September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯುವವಾಹಿನಿ ಉಪ್ಪಿನಂಗಡಿ ಘಟಕದ ಅಧ್ಯಕ್ಷರಾಗಿ ಮನೋಜ್ ಎನ್ ಸಾಲ್ಯಾನ್ ಆಯ್ಕೆ

ಬೆಳ್ತಂಗಡಿ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿಯ ಪ್ರತಿಷ್ಠಿತ ಘಟಕಗಳಲ್ಲೊಂದಾದ ಯುವವಾಹಿನಿ ಉಪ್ಪಿನಂಗಡಿ ಘಟಕದ 2025-26 ನೇ ಸಾಲಿನ ಅವಧಿಗೆ ಅಧ್ಯಕ್ಷರಾಗಿ ಬಾರ್ಯ ನಿವಾಸಿ ಮನೋಜ್ ಎನ್ ಸಾಲ್ಯಾನ್ ಆಯ್ಕೆಯಾಗಿದ್ದಾರೆ.


ಇವರು ಬೆಂಗಳೂರಿನಲ್ಲಿ ತೈವಾನ್ ಮೂಲದ ಎಮ್.ಎನ್.ಸಿ ಕಂಪನಿಯಲ್ಲಿ ಉದ್ಯೋಗದಲ್ಲಿದ್ದುಕೊಂಡು, ಹಲವು ಸಂಘ, ಸಂಸ್ಥೆ,ಹಾಗೂ ಕೆಲವೊಂದು ಸಂಸ್ಥೆಗಳ ಸ್ಥಾಪಕ ಸದಸ್ಯರಾಗಿ ಧಾರ್ಮಿಕ ಹಾಗೂ ಶೈಕ್ಷಣಿಕವಾಗಿಯೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.
ಯುವವಾಹಿನಿ ಉಪ್ಪಿನಂಗಡಿ ಘಟಕದಲ್ಲಿ ನಿರ್ದೇಶಕರಾಗಿ, ಕಾರ್ಯದರ್ಶಿಯಾಗಿ, ಕೋಶಾಧಿಕಾರಿಯಾಗಿ ಮತ್ತು ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಯುವವಾಹಿನಿ(ರಿ.) ಕೇಂದ್ರ ಸಮಿತಿಯಲ್ಲಿ ನಾಮ ನಿರ್ದೇಶಿತ ಸದಸ್ಯರಾಗಿ, ವಿಶು ಕುಮಾರ್ ದತ್ತಿ ನಿಧಿಯ ಕೋಶಾಧಿಕಾರಿಯಾಗಿ, ವಿದ್ಯಾನಿಧಿ ಟ್ರಸ್ಟ್ ನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿರುವ ಅನುಭವ ಇವರದ್ದು.

ವಿದ್ವತ್ ಪಿ.ಯು ಕಾಲೇಜ್ ಗುರುವಾಯನಕೆರೆಯಲ್ಲಿ ಉಪನ್ಯಾಸಕಿಯಾಗಿರುವ ಪತ್ನಿ ಶ್ರೀಮತಿ ದಿವ್ಯಶ್ರೀ ಮತ್ತು ಮಗಳು ಬೇಬಿ ಆರವಿ ಯೊಂದಿಗೆ ಸುಖೀ ಜೀವನ ನಡೆಸುತ್ತಿದ್ದಾರೆ.

Related posts

ನಾರಾವಿ ಪ್ರಾ.ಕೃ.ಪ.ಸ. ಸಂಘದ ವತಿಯಿಂದ ಅತ್ಯುತ್ತಮ ಶಾಸಕ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya

ಹದಗೆಟ್ಟ ರಸ್ತೆ: ಸೋಮಂತಡ್ಕ – ದಿಡುಪೆ ರಸ್ತೆಯಲ್ಲಿ ಬಾಳೆ ಗಿಡ ನೆಟ್ಟು ಸಾರ್ವಜನಿಕರಿಂದ ಅಕ್ರೋಶ

Suddi Udaya

ಉಜಿರೆಯ ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು ಪ್ರತಿಷ್ಠಿತ ಜೈ ಜವಾನ್ ಜೈ ಕಿಸಾನ್ “ಕೃಷಿಕ ರತ್ನ” ಗೌರವ ಪ್ರಶಸ್ತಿಗೆ ಆಯ್ಕೆ

Suddi Udaya

ರಬ್ಬರ್ ಕೃಷಿಕರ ಸಮಸ್ಯೆ ಪರಿಹರಿಸುವಂತೆ ಶಾಸಕ ಹರೀಶ್ ಪೂಂಜ ಇವರಿಗೆ ಮನವಿ

Suddi Udaya

ಬೆಳಾಲು ಮೈತ್ರಿ ಯುವಕ ಮಂಡಲ ವತಿಯಿಂದ ಸರಸ್ವತಿ ಹಿ.ಪ್ರಾ. ಶಾಲಾ ಮುಂಭಾಗದಲ್ಲಿ ಬ್ಯಾರಿಕೆಡ್ ಅಳವಡಿಕೆ

Suddi Udaya

ಕಿಲ್ಲೂರು : ಹರ್ಷ ಮಟನ್, ಚಿಕನ್, ಹಾಗೂ ಫಿಶ್ ಸೆಂಟರ್ ಶುಭಾರಂಭ

Suddi Udaya
error: Content is protected !!