September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ವಲಯ 15 ರ ತರಬೇತಿ ವಿಭಾಗಕ್ಕೆ ಜೆಸಿಐ ಬೆಳ್ತಂಗಡಿಯ ಆಶಾಲತಾ ಪ್ರಶಾಂತ್ ಸಂಯೋಜಕರಾಗಿ ನಿಯೋಜನೆ

ಬೆಳ್ತಂಗಡಿ: ವಿಟ್ಲದಲ್ಲಿ ನಡೆದ ಜೆಸಿಐ ಭಾರತದ ವಲಯ 15 ರ ಪದಪ್ರದಾನ ಸಮಾರಂಭದಲ್ಲಿ ಪ್ರತಿಷ್ಠಿತ ಜೆಸಿಐ ಬೆಳ್ತಂಗಡಿ ಇದರ ಈ ವರ್ಷದ ಅಧ್ಯಕ್ಷೆ ಜೇಸಿ ಆಶಾಲತಾ ಪ್ರಶಾಂತ್ ಇವರು 2026 ರ ವಲಯಾಧ್ಯಕ್ಷ ಇವರಿಂದ ಪ್ರಮಾಣಚನ ಸ್ವೀಕರಿಸಿದರು.

ಇವರು 2026 ನೇ ಸಾಲಿನ ವಲಯಾಡಳಿತ ಮಂಡಳಿಯ ತರಬೇತಿ ವಿಭಾಗದ ‘ಎಫೆಕ್ಟೀವ್ ಪಬ್ಲಿಕ್ ಸ್ಪೀಚ್, ಔಟ್‌ ಬಾಂಡಿಂಗ್ ಟ್ರೈನಿಂಗ್ ಪ್ರೋಗ್ರಾಂ, ಹಾಗೂ ಸ್ಪೀಚ್ ಕ್ರಾಫ್ಟ್’ ಇದರ ವಲಯ ಸಂಯೋಜಕರಾಗಿ ನಿಯೋಜನೆಗೊಂಡಿರುತ್ತಾರೆ. ಜೆಸಿಐ ಬೆಳ್ತಂಗಡಿಯ 48 ವರ್ಷ ಇತಿಹಾಸದಲ್ಲಿ ಪ್ರಥಮವಾಗಿ ಮಹಿಳಾ ಅಧ್ಯಕ್ಷರನ್ನು ಕಂಡ ಬೆಳ್ತಂಗಡಿ ಜೇಸಿ ಈ ವರ್ಷ ಜೇಸಿ ಆಶಾಲತಾ ಪ್ರಶಾಂತ್ ನಾಯಕತ್ವದಲ್ಲಿ ಜೇಸಿ ಸದಸ್ಯರಿಗೆ ಹಾಗೂ ಶಾಲಾ ಕಾಲೇಜು ಸಂಘ ಸಂಸ್ಥೆಗಳಿಗೆ ಹಲವಾರು ವಿಭಾಗದಲ್ಲಿ ತರಬೇತಿ ಆಯೋಜಿಸಿರುತ್ತಾರೆ. ಬಹಳಷ್ಟು ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಗುರುತಿಸಿಕೊಂಡಿದ್ದು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್, ಕ್ರೀಡಾ ಹಾಗೂ ಸಾಂಸ್ಕೃತಿಕ ಉತ್ಸವವದ ಮೂಲಕ ತಾಲೂಕಿನ ಯುವ ಪ್ರತಿಭೆಗಳಿಗೆ ವೇದಿಕೆ ಅವಕಾಶ ಹಾಗೂ ಸಾಧಕರಿಗೆ ಸಾಧನ ಶ್ರೀ ಪ್ರಶಸ್ತಿ ಮುಂತಾದ ಕಾರ್ಯಕ್ರಮ ನಡೆಸಿ ಯಶಸ್ವಿ ಅಧ್ಯಕ್ಷರಾಗಿ ಹೊರಹೊಮ್ಮಿದವರು.

Related posts

ಮಾಲಾಡಿ ನವುಂಡ ಪರಿಸರದಲ್ಲಿ ಎರಡು ಚಿರತೆಗಳು ಪತ್ತೆ: ನಾಯಿಯ ಮೇಲೆ ದಾಳಿ: ನಾಗರಿಕರಲ್ಲಿ ಸೃಷ್ಟಿಯಾದ ಆತಂಕ

Suddi Udaya

ಬೆಳ್ತಂಗಡಿ: 12 ಅಡಿ ಉದ್ದದ ಕಾಳಿಂಗ ಸರ್ಪವನ್ನು ರಕ್ಷಿಸಿ ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್ ಲಾಯಿಲ

Suddi Udaya

ಕಣಿಯೂರು ನಿವೃತ್ತ ಶಿಕ್ಷಕಿ ಹರ್ಷಲಾರವರಿಗೆ ಕ್ಲಸ್ಟರ್ ವತಿಯಿಂದ ಸನ್ಮಾನ

Suddi Udaya

ಗಾಳಿ-ಮಳೆ: ಮುಂಡಾಜೆ ಸೀಟು ಬಳಿ ರಸ್ತೆಗೆ ಬಿದ್ದ ಮರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಪ್ರಧಾನಿ ನರೇಂದ್ರ ಮೋದಿಜಿಯವರ ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆಯಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಎರಡನೇ ಭಾರಿಗೆ ರಾಜ್ಯದಲ್ಲಿ ಪ್ರಥಮ ಸ್ಥಾನ

Suddi Udaya
error: Content is protected !!