23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ಸುದೀಪ್ ಸಾಲ್ಯಾನ್’ಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

ಬೆಳ್ತಂಗಡಿ : ತಾಲೂಕು ಮಾತ್ರವಲ್ಲದೆ ಜಿಲ್ಲೆಯಾದ್ಯಂತ ಬಹಳಷ್ಟು ಖ್ಯಾತಿ ಪಡೆದಿರುವ “ಸಾಲ್ಯಾನ್ ಎಲ್ ಇಡಿ” ಇಂದು ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಪ್ರಮಾಣಪತ್ರವನ್ನು ತನ್ನದಾಗಿಸಿಕೊಂಡಿದೆ. ಮಂಗಳೂರಿನಲ್ಲಿ ನಡೆದ ದಿ| ಕಿಶೋರ್‌ಕುಮಾರ್‌ಹಾಡುಗಳ ಗಾಯನ ದಾಖಲೆ, 100 ಗಾಯಕರು, ನಿರಂತರ 40 ಗಂಟೆಗಳ ಕಾಲ ಕರೋಕೆ ಸ್ವರೂಪದ ಗಾಯನ ಸ್ಪರ್ಧೆಯಲ್ಲಿ ಸಾಲ್ಯಾನ್ ಎಲ್ ಇಡಿ ಮಾಲಕ ಸುದೀಪ್ ಅವರು ತಮ್ಮ ಎಲ್ ಇಡಿ ಪ್ರದರ್ಶನವನ್ನು ಮಾಡುವ ಮೂಲಕ ಈ ದಾಖಲೆಯ ಪಾಲು ಪಡೆದಿದ್ದಾರೆ. ಸುದೀಪ್ ಸಾಲ್ಯಾನ್ ರವರು ಧ್ವನಿ ನ್ಯೂಸ್ ಚಾನೆಲ್ ನ ಪ್ರಧಾನ ಸಂಪಾದಕರಾಗಿದ್ದಾರೆ.

ಮಂಗಳೂರು ಪುರಭವನದಲ್ಲಿ ನವೆಂಬರ್ 18 ಹಾಗೂ 19ರಂದು ನಡೆದ ಷೋಡಶಿ ಫೌಂಡೇಶನ್ ನೇತೃತ್ವದಲ್ಲಿ’ಗಾತಾ ರಹೇ ಮೇರಾ ದಿಲ್’ ಎಂಬ ಹೆಸರಿನಲ್ಲಿ ದಿ| ಕಿಶೋರ್ ಕುಮಾರ್ ಅವರು ಹಾಡಿದ ಹಾಡುಗಳನ್ನು ಬರೋಬ್ಬರಿ 100 ಗಾಯಕರು ನಿರಂತರ 40 ಗಂಟೆ ‘ಕರೋಕೆ’ ಸ್ವರೂಪದಲ್ಲಿ ಹಾಡುವ ಮೂಲಕ ವಿಶ್ವದಾಖಲೆಯ ಗೋಲ್ಡನ್ ಬುಕ್ ಆಫ್ ವರ್ಲ್ಡ್‌ನಲ್ಲಿ ಹೆಸರು ನಮೂದಿಸಿದ್ದಾರೆ. ಈ ವಿಶ್ವದಾಖಲೆಯಲ್ಲಿ ಸಾಲ್ಯಾನ್ ಎಲ್ ಇಡಿ ಉತ್ತಮವಾಗಿ ಕಾರ್ಯನಿರ್ವಹಿಸಿತ್ತು. ಇದೀಗ ಈ ಸಾಧನೆಗೆ ಸುದೀಪ್ ಸಾಲ್ಯಾನ್ ಅವರಿಗೆ ‘ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್’ ವತಿಯಿಂದ ಪದಕ, ಸರ್ಟಿಫಿಕೇಟ್ ನೀಡಿ ಗೌರವಿಸಲಾಗಿದೆ.

Related posts

ಉಜಿರೆ ಹಳೆಪೇಟೆ ಶಾಲೆಯಲ್ಲಿ ಎಸ್‌ಡಿಎಂ ಆಸ್ಪತ್ರೆ ವತಿಯಿಂದ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ

Suddi Udaya

ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ಕಾರ್ಯದ ಮನೆಮನೆ ಸಂಪರ್ಕದ ಪ್ರಯುಕ್ತ ಶ್ರೀರಾಮ ಕ್ಷೇತ್ರದ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಭೇಟಿ

Suddi Udaya

ಬೆಳ್ತಂಗಡಿ ಗ್ರಂಥಾಲಯ ಮೇಲ್ವಿಚಾರಕರಿಗೆ ಡಿಜಿಟಲ್ ಕೌಶಲ್ಯ, ನಾಯಕತ್ವ ಮತ್ತು ಸಹಭಾಗಿತ್ವ ಚಟುವಟಿಕೆಯ ತರಬೇತಿ ಕಾರ್ಯಕ್ರಮ

Suddi Udaya

ಕೊಯ್ಯೂರು ಮಲೆಬೆಟ್ಟು ನಿವಾಸಿ ರಮ್ಯಾ ನೇಣು ಬಿಗಿದು ಆತ್ಮಹತ್ಯೆ

Suddi Udaya

ಕಳೆದ 25 ವರ್ಷಗಳಿಂದ ಸಹಕಾರಿ ರಂಗದಲ್ಲಿ ಅಗ್ರಮಾಣ್ಯ ಸೇವೆ ಸಲ್ಲಿಸುತ್ತಿರುವ ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸತೀಶ್ ಕೆ ಕಾಶಿಪಟ್ಣರವರಿಗೆ ಈ ವರ್ಷದ ರಾಜ್ಯ “ಸಹಕಾರಿ ರತ್ನ” ಪ್ರಶಸ್ತಿ, ಬೆಂಗಳೂರಿನಲ್ಲಿ ನ. 14 ರಂದು ಮುಖ್ಯಮಂತ್ರಿಗಳಿಂದ ಪ್ರಶಸ್ತಿ ಪ್ರದಾನ

Suddi Udaya

ಪಿಲ್ಯ: ಬಾವಿಗೆ ಬಿದ್ದು ಕಾರ್ಮಿಕ ಸಾವು

Suddi Udaya
error: Content is protected !!