July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಲೆಮರೆಸಿಕೊಂಡು ಮೃತಪಟ್ಟ ಆರೋಪಿಯ ಮರಣ ಪತ್ರ ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

ಬೆಳ್ತಂಗಡಿ: ಕರ್ತವ್ಯ ನಿರತ ಪೊಲೀಸ್ ಮೇಲೆ ಹಲ್ಲೆ ಪ್ರಕರಣದಲ್ಲಿ ತಲೆಮರೆಸಿಕೊಂಡು, 2001ರಲ್ಲಿ ವಾರಂಟ್ ಜಾರಿಯಾಗಿದ್ದ, ಧರ್ಮಸ್ಥಳ ಗ್ರಾಮದ ವಿದ್ಯುಷಿ ನಗರದ ಬಾಲಕೃಷ್ಣ ರಾವ್ 2007ರಲ್ಲಿ ಮೃತಪಟ್ಟಿರುವುದಾಗಿ ಅವರ ಮರಣ ಪ್ರಮಾಣ ಪತ್ರದ ಪ್ರತಿಯನ್ನು ಧರ್ಮಸ್ಥಳ ಪೊಲೀಸರು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಕರ್ತವ್ಯ ನಿರತ ಪೊಲೀಸ್ ಮೇಲೆ ಹಲ್ಲೆ ಪ್ರಕರಣದಲ್ಲಿ ಧರ್ಮಸ್ಥಳ ಗ್ರಾಮದ ವಿದ್ಯುಷಿ ನಗರ ನಿವಾಸಿ ಬಾಲಕೃಷ್ಣ ರಾವ್ ಎಂಬವರಿಗೆ 2001 ಫೆಬ್ರವರಿಯಲ್ಲಿ ಎಲ್.ಪಿ.ಸಿ ವಾರಂಟ್ ಹೊರಡಿಸಲಾಗಿತ್ತು. ಅವರ ಪತ್ತೆ ಬಗ್ಗೆ ಬೆಳ್ತಂಗಡಿ ಪೊಲೀಸ್ ಉಪ ಅಧಿಕ್ಷಕರಾದ ರೋಹಿಣಿ, ಪೊಲೀಸ್ ವೃತ್ತ ನಿರೀಕ್ಷಕರಾದ ರವಿ ಬಿ ಎಸ್, ಉಪ ನೀರಿಕ್ಷಕರಾದ ಸಮರ್ಥ್ ರವರ ಮಾರ್ಗದರ್ಶನದಲ್ಲಿ ಠಾಣಾ ಸಿಬ್ಬಂದಿಗಳಾದ ವೃಷಭ, ಚರಣ್‌ರಾಜ್, ರವರು ಉಡುಪಿ, ಪುತ್ತೂರು, ಚಿಕ್ಕಮಗಳೂರು ಅಂಚೆ ಉಪ ವಿಭಾಗಗಳಿಗೆ ಭೇಟಿ ನೀಡಿ ಅವರ ಬಗ್ಗೆ ವಿಚಾರಿಸಿದಾಗ, ೧೯೯೭ ರಲ್ಲಿ ಚಿಕ್ಕಮಗಳೂರು ಅಂಚೆ ವಿಭಾಗದಿಂದ ಕಡ್ಡಾಯ ನಿವೃತ್ತಿ ನೀಡಿದ್ದು, ೨೦೦೭ ಫೆ. ೧೨ ರಲ್ಲಿ ಮೃತ ಪಟ್ಟಿರುವುದಾಗಿ ತಿಳಿದುಬಂದಿತ್ತು. ಅದರಂತೆ ಅವರ ಮರಣ ಪ್ರಮಾಣ ಪತ್ರದ ಪ್ರತಿಯನ್ನು ಪಡೆದು ಪೊಲೀಸರು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ ಎಂದು ವರದಿಯಾಗಿದೆ.

Related posts

ಗೇರುಕಟ್ಟೆ: ಪರಪ್ಪು ಉರೂಸ್ ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿ ಸಿರಿಯನ್ ಕ್ಯಾಥೋಲಿಕ್ ವಿವಿಧೋದ್ದೇಶ ಸಹಕಾರ ಸಂಘದ ಆಡಳಿತ ಮಂಡಳಿ ಪದಾಧಿಕಾರಿಗಳ ಆಯ್ಕೆ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ವೇಣೂರು ಸರ್ಕಾರಿ ಪ್ರೌಢಶಾಲೆ: OSAAT ಸಂಸ್ಥೆಯಿಂದ ರೂ.1.25 ಕೋಟಿ ಅನುದಾನದಲ್ಲಿ ಶಾಲಾ ಕೊಠಡಿಗೆ ಶಿಲಾನ್ಯಾಸ

Suddi Udaya

ಕೆ. ಪಿ. ಸಿ. ಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಬೆಳ್ತಂಗಡಿ :ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿಗೆ ರಾಜ್ಯಮಟ್ಟದ ಹಲವು ಪ್ರಶಸ್ತಿ

Suddi Udaya
error: Content is protected !!