March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಲೆಮರೆಸಿಕೊಂಡು ಮೃತಪಟ್ಟ ಆರೋಪಿಯ ಮರಣ ಪತ್ರ ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

ಬೆಳ್ತಂಗಡಿ: ಕರ್ತವ್ಯ ನಿರತ ಪೊಲೀಸ್ ಮೇಲೆ ಹಲ್ಲೆ ಪ್ರಕರಣದಲ್ಲಿ ತಲೆಮರೆಸಿಕೊಂಡು, 2001ರಲ್ಲಿ ವಾರಂಟ್ ಜಾರಿಯಾಗಿದ್ದ, ಧರ್ಮಸ್ಥಳ ಗ್ರಾಮದ ವಿದ್ಯುಷಿ ನಗರದ ಬಾಲಕೃಷ್ಣ ರಾವ್ 2007ರಲ್ಲಿ ಮೃತಪಟ್ಟಿರುವುದಾಗಿ ಅವರ ಮರಣ ಪ್ರಮಾಣ ಪತ್ರದ ಪ್ರತಿಯನ್ನು ಧರ್ಮಸ್ಥಳ ಪೊಲೀಸರು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಕರ್ತವ್ಯ ನಿರತ ಪೊಲೀಸ್ ಮೇಲೆ ಹಲ್ಲೆ ಪ್ರಕರಣದಲ್ಲಿ ಧರ್ಮಸ್ಥಳ ಗ್ರಾಮದ ವಿದ್ಯುಷಿ ನಗರ ನಿವಾಸಿ ಬಾಲಕೃಷ್ಣ ರಾವ್ ಎಂಬವರಿಗೆ 2001 ಫೆಬ್ರವರಿಯಲ್ಲಿ ಎಲ್.ಪಿ.ಸಿ ವಾರಂಟ್ ಹೊರಡಿಸಲಾಗಿತ್ತು. ಅವರ ಪತ್ತೆ ಬಗ್ಗೆ ಬೆಳ್ತಂಗಡಿ ಪೊಲೀಸ್ ಉಪ ಅಧಿಕ್ಷಕರಾದ ರೋಹಿಣಿ, ಪೊಲೀಸ್ ವೃತ್ತ ನಿರೀಕ್ಷಕರಾದ ರವಿ ಬಿ ಎಸ್, ಉಪ ನೀರಿಕ್ಷಕರಾದ ಸಮರ್ಥ್ ರವರ ಮಾರ್ಗದರ್ಶನದಲ್ಲಿ ಠಾಣಾ ಸಿಬ್ಬಂದಿಗಳಾದ ವೃಷಭ, ಚರಣ್‌ರಾಜ್, ರವರು ಉಡುಪಿ, ಪುತ್ತೂರು, ಚಿಕ್ಕಮಗಳೂರು ಅಂಚೆ ಉಪ ವಿಭಾಗಗಳಿಗೆ ಭೇಟಿ ನೀಡಿ ಅವರ ಬಗ್ಗೆ ವಿಚಾರಿಸಿದಾಗ, ೧೯೯೭ ರಲ್ಲಿ ಚಿಕ್ಕಮಗಳೂರು ಅಂಚೆ ವಿಭಾಗದಿಂದ ಕಡ್ಡಾಯ ನಿವೃತ್ತಿ ನೀಡಿದ್ದು, ೨೦೦೭ ಫೆ. ೧೨ ರಲ್ಲಿ ಮೃತ ಪಟ್ಟಿರುವುದಾಗಿ ತಿಳಿದುಬಂದಿತ್ತು. ಅದರಂತೆ ಅವರ ಮರಣ ಪ್ರಮಾಣ ಪತ್ರದ ಪ್ರತಿಯನ್ನು ಪಡೆದು ಪೊಲೀಸರು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ ಎಂದು ವರದಿಯಾಗಿದೆ.

Related posts

ನಾವೂರು: ನಿoರ್ದಿ ಬಳಿ ರಸ್ತೆಗೆ ಬಿದ್ದ ಮರ ಗ್ರಾ.ಪಂ. ನಿಂದ ತೆರವು ಕಾರ್ಯ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಯ ಹಿನ್ನೆಲೆಯಲ್ಲಿ ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ಇಂದಬೆಟ್ಟು, ನಾವೂರು, ಕಡಿರುದ್ಯಾವರ, ಮಿತ್ತಬಾಗಿಲು, ಮಲವಂತಿಗೆ, ಕನ್ಯಾಡಿ ಗ್ರಾಮದ ಕಾರ್ಯಕರ್ತರ ಸಭೆ

Suddi Udaya

ಕೃಷಿಕರಿಗೆ ತೊಂದರೆಯನ್ನು ಉಂಟು ಮಾಡುತ್ತಿರುವ ಕಾಡುಹಂದಿ ಹಾಗೂ ನವಿಲುಗಳನ್ನು ನಿಯಂತ್ರಿಸುವಂತೆ ಅರಣ್ಯ ಸಚಿವರಿಗೆ ಶಾಸಕ ಹರೀಶ್ ಪೂಂಜರಿಂದ ಮನವಿ

Suddi Udaya

ಬೆಳ್ತಂಗಡಿಯಲ್ಲಿ ರಕ್ಷಿತ್ ಶಿವರಾಂ ಗೆಲುವು ನಿಶ್ಚಿತ- ಮಾಜಿ ಶಾಸಕ ವಸಂತ್ ಬಂಗೇರ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ಗಣರಾಜ್ಯೋತ್ಸವ

Suddi Udaya

ಬೆಳ್ತಂಗಡಿ ರಾಷ್ಟ್ರೀಯ ಲೋಕ ಅದಾಲತ್

Suddi Udaya
error: Content is protected !!