July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯುವವಾಹಿನಿ ಉಪ್ಪಿನಂಗಡಿ ಘಟಕದ ಅಧ್ಯಕ್ಷರಾಗಿ ಮನೋಜ್ ಎನ್ ಸಾಲ್ಯಾನ್ ಆಯ್ಕೆ

ಬೆಳ್ತಂಗಡಿ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿಯ ಪ್ರತಿಷ್ಠಿತ ಘಟಕಗಳಲ್ಲೊಂದಾದ ಯುವವಾಹಿನಿ ಉಪ್ಪಿನಂಗಡಿ ಘಟಕದ 2025-26 ನೇ ಸಾಲಿನ ಅವಧಿಗೆ ಅಧ್ಯಕ್ಷರಾಗಿ ಬಾರ್ಯ ನಿವಾಸಿ ಮನೋಜ್ ಎನ್ ಸಾಲ್ಯಾನ್ ಆಯ್ಕೆಯಾಗಿದ್ದಾರೆ.


ಇವರು ಬೆಂಗಳೂರಿನಲ್ಲಿ ತೈವಾನ್ ಮೂಲದ ಎಮ್.ಎನ್.ಸಿ ಕಂಪನಿಯಲ್ಲಿ ಉದ್ಯೋಗದಲ್ಲಿದ್ದುಕೊಂಡು, ಹಲವು ಸಂಘ, ಸಂಸ್ಥೆ,ಹಾಗೂ ಕೆಲವೊಂದು ಸಂಸ್ಥೆಗಳ ಸ್ಥಾಪಕ ಸದಸ್ಯರಾಗಿ ಧಾರ್ಮಿಕ ಹಾಗೂ ಶೈಕ್ಷಣಿಕವಾಗಿಯೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.
ಯುವವಾಹಿನಿ ಉಪ್ಪಿನಂಗಡಿ ಘಟಕದಲ್ಲಿ ನಿರ್ದೇಶಕರಾಗಿ, ಕಾರ್ಯದರ್ಶಿಯಾಗಿ, ಕೋಶಾಧಿಕಾರಿಯಾಗಿ ಮತ್ತು ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಯುವವಾಹಿನಿ(ರಿ.) ಕೇಂದ್ರ ಸಮಿತಿಯಲ್ಲಿ ನಾಮ ನಿರ್ದೇಶಿತ ಸದಸ್ಯರಾಗಿ, ವಿಶು ಕುಮಾರ್ ದತ್ತಿ ನಿಧಿಯ ಕೋಶಾಧಿಕಾರಿಯಾಗಿ, ವಿದ್ಯಾನಿಧಿ ಟ್ರಸ್ಟ್ ನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿರುವ ಅನುಭವ ಇವರದ್ದು.

ವಿದ್ವತ್ ಪಿ.ಯು ಕಾಲೇಜ್ ಗುರುವಾಯನಕೆರೆಯಲ್ಲಿ ಉಪನ್ಯಾಸಕಿಯಾಗಿರುವ ಪತ್ನಿ ಶ್ರೀಮತಿ ದಿವ್ಯಶ್ರೀ ಮತ್ತು ಮಗಳು ಬೇಬಿ ಆರವಿ ಯೊಂದಿಗೆ ಸುಖೀ ಜೀವನ ನಡೆಸುತ್ತಿದ್ದಾರೆ.

Related posts

ಮಡಂತ್ಯಾರು : ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾಷಣ ಸ್ಪರ್ಧೆ

Suddi Udaya

ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್ ನಲ್ಲಿ ಭಜನಾ ಕಾರ್ಯಕ್ರಮ

Suddi Udaya

ಕಲ್ಮಂಜ: ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು ಸದಸ್ಯರ ನೇಮಕ

Suddi Udaya

ತೆಂಕಕಾರಂದೂರು : ಜನಾರ್ದನ ಆಚಾರ್ಯ ರವರ ಮನೆಯ ಹಿಂಬದಿ ಗುಡ್ಡ ಕುಸಿತ

Suddi Udaya

ಸೇವಾ ನಿವೃತ್ತಿಗೊಳ್ಳುತ್ತಿರುವ ಸಹಾಯಕ ಕೃಷಿ ನಿರ್ದೇಶಕ ವೀರಭದ್ರಪ್ಪರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವದ ಸಂಭ್ರಮ

Suddi Udaya
error: Content is protected !!