July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಬೀದಿ ನಾಯಿ ಕಡಿತದ ಮತ್ತು ರೇಬಿಸ್ ರೋಗದ ಬಗ್ಗೆ ಮಾಹಿತಿ

ಉಜಿರೆ: ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಬೀದಿ ನಾಯಿ ಕಡಿತದ ಮತ್ತು ರೇಬಿಸ್ ರೋಗದ ಬಗ್ಗೆ ಮಾಹಿತಿ ಕಾರ್ಯಕ್ರಮವು ನಡೆಯಿತು.

ಇತ್ತೀಚೆಗೆ ಬೀದಿ ನಾಯಿಗಳ ದಾಳಿಯಿಂದ ಅನೇಕ ಮಕ್ಕಳು, ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದನ್ನು ಘನನ್ಯಾಯಾಲಯವು ಸುಮೋಟೋ ಕೇಸ್ ದಾಖಲಿಸಿದ್ದು, ಪ್ರತೀ ಇಲಾಖೆಗಳ ಜವಾಬ್ದಾರಿಯನ್ನು ಕೂಡ ನಿಗದಿಪಡಿಸಿದೆ. ನಮ್ಮ ಇಲಾಖೆ ಕೂಡಾ ಸೂಚನೆ ನೀಡಿದ್ದು ಜಾಗೃತಿ ಮೂಡಿಸಿ ವರದಿ ನೀಡುವಂತೆ ಸೂಚಿಸಿದೆ.ಪೋಷಕರ ಎಚ್ಚರಿಕೆ, ಇವುಗಳ ಬಗ್ಗೆ ಜಾಗೃತಿ ಮೂಡಿಸಿ. ಅಲ್ಲದೆ ಶಾಲಾ ಅಕ್ಕ ಪಕ್ಕದಲ್ಲಿ ಬೀದಿ ನಾಯಿಗಳು ಕಂಡುಬಂದರೆ ತಕ್ಷಣ ಗ್ರಾಮ ಪಂಚಾಯತ್, ಆರೋಗ್ಯ ಇಲಾಖೆ, ವೆಟರಿನರಿ ಇಲಾಖೆ, ಪೊಲೀಸ್ ಇಲಾಖೆಗೆ ಮಾಹಿತಿ ನೀಡಿ. ಅಲ್ಲದೆ, ಉಳಿಕೆಯಾದ ಬಿಸಿಯೂಟ, ತಿಂಡಿ ತಿನಸುಗಳನ್ನು ಶಾಲಾ ವರಾಂಡ ಅಥವಾ ಸುತ್ತ ಮುತ್ತ, ಎಲ್ಲೆಂದರಲ್ಲಿ ಚೆಲ್ಲದಂತೆ ಜಾಗ್ರತೆ ವಹಿಸಿ. ಕೆಲವೊಂದು ನಾಯಿಗಳು ಶಾಲಾ ವರಾಂಡದಲ್ಲೇ ಸುತ್ತುತ್ತಿರುತ್ತದೆ ಒಟ್ಟಾರೆಯಾಗಿ ನಮ್ಮ ಮಕ್ಕಳು ಬೀದಿನಾಯಿಗಳ ಆಕ್ರಮಣಕ್ಕೆ ತುತ್ತಾಗದಿರಲಿ ಎಂದು ಉಜಿರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನೀರಿಕ್ಷಣಾಧಿಕಾರಿ ಸ್ವತಂತ್ರ ರಾವ್ ಹಾಗೂ ಮುಂಡಾಜೆ ಪ್ರಾಥಮಿಕ ಆರೋಗ್ಯ ನೀರಿಕ್ಷಣಾಧಿಕಾರಿ ಗೌರೀಶ್ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ವಿದ್ಯಾ ಕಿರಣ್ ನಿಮ್ಮ ಪೋಷಕರಿಗೆ ಈ ಮಾಹಿತಿಯನ್ನು ತಿಳಿಸಿ ಎಂದರು.
ವೇದಿಕೆಯಲ್ಲಿ ಹಿರಿಯ ಶಿಕ್ಷಕ ರಾಧಾಕೃಷ್ಣ ಉಪಸ್ಥಿತರಿದ್ದರು. ಶಿಕ್ಷಕಿಯಾದ ಉಷಾ ವಂದಿಸಿದರು. ಲಲಿತಾ ಎಂ ಶೆಟ್ಟಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

Related posts

ಗುರುವಾಯನಕೆರೆ ಎಕ್ಸೆಲ್ ಟೆಕ್ನೊ ಸ್ಕೂಲ್ “ಲುಮಿನ್ಯಾ” ಪ್ರಾರಂಭೋತ್ಸವ ಆರಂಭ, ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿ ಪರಿಷ್ಕೃತ ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ ಪ್ರಾರಂಭ

Suddi Udaya

ಸುಲ್ಕೇರಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಅನಾರೋಗ್ಯದಿಂದ ಬಳಲುತ್ತಿರುವ ಚೈತ್ರೇಶ್ ಮೊಗ್ರು ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಶಿಶಿಲ ಸ.ಉ.ಹಿ.ಪ್ರಾ. ಶಾಲೆಗೆ ಯೂತ್ ಫಾರ್ ಸೇವಾ ಎನ್.ಜಿ ಒ ಸಂಸ್ಥೆಯ ವತಿಯಿಂದ ಡಿಜಿಟಲ್ ಸ್ಮಾರ್ಟ್ ಕ್ಲಾಸ್ ಅಳವಡಿಕೆ

Suddi Udaya
error: Content is protected !!