25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ವಲಯ 15 ರ ತರಬೇತಿ ವಿಭಾಗಕ್ಕೆ ಜೆಸಿಐ ಬೆಳ್ತಂಗಡಿಯ ಆಶಾಲತಾ ಪ್ರಶಾಂತ್ ಸಂಯೋಜಕರಾಗಿ ನಿಯೋಜನೆ

ಬೆಳ್ತಂಗಡಿ: ವಿಟ್ಲದಲ್ಲಿ ನಡೆದ ಜೆಸಿಐ ಭಾರತದ ವಲಯ 15 ರ ಪದಪ್ರದಾನ ಸಮಾರಂಭದಲ್ಲಿ ಪ್ರತಿಷ್ಠಿತ ಜೆಸಿಐ ಬೆಳ್ತಂಗಡಿ ಇದರ ಈ ವರ್ಷದ ಅಧ್ಯಕ್ಷೆ ಜೇಸಿ ಆಶಾಲತಾ ಪ್ರಶಾಂತ್ ಇವರು 2026 ರ ವಲಯಾಧ್ಯಕ್ಷ ಇವರಿಂದ ಪ್ರಮಾಣಚನ ಸ್ವೀಕರಿಸಿದರು.

ಇವರು 2026 ನೇ ಸಾಲಿನ ವಲಯಾಡಳಿತ ಮಂಡಳಿಯ ತರಬೇತಿ ವಿಭಾಗದ ‘ಎಫೆಕ್ಟೀವ್ ಪಬ್ಲಿಕ್ ಸ್ಪೀಚ್, ಔಟ್‌ ಬಾಂಡಿಂಗ್ ಟ್ರೈನಿಂಗ್ ಪ್ರೋಗ್ರಾಂ, ಹಾಗೂ ಸ್ಪೀಚ್ ಕ್ರಾಫ್ಟ್’ ಇದರ ವಲಯ ಸಂಯೋಜಕರಾಗಿ ನಿಯೋಜನೆಗೊಂಡಿರುತ್ತಾರೆ. ಜೆಸಿಐ ಬೆಳ್ತಂಗಡಿಯ 48 ವರ್ಷ ಇತಿಹಾಸದಲ್ಲಿ ಪ್ರಥಮವಾಗಿ ಮಹಿಳಾ ಅಧ್ಯಕ್ಷರನ್ನು ಕಂಡ ಬೆಳ್ತಂಗಡಿ ಜೇಸಿ ಈ ವರ್ಷ ಜೇಸಿ ಆಶಾಲತಾ ಪ್ರಶಾಂತ್ ನಾಯಕತ್ವದಲ್ಲಿ ಜೇಸಿ ಸದಸ್ಯರಿಗೆ ಹಾಗೂ ಶಾಲಾ ಕಾಲೇಜು ಸಂಘ ಸಂಸ್ಥೆಗಳಿಗೆ ಹಲವಾರು ವಿಭಾಗದಲ್ಲಿ ತರಬೇತಿ ಆಯೋಜಿಸಿರುತ್ತಾರೆ. ಬಹಳಷ್ಟು ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಗುರುತಿಸಿಕೊಂಡಿದ್ದು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್, ಕ್ರೀಡಾ ಹಾಗೂ ಸಾಂಸ್ಕೃತಿಕ ಉತ್ಸವವದ ಮೂಲಕ ತಾಲೂಕಿನ ಯುವ ಪ್ರತಿಭೆಗಳಿಗೆ ವೇದಿಕೆ ಅವಕಾಶ ಹಾಗೂ ಸಾಧಕರಿಗೆ ಸಾಧನ ಶ್ರೀ ಪ್ರಶಸ್ತಿ ಮುಂತಾದ ಕಾರ್ಯಕ್ರಮ ನಡೆಸಿ ಯಶಸ್ವಿ ಅಧ್ಯಕ್ಷರಾಗಿ ಹೊರಹೊಮ್ಮಿದವರು.

Related posts

2000 ರೂ ಮುಖಬೆಲೆಯ ನೋಟುಗಳನ್ನು ಹಿಂಪಡೆಯಲು ಆರ್ ಬಿಐ ಸೂಚನೆ

Suddi Udaya

ಕೊಕ್ಕಡ: ರಿಕ್ಷಾ ಚಾಲಕ ಮಾಲಕರ ಸಂಘದಿಂದ ಚರಂಡಿ ದುರಸ್ತಿ

Suddi Udaya

ಪೆರಿಂಜೆ : ಭಗವಾನ್ ಪುಷ್ಪದಂತ ಸ್ವಾಮಿ ಬಸದಿಯಲ್ಲಿ ಮಂಗಲಪ್ರವಚನ

Suddi Udaya

ಪಾಲಡ್ಕ ಹಾಲು ಉತ್ಪಾದಕರ ಸಹಕಾರ ಸಂಘ: ಅಧ್ಯಕ್ಷರಾಗಿ ಧರ್ಣಪ್ಪ ಕುಲಾಲ್, ಉಪಾಧ್ಯಕ್ಷರಾಗಿ ಹರೀಶ್ ಗೌಡ ಆಯ್ಕೆ

Suddi Udaya

ಧರ್ಮಸ್ಥಳ: ನೇರ್ತನೆ ಪರಿಸರದಲ್ಲಿ ಮತ್ತೆ ತೋಟಕ್ಕೆ ನುಗ್ಗಿದ್ದ ಕಾಡಾನೆ : ಕೃಷಿಗೆ ವ್ಯಾಪಕ ಹಾನಿ

Suddi Udaya

ಮಡಂತ್ಯಾರು ಸಿ ಎ ಬ್ಯಾಂಕ್ ಅಧ್ಯಕ್ಷ ಜೊಯೆಲ್ ಮೆಂಡೊನ್ಸಾ ರವರನ್ನು ಅಭಿನಂದಿಸಿದ ಸಂಸದ ಕ್ಯಾ| ಬ್ರಿಜೇಶ್ ಚೌಟ

Suddi Udaya
error: Content is protected !!