25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ವಲಯ 15 ರ ತರಬೇತಿ ವಿಭಾಗಕ್ಕೆ ಜೆಸಿಐ ಬೆಳ್ತಂಗಡಿಯ ಆಶಾಲತಾ ಪ್ರಶಾಂತ್ ಸಂಯೋಜಕರಾಗಿ ನಿಯೋಜನೆ

ಬೆಳ್ತಂಗಡಿ: ವಿಟ್ಲದಲ್ಲಿ ನಡೆದ ಜೆಸಿಐ ಭಾರತದ ವಲಯ 15 ರ ಪದಪ್ರದಾನ ಸಮಾರಂಭದಲ್ಲಿ ಪ್ರತಿಷ್ಠಿತ ಜೆಸಿಐ ಬೆಳ್ತಂಗಡಿ ಇದರ ಈ ವರ್ಷದ ಅಧ್ಯಕ್ಷೆ ಜೇಸಿ ಆಶಾಲತಾ ಪ್ರಶಾಂತ್ ಇವರು 2026 ರ ವಲಯಾಧ್ಯಕ್ಷ ಇವರಿಂದ ಪ್ರಮಾಣಚನ ಸ್ವೀಕರಿಸಿದರು.

ಇವರು 2026 ನೇ ಸಾಲಿನ ವಲಯಾಡಳಿತ ಮಂಡಳಿಯ ತರಬೇತಿ ವಿಭಾಗದ ‘ಎಫೆಕ್ಟೀವ್ ಪಬ್ಲಿಕ್ ಸ್ಪೀಚ್, ಔಟ್‌ ಬಾಂಡಿಂಗ್ ಟ್ರೈನಿಂಗ್ ಪ್ರೋಗ್ರಾಂ, ಹಾಗೂ ಸ್ಪೀಚ್ ಕ್ರಾಫ್ಟ್’ ಇದರ ವಲಯ ಸಂಯೋಜಕರಾಗಿ ನಿಯೋಜನೆಗೊಂಡಿರುತ್ತಾರೆ. ಜೆಸಿಐ ಬೆಳ್ತಂಗಡಿಯ 48 ವರ್ಷ ಇತಿಹಾಸದಲ್ಲಿ ಪ್ರಥಮವಾಗಿ ಮಹಿಳಾ ಅಧ್ಯಕ್ಷರನ್ನು ಕಂಡ ಬೆಳ್ತಂಗಡಿ ಜೇಸಿ ಈ ವರ್ಷ ಜೇಸಿ ಆಶಾಲತಾ ಪ್ರಶಾಂತ್ ನಾಯಕತ್ವದಲ್ಲಿ ಜೇಸಿ ಸದಸ್ಯರಿಗೆ ಹಾಗೂ ಶಾಲಾ ಕಾಲೇಜು ಸಂಘ ಸಂಸ್ಥೆಗಳಿಗೆ ಹಲವಾರು ವಿಭಾಗದಲ್ಲಿ ತರಬೇತಿ ಆಯೋಜಿಸಿರುತ್ತಾರೆ. ಬಹಳಷ್ಟು ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಗುರುತಿಸಿಕೊಂಡಿದ್ದು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್, ಕ್ರೀಡಾ ಹಾಗೂ ಸಾಂಸ್ಕೃತಿಕ ಉತ್ಸವವದ ಮೂಲಕ ತಾಲೂಕಿನ ಯುವ ಪ್ರತಿಭೆಗಳಿಗೆ ವೇದಿಕೆ ಅವಕಾಶ ಹಾಗೂ ಸಾಧಕರಿಗೆ ಸಾಧನ ಶ್ರೀ ಪ್ರಶಸ್ತಿ ಮುಂತಾದ ಕಾರ್ಯಕ್ರಮ ನಡೆಸಿ ಯಶಸ್ವಿ ಅಧ್ಯಕ್ಷರಾಗಿ ಹೊರಹೊಮ್ಮಿದವರು.

Related posts

ಅರಸಿನಮಕ್ಕಿ: ಕಾಪಿನಡ್ಕ ನಿವಾಸಿ ತಿಮ್ಮಪ್ಪ ಶೆಟ್ಟಿಗಾರ್ ನಿಧನ

Suddi Udaya

ಸವಣಾಲು : ನೊಣಯ್ಯ ನಾಯ್ಕರವರ ಮನೆ ಹಿಂಭಾಗ ಗುಡ್ಡ ಕುಸಿತ: ಗ್ರಾ.ಪಂ. ನಿಂದ ಅಪಾಯಕಾರಿ ಮರ ತೆರವು

Suddi Udaya

ರಾಹುಲ್ ಗಾಂಧಿಯವರ ಲೋಕಸಭಾ ಸದಸ್ಯತ್ವ ಸ್ಥಾನ ಅನರ್ಹತೆಗೊಳಿಸಿರುವುದಕ್ಕೆ ಖಂಡನೆ: ಬೆಳ್ತಂಗಡಿ ಮೂರು ಮಾರ್ಗದ ಬಳಿ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಮೌನ ಪ್ರತಿಭಟನೆ

Suddi Udaya

ಭಾಗವತ ಮಹೇಶ ಕನ್ಯಾಡಿ ಅವರಿಗೆ ಗೌರವಾರ್ಪಣೆ

Suddi Udaya

ಅಂಡಿಂಜೆ ನಿಸರ್ಗ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಮಹಾಸಭೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಚಿತ್ರಕಲಾ ಸ್ಪರ್ಧೆ: ಉಜಿರೆ ಅನುಗ್ರಹ ಆಂ.ಮಾ. ಶಾಲೆಯ ವಿದ್ಯಾರ್ಥಿನಿ ಪುಷ್ಟಿ ಮುಂಡಾಜೆ ಪ್ರಥಮ ಸ್ಥಾನ

Suddi Udaya
error: Content is protected !!