September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ವಲಯ 15 ರ ತರಬೇತಿ ವಿಭಾಗಕ್ಕೆ ಜೆಸಿಐ ಬೆಳ್ತಂಗಡಿಯ ಆಶಾಲತಾ ಪ್ರಶಾಂತ್ ಸಂಯೋಜಕರಾಗಿ ನಿಯೋಜನೆ

ಬೆಳ್ತಂಗಡಿ: ವಿಟ್ಲದಲ್ಲಿ ನಡೆದ ಜೆಸಿಐ ಭಾರತದ ವಲಯ 15 ರ ಪದಪ್ರದಾನ ಸಮಾರಂಭದಲ್ಲಿ ಪ್ರತಿಷ್ಠಿತ ಜೆಸಿಐ ಬೆಳ್ತಂಗಡಿ ಇದರ ಈ ವರ್ಷದ ಅಧ್ಯಕ್ಷೆ ಜೇಸಿ ಆಶಾಲತಾ ಪ್ರಶಾಂತ್ ಇವರು 2026 ರ ವಲಯಾಧ್ಯಕ್ಷ ಇವರಿಂದ ಪ್ರಮಾಣಚನ ಸ್ವೀಕರಿಸಿದರು.

ಇವರು 2026 ನೇ ಸಾಲಿನ ವಲಯಾಡಳಿತ ಮಂಡಳಿಯ ತರಬೇತಿ ವಿಭಾಗದ ‘ಎಫೆಕ್ಟೀವ್ ಪಬ್ಲಿಕ್ ಸ್ಪೀಚ್, ಔಟ್‌ ಬಾಂಡಿಂಗ್ ಟ್ರೈನಿಂಗ್ ಪ್ರೋಗ್ರಾಂ, ಹಾಗೂ ಸ್ಪೀಚ್ ಕ್ರಾಫ್ಟ್’ ಇದರ ವಲಯ ಸಂಯೋಜಕರಾಗಿ ನಿಯೋಜನೆಗೊಂಡಿರುತ್ತಾರೆ. ಜೆಸಿಐ ಬೆಳ್ತಂಗಡಿಯ 48 ವರ್ಷ ಇತಿಹಾಸದಲ್ಲಿ ಪ್ರಥಮವಾಗಿ ಮಹಿಳಾ ಅಧ್ಯಕ್ಷರನ್ನು ಕಂಡ ಬೆಳ್ತಂಗಡಿ ಜೇಸಿ ಈ ವರ್ಷ ಜೇಸಿ ಆಶಾಲತಾ ಪ್ರಶಾಂತ್ ನಾಯಕತ್ವದಲ್ಲಿ ಜೇಸಿ ಸದಸ್ಯರಿಗೆ ಹಾಗೂ ಶಾಲಾ ಕಾಲೇಜು ಸಂಘ ಸಂಸ್ಥೆಗಳಿಗೆ ಹಲವಾರು ವಿಭಾಗದಲ್ಲಿ ತರಬೇತಿ ಆಯೋಜಿಸಿರುತ್ತಾರೆ. ಬಹಳಷ್ಟು ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಗುರುತಿಸಿಕೊಂಡಿದ್ದು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್, ಕ್ರೀಡಾ ಹಾಗೂ ಸಾಂಸ್ಕೃತಿಕ ಉತ್ಸವವದ ಮೂಲಕ ತಾಲೂಕಿನ ಯುವ ಪ್ರತಿಭೆಗಳಿಗೆ ವೇದಿಕೆ ಅವಕಾಶ ಹಾಗೂ ಸಾಧಕರಿಗೆ ಸಾಧನ ಶ್ರೀ ಪ್ರಶಸ್ತಿ ಮುಂತಾದ ಕಾರ್ಯಕ್ರಮ ನಡೆಸಿ ಯಶಸ್ವಿ ಅಧ್ಯಕ್ಷರಾಗಿ ಹೊರಹೊಮ್ಮಿದವರು.

Related posts

ಯೋಗಾಸನ ಸ್ಪರ್ಧೆಯಲ್ಲಿ ಶ್ರೀ ಧ. ಮ. ಅನುದಾನಿತ ಸೆಕೆಂಡರಿ ಶಾಲೆಯ ವಿದ್ಯಾರ್ಥಿಗಳ ಸಾಧನೆ

Suddi Udaya

ಬೆಳ್ತಂಗಡಿಯಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ಅಹವಾಲು ಸ್ವೀಕಾರ

Suddi Udaya

ಮೇ 3: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ

Suddi Udaya

ಲಯನ್ಸ್ ಪ್ರಾಂತೀಯ ಸಮ್ಮೇಳನ

Suddi Udaya

ಉಜಿರೆ: ಅನುಗ್ರಹ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ರಚನೆ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ, ಲಕ್ಷ್ಮಿ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ ಉಜಿರೆ ಮೋಹನ್ ಕುಮಾರ್ ರವರಿಗೆ ‘ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ- 2023’

Suddi Udaya
error: Content is protected !!