಾರ್ಯಕ್ರಮ , ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಮೇಲಂತಬೆಟ್ಟು ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ಲೋಕಕಲ್ಯಾಣಾರ್ಥವಾಗಿ ವೇದಮೂರ್ತಿ ಶ್ರೀ ಗೋಪಾಲಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ಜನವರಿ 10 ಹಾಗೂ 11 ರಂದು ನಡೆಯುವ ಅಷ್ಟೋತ್ತರ ಶತಸಂಖ್ಯೆ ನಾರಿಕೇಳ ಶ್ರೀ ಮಹಾಗಣಪತಿ ಹವನ, ನಾಗತನುತರ್ಪಣ ಹಾಗೂ ನಾಗಬ್ರಹ್ಮಮಂಡಲ ಸೇವೆ ಕಾರ್ಯಕ್ರಮ ವಿವಿಧ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ನಡೆಯಲಿದ್ದು, ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಡಿ 15 ರಂದು ದೇವಸ್ಥಾನದಲ್ಲಿ ಸಾಹಿತಿ ಪ.ರಾಮಕೃಷ್ಣ ಶಾಸ್ತ್ರೀ ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಈ ವೇಳೆ ವೇದಮೂರ್ತಿ ಮುಂಡೂರು ಶ್ರೀ ಗೋಪಾಲಕೃಷ್ಣ ತಂತ್ರಿಗಳು ಮಡಂತ್ಯಾರು, ವಿದ್ಯೇಶ ಅಲೆವೂರಾಯ ಮಡಂತ್ಯಾರು, ರಂಗನಾಥ ನೂರಿತ್ತಾಯ ಕಡಂಬು, ಅನಂತಕೃಷ್ಣ ಇರ್ವತ್ರಾಯ ಮದ್ದಡ್ಕ, ಅನಂತ ಯಡಪಡಿತ್ತಾಯ ಕಳಾಯಿ, ಆದಿತ್ಯ ಬಾಗಲೋಡಿ, ಬೆಂಗಳೂರು, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಾರಾಯಣ ಪೂಜಾರಿ, ಗ್ರಾ.ಪಂ ಉಪಾಧ್ಯಕ್ಷ ಲೋಕನಾಥ ಶೆಟ್ಟಿ, ಬಾಲಕೃಷ್ಣ ಶೆಟ್ಟಿ ಸಾಲಿಗ್ರಾಮ, ಪ್ರಭಾಕರ ಆಚಾರ್ಯ, ಶೈಲೇಶ್ ಕುಮಾರ್ ಕುರ್ತೊಡಿ, ಚಂದ್ರರಾಜ್ ನೂಜೆಲು, ಗಣೇಶ್ ಭಂಡಾರಿ, ನಾಗೇಶ್ ಮೂಡಲ, ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಯುವವಾಹಿನಿ ವೇಣೂರು ಘಟಕದ ವಿನೂತನ ಯೋಜನೆ “ಬೆಳಕು” ಕಾರ್ಯಕ್ರಮ

Suddi Udaya

ಜು.28: ಬೆಳ್ತಂಗಡಿ ತುಳುನಾಡ ಒಕ್ಕೂಟದ ವತಿಯಿಂದ ಚೆನ್ನೆಮಣೆ ಗೊಬ್ಬು ಹಾಗೂ ಸಂಧಿ ಪಾರ್ದನ ಸುಗ್ಗಿಪು

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮಹಿಳಾ ವಿಭಾಗದಿಂದ ಮಹಿಳಾ ಸಪ್ತಾಹ..

Suddi Udaya

ಚಿಬಿದ್ರೆ ನಿವಾಸಿ ಕಟ್ಟೆ ಅಬ್ದುಲ್ ರಝಾಕ್ ಎ.ಕೆ. ಹೃದಯಾಘಾತದಿಂದ ನಿಧನ

Suddi Udaya

ವಕ್ಫ್ ತಿದ್ದುಪಡಿ ಮಸೂದೆಯ ವರದಿಯನ್ನು ರಾಜ್ಯಸಭೆಯಲ್ಲಿ ಮಂಡಿಸಿದ ಜಂಟಿ ಸಂಸದೀಯ ಸಮಿತಿಯ ನಡೆಯನ್ನು ವಿರೋಧಿಸಿ ಮದ್ದಡ್ಕದಲ್ಲಿ ಬಿತ್ತಿಪತ್ರ ಪ್ರದರ್ಶನ

Suddi Udaya

ಕಿಲ್ಲೂರು ನಿವಾಸಿ ಗೀತಾ ಹೋಟೆಲ್ ಮಾಲಕ ಶಿವಾನಂದ ಪೂಜಾರಿ ನಿಧನ

Suddi Udaya
error: Content is protected !!