July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಓಡಿಲ್ನಾಳ ಸ. ಉ. ಪ್ರಾ. ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ

ಓಡಿಲ್ನಾಳ : ಇಲ್ಲಿಯ ಸ. ಉ. ಪ್ರಾ. ಶಾಲೆಯಲ್ಲಿ 2025 -26 ನೇ ಸಾಲಿನ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಕಾರ್ಯಕ್ರಮ ಡಿ 14 ರoದು ಶಾಲಾ ಎಸ್ ಡಿ ಎಮ್ ಸಿ ಅಧ್ಯಕ್ಷ ಸಂತೋಷ್ ಶೆಟ್ಟಿ ಮದ್ದಡ್ಕ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಕಾರ್ಯಕ್ರಮವನ್ನು ನಾವೂರು ಸರಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ರಾಜೇಂದ್ರ ಭಟ್ ಉದ್ಘಾಟಿಸಿ, ತಾನು ಈ ಶಾಲೆಯ ಹಿರಿಯ ವಿದ್ಯಾರ್ಥಿ ಎಂಬ ಹೆಮ್ಮೆಯನ್ನು ವ್ಯಕ್ತಪಡಿಸುತ್ತಾ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ವೇದಿಕೆಯಲ್ಲಿ ಕುವೆಟ್ಟು ಗ್ರಾ.ಪಂ. ಅಧ್ಯಕ್ಷೆ ಭಾರತೀ ಶೆಟ್ಟಿ , ಪಂಚಾಯತ್ ಪ್ರತಿನಿಧಿ ಶ್ರೀಮತಿ ಆನಂದಿ, ಎಸ್ ಡಿ ಎಂ ಸಿ ಉಪಾಧ್ಯಕ್ಷೆ ಶ್ರೀಮತಿ ನಸೀಮ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಅರುಣ್ ಸುಮಿತ್, ಶಾಲಾ ದೈಹಿಕ ಶಿಕ್ಷಕ ಸರ್ಕಾರಿ ನೌಕರರ ಸಂಘ ಬೆಳ್ತಂಗಡಿಯ ಅಧ್ಯಕ್ಷ ಜಯರಾಜ್ ಜೈನ್, ಉಳ್ಳಾಲ ಕೆ ಪಾಂಡಿರಾಜ್ ನರ್ಸಿಂಗ್ ಕಾಲೇಜ್ ಉಪ ಪ್ರಾಂಶುಪಾಲರು ಶ್ರೀಮತಿ ಪದ್ಮಾವತಿ , ಪುಂಜಾಲಕಟ್ಟೆ ಪ್ರೌಢಶಾಲಾ ಶಿಕ್ಷಕ ಕೆ ಧರಣೇಂದ್ರ ಜೈನ್ , ಮಿತ್ತ ಬಾಗಿಲು ಸರಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಗೋಪಾಲ್ , ಪುಂಜಾಲಕಟ್ಟೆ ಕ್ಲಸ್ಟರ್ ಸಿ ಆರ್ ಪಿ ಚೇತನ, ನಿವೃತ್ತ ಮುಖ್ಯ ಶಿಕ್ಷಕಿ ಫೆಲ್ಸಿ ಫಾತಿಮಾ ಮೋರಸ್ , ಮುಖ್ಯ ಗುರುಗಳು ಉಷಾ ಪಿ, ಎಸ್ ಡಿ ಎಮ್ ಸಿ ನಿಕಟಪೂರ್ವ ಅಧ್ಯಕ್ಷ ರಾಜಪ್ರಕಾಶ್ ಶೆಟ್ಟಿ ಪಡ್ಡೆಲು, ವಿದ್ಯಾರ್ಥಿ ನಾಯಕ ಕೆ ಎನ್ ನಂದನ್ ಶರ್ಮ ಉಪಸ್ಥಿತರಿದ್ದರು.

ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ ಕಾರ್ಯಕ್ರಮಕ್ಕೆ ಆಗಮಿಸಿ ಶುಭ ಹಾರೈಸಿದರು.
ವರ್ಗಾವಣೆಗೊಂಡ ಶಿಕ್ಷಕಿ ಶ್ರೀಮತಿ ಸುಜಾತ, ಎಸ್ ಡಿ ಎಂ ಸಿ ನಿಕಟಪೂರ್ವ ಅಧ್ಯಕ್ಷೆ ಶ್ರೀಮತಿ ಪ್ರಮೀಳ ಶೆಟ್ಟಿ ಇವರಿಗೆ ಸನ್ಮಾನ ಕಾರ್ಯಕ್ರಮ ಹಾಗೂ , ಶ್ರೀಮತಿ ಸುಮತಿ ಬಿ.ಜೆ ಗೌರವ ಶಿಕ್ಷಕಿ ಶ್ರೀಮತಿ ಲಕ್ಷ್ಮಿ ನಿವೃತ್ತ ಆಶಾ ಕಾರ್ಯಕರ್ತೆ, ಮಾಸ್ಟರ್ ಅಜಯ್ ಕೆ (ಎನ್ ಎo ಎo ಎಸ್ ಪರೀಕ್ಷಾ ಉತ್ತೀರ್ಣ ) ಮಾಸ್ಟರ್ ಮೊಹಮ್ಮದ್ ಬಿಲಾಲ್ ( ಕಬಡ್ಡಿ ಕ್ರೀಡಾಪಟು )ಇವರಿಗೆ ಗೌರವಾರ್ಪಣೆ ಕಾರ್ಯಕ್ರಮ ನಡೆಯಿತು.

ವರ್ಗಾವಣೆಗೊಂಡು ನಮ್ಮ ಶಾಲೆಯಲ್ಲಿ ಕರ್ತವ್ಯಕ್ಕೆ ಸೇರಿದ ಜಯರಾಜ್ ಜೈನ್ ಇವರನ್ನು ವೇದಿಕೆಯಲ್ಲಿ ಸ್ವಾಗತಿಸಲಾಯಿತು. ನoತರ ಏರoಗಲ್ಲು ಓಡಿಲ್ನಾಳ ಅoಗನವಾಡಿ ಪುಟಾಣಿಗಳಿಗೆ ಶಾಲಾ ವಿದ್ಯಾರ್ಥಿಗಳಿಗೆ ಸಾoಸ್ಕ್ರತಿಕ ಶೈಕ್ಷಣಿಕ ಕ್ಷೇತ್ರದಲ್ಲಿ ಕ್ರೀಡಾ ಸ್ಪರ್ಧೆಗಳ ಬಹುಮಾನ ವಿತರಣೆ ನಡೆಯಿತು. ನoತರ ವಿದ್ಯಾರ್ಥಿಗಳ ಸಾoಸ್ಕ್ರತಿಕ ನೃತ್ಯ ವೈಭವ ಜರಗಿತು. ಶೌಫ ಮರಿಯo‌‌ ಮತ್ತು ಬಳಗದವರು ಪ್ರಾರ್ಥನೆ ಗೈದರು. ಶಿಕ್ಷಕಿ ವಿಲ್ಮೆಟ್ ಸೆರಾವೊ ಸ್ವಾಗತಿಸಿ, ಮುಖ್ಯ ಶಿಕ್ಷಕರಾದ ಉಷಾ ಪಿ ವರದಿ ಓದಿದರು. ಶಾರದಾ ಮಣಿ ಮತ್ತು ಅಕ್ಷತಾ ಕಾರ್ಯಕ್ರಮ ನಿರೂಪಿಸಿದರು‌. ಶಿಕ್ಷಕ ಜಯಾರಾಜ್ ಜೈನ್ ಧನ್ಯವಾದ ನೀಡಿದರು.

Related posts

ಆಕಸ್ಮಿಕವಾಗಿ ಬಾವಿಗೆ ಜಾರಿ ಬಿದ್ದು ವೃದ್ಧೆ ಸಾವು

Suddi Udaya

ಧರ್ಮಸ್ಥಳದ ಲತಾ ಆನೆ ಹೃದಯಾಘಾತದಿಂದ ಸಾವು

Suddi Udaya

ನಾರಾವಿ ಗ್ರಾ.ಪಂ. ನಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ಆಗಸ್ಟ್ 2 , 3: ಉಜಿರೆಯಲ್ಲಿ “ಮಹಿಳಾ ಯಕ್ಷ ಸಂಭ್ರಮ” : ಪತ್ರಿಕಾಗೋಷ್ಠಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೆರ್ಲ ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಅಭಿವೃದ್ಧಿಗೆ ದೇಣಿಗೆ ಹಸ್ತಾಂತರ

Suddi Udaya

ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶರನ್ನವರಾತ್ರಿ ಪ್ರಯುಕ್ತ ಚಂಡಿಕಾ ಹೋಮ, ದುರ್ಗಾಪೂಜೆ

Suddi Udaya
error: Content is protected !!