23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಲೆಮರೆಸಿಕೊಂಡು ಮೃತಪಟ್ಟ ಆರೋಪಿಯ ಮರಣ ಪತ್ರ ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

ಬೆಳ್ತಂಗಡಿ: ಕರ್ತವ್ಯ ನಿರತ ಪೊಲೀಸ್ ಮೇಲೆ ಹಲ್ಲೆ ಪ್ರಕರಣದಲ್ಲಿ ತಲೆಮರೆಸಿಕೊಂಡು, 2001ರಲ್ಲಿ ವಾರಂಟ್ ಜಾರಿಯಾಗಿದ್ದ, ಧರ್ಮಸ್ಥಳ ಗ್ರಾಮದ ವಿದ್ಯುಷಿ ನಗರದ ಬಾಲಕೃಷ್ಣ ರಾವ್ 2007ರಲ್ಲಿ ಮೃತಪಟ್ಟಿರುವುದಾಗಿ ಅವರ ಮರಣ ಪ್ರಮಾಣ ಪತ್ರದ ಪ್ರತಿಯನ್ನು ಧರ್ಮಸ್ಥಳ ಪೊಲೀಸರು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಕರ್ತವ್ಯ ನಿರತ ಪೊಲೀಸ್ ಮೇಲೆ ಹಲ್ಲೆ ಪ್ರಕರಣದಲ್ಲಿ ಧರ್ಮಸ್ಥಳ ಗ್ರಾಮದ ವಿದ್ಯುಷಿ ನಗರ ನಿವಾಸಿ ಬಾಲಕೃಷ್ಣ ರಾವ್ ಎಂಬವರಿಗೆ 2001 ಫೆಬ್ರವರಿಯಲ್ಲಿ ಎಲ್.ಪಿ.ಸಿ ವಾರಂಟ್ ಹೊರಡಿಸಲಾಗಿತ್ತು. ಅವರ ಪತ್ತೆ ಬಗ್ಗೆ ಬೆಳ್ತಂಗಡಿ ಪೊಲೀಸ್ ಉಪ ಅಧಿಕ್ಷಕರಾದ ರೋಹಿಣಿ, ಪೊಲೀಸ್ ವೃತ್ತ ನಿರೀಕ್ಷಕರಾದ ರವಿ ಬಿ ಎಸ್, ಉಪ ನೀರಿಕ್ಷಕರಾದ ಸಮರ್ಥ್ ರವರ ಮಾರ್ಗದರ್ಶನದಲ್ಲಿ ಠಾಣಾ ಸಿಬ್ಬಂದಿಗಳಾದ ವೃಷಭ, ಚರಣ್‌ರಾಜ್, ರವರು ಉಡುಪಿ, ಪುತ್ತೂರು, ಚಿಕ್ಕಮಗಳೂರು ಅಂಚೆ ಉಪ ವಿಭಾಗಗಳಿಗೆ ಭೇಟಿ ನೀಡಿ ಅವರ ಬಗ್ಗೆ ವಿಚಾರಿಸಿದಾಗ, ೧೯೯೭ ರಲ್ಲಿ ಚಿಕ್ಕಮಗಳೂರು ಅಂಚೆ ವಿಭಾಗದಿಂದ ಕಡ್ಡಾಯ ನಿವೃತ್ತಿ ನೀಡಿದ್ದು, ೨೦೦೭ ಫೆ. ೧೨ ರಲ್ಲಿ ಮೃತ ಪಟ್ಟಿರುವುದಾಗಿ ತಿಳಿದುಬಂದಿತ್ತು. ಅದರಂತೆ ಅವರ ಮರಣ ಪ್ರಮಾಣ ಪತ್ರದ ಪ್ರತಿಯನ್ನು ಪಡೆದು ಪೊಲೀಸರು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ ಎಂದು ವರದಿಯಾಗಿದೆ.

Related posts

ಬೆಳ್ತಂಗಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಸುವರ್ಣ ದೀಪೋತ್ಸವ ಉದ್ಘಾಟನೆ

Suddi Udaya

ಪಡ್ಲಾಡಿ, ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಕುಪ್ಪೆಟ್ಟಿ ಸ.ಉ.ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಬೆಳ್ತಂಗಡಿ ಜನಜಾಗೃತಿ ವೇದಿಕೆ ಆರ್ಥಿಕ ವರ್ಷದ ಪ್ರಥಮ ಸಭೆ: ನೂತನ ವರ್ಷದ ಕ್ರಿಯಾಯೋಜನೆಗೆ ಮಂಜೂರಾತಿ

Suddi Udaya

ನಡ ಗ್ರಾಮದಲ್ಲಿ ಸನ್‌ರಾಕ್ ಬಲಿಪ ರೆಸಾರ್ಟ್ ಶುಭಾರಂಭ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 57ನೇ ವರ್ಧಂತ್ಯುತ್ಸವ ಪ್ರಯುಕ್ತ ಛದ್ಮವೇಷ ಸ್ಫರ್ಧೆ

Suddi Udaya
error: Content is protected !!