22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಡಿ.ಎಂ ಸ್ನಾತಕೋತ್ತರ ಅಧ್ಯಯನ ಕೇಂದ್ರ : ಆಕಾಶಕಾಯಗಳ ವೀಕ್ಷಣೆ

ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ನಾತಕೋತ್ತರ ಪದವಿ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಆಕಾಶಕಾಯಗಳ ವೀಕ್ಷಣೆಯ ‘ ಸ್ಟಾರಿ ನೈಟ್’ ವಿಶೇಷ ಕಾರ್ಯಕ್ರಮ ನಡೆಯಿತು.

ಕಾಲೇಜಿನ ಭೌತಶಾಸ್ತ್ರ ವಿಭಾಗವು ವಿದ್ಯಾರ್ಥಿಗಳಲ್ಲಿ ಖಗೋಳ ವಿಜ್ಞಾನದ ಆಸಕ್ತಿ ಮತ್ತು ಕುತೂಹಲವನ್ನು ಹೆಚ್ಚಿಸುವ ಉದ್ದೇಶದಿಂದ ಸ್ನಾತಕೋತ್ತರ ಕೇಂದ್ರದ ಮುಂಭಾಗದ ಆವರಣದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಎಸ್.ಡಿ.ಎಂ (ಸ್ವಾಯತ್ತ) ಪದವಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೋ. ಕೇಶವ್ ಟಿ ವೀಕ್ಷಣಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ಆಕಾಶಕಾಯಗಳ ವಿಸ್ಮತೆಯ ಮಾಹಿತಿಯನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು. ಕಾರ್ಯಕ್ರಮವನ್ನು ಸಂಯೋಜಿಸಿದ ಸ್ನಾತಕೋತ್ತರ ಭೌತಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಮುಖ್ಯಸ್ಥ ರಾಘವೇಂದ್ರ ಎಸ್.
ನಕ್ಷತ್ರ, ನಕ್ಷತ್ರಪುಂಜಗಳು ಸೇರಿದಂತೆ ಗೆಲಕ್ಸಿಗಳು ಹಾಗು ದೂರದರ್ಶಕದ ಕುರಿತಾಗಿ ವಿವರಣೆ ನೀಡಿದರು. ವಿಭಾಗದ ವಿದ್ಯಾರ್ಥಿಗಳಾದ ಹರ್ಷವರ್ಧನ್ ಮತ್ತು ಶ್ರೀಮಾನ್ ಖಗೋಳಶಾಸ್ತ್ರದ ಮೂಲಭೂತ ಅಂಶಗಳನ್ನು ವಿವರಿಸಿದರು.

ವೀಕ್ಷಣಾ ಸಂದರ್ಭದಲ್ಲಿ ಆಕಾಶವು ವಿಶೇಷವಾಗಿ ಸ್ಪಷ್ಟ ಮತ್ತು ತಿಳಿಯಾಗಿದ್ದುದ್ದರಿಂದ ಓರಿಯನ್ ನೆಬ್ಯುಲಾ, ಪ್ಲೆಯೇಡ್ಸ್ ನಕ್ಷತ್ರಪುಂಜ, ಶನಿ ಆಕಾಶಕಾಯಗಳು ವಿಶೇಷವಾಗಿ ಕಾಣಿಸಿಕೊಂಡವು. ಈ ವಿಶೇಷ ಆಕಾಶಕಾಯಗಳ ವೀಕ್ಷಣಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಸೇರಿದಂತೆ ಉಪನ್ಯಾಸಕರು, ಸಿಬ್ಬಂದಿವರ್ಗದವರು ಸಕ್ರಿಯವಾಗಿ ಭಾಗವಹಿಸಿದರು.

Related posts

ಚಿನ್ನದ ಉಂಗುರವನ್ನು ಹಿಂತಿರುಗಿಸಿಕೊಟ್ಟು ಪ್ರಾಮಾಣಿಕತೆ ಮೆರೆದ ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಆಡಳಿತ ಮಂಡಳಿ

Suddi Udaya

ಕಾಜೂರು ಡೆವಲಪ್ಮೆಂಟ್ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ವತಿಯಿಂದ ಅಗ್ನಿವೀರ್ ಪುಷ್ಪರಾಜ್ ರವರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ – ಮಾಸಿಕ ಬೆಂಬಲ ಸಭೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಯಾವುದೇ ಭ್ರಷ್ಟಾಚಾರ ನಡೆದಿಲ್ಲ ಇಂದಬೆಟ್ಟು ಗ್ರಾಮ ಪಂಚಾಯಿತ್ ನಿಕಟಪೂರ್ವ ಅಧ್ಯಕ್ಷ ಆನಂದ್ ಅಡಿಲು ಸ್ಪಷ್ಟನೆ

Suddi Udaya

ಉಜಿರೆ ರತ್ನಮಾನಸ ವಸತಿ ನಿಲಯದ ಮಕ್ಕಳಿಗೆ ಭತ್ತದ ಸಸಿ ತಯಾರಿ ಬಗ್ಗೆ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!