September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಲೆಮರೆಸಿಕೊಂಡು ಮೃತಪಟ್ಟ ಆರೋಪಿಯ ಮರಣ ಪತ್ರ ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

ಬೆಳ್ತಂಗಡಿ: ಕರ್ತವ್ಯ ನಿರತ ಪೊಲೀಸ್ ಮೇಲೆ ಹಲ್ಲೆ ಪ್ರಕರಣದಲ್ಲಿ ತಲೆಮರೆಸಿಕೊಂಡು, 2001ರಲ್ಲಿ ವಾರಂಟ್ ಜಾರಿಯಾಗಿದ್ದ, ಧರ್ಮಸ್ಥಳ ಗ್ರಾಮದ ವಿದ್ಯುಷಿ ನಗರದ ಬಾಲಕೃಷ್ಣ ರಾವ್ 2007ರಲ್ಲಿ ಮೃತಪಟ್ಟಿರುವುದಾಗಿ ಅವರ ಮರಣ ಪ್ರಮಾಣ ಪತ್ರದ ಪ್ರತಿಯನ್ನು ಧರ್ಮಸ್ಥಳ ಪೊಲೀಸರು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಕರ್ತವ್ಯ ನಿರತ ಪೊಲೀಸ್ ಮೇಲೆ ಹಲ್ಲೆ ಪ್ರಕರಣದಲ್ಲಿ ಧರ್ಮಸ್ಥಳ ಗ್ರಾಮದ ವಿದ್ಯುಷಿ ನಗರ ನಿವಾಸಿ ಬಾಲಕೃಷ್ಣ ರಾವ್ ಎಂಬವರಿಗೆ 2001 ಫೆಬ್ರವರಿಯಲ್ಲಿ ಎಲ್.ಪಿ.ಸಿ ವಾರಂಟ್ ಹೊರಡಿಸಲಾಗಿತ್ತು. ಅವರ ಪತ್ತೆ ಬಗ್ಗೆ ಬೆಳ್ತಂಗಡಿ ಪೊಲೀಸ್ ಉಪ ಅಧಿಕ್ಷಕರಾದ ರೋಹಿಣಿ, ಪೊಲೀಸ್ ವೃತ್ತ ನಿರೀಕ್ಷಕರಾದ ರವಿ ಬಿ ಎಸ್, ಉಪ ನೀರಿಕ್ಷಕರಾದ ಸಮರ್ಥ್ ರವರ ಮಾರ್ಗದರ್ಶನದಲ್ಲಿ ಠಾಣಾ ಸಿಬ್ಬಂದಿಗಳಾದ ವೃಷಭ, ಚರಣ್‌ರಾಜ್, ರವರು ಉಡುಪಿ, ಪುತ್ತೂರು, ಚಿಕ್ಕಮಗಳೂರು ಅಂಚೆ ಉಪ ವಿಭಾಗಗಳಿಗೆ ಭೇಟಿ ನೀಡಿ ಅವರ ಬಗ್ಗೆ ವಿಚಾರಿಸಿದಾಗ, ೧೯೯೭ ರಲ್ಲಿ ಚಿಕ್ಕಮಗಳೂರು ಅಂಚೆ ವಿಭಾಗದಿಂದ ಕಡ್ಡಾಯ ನಿವೃತ್ತಿ ನೀಡಿದ್ದು, ೨೦೦೭ ಫೆ. ೧೨ ರಲ್ಲಿ ಮೃತ ಪಟ್ಟಿರುವುದಾಗಿ ತಿಳಿದುಬಂದಿತ್ತು. ಅದರಂತೆ ಅವರ ಮರಣ ಪ್ರಮಾಣ ಪತ್ರದ ಪ್ರತಿಯನ್ನು ಪಡೆದು ಪೊಲೀಸರು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ ಎಂದು ವರದಿಯಾಗಿದೆ.

Related posts

ಗಡಾಯಿಕಲ್ಲಿನಲ್ಲಿ ಕಾಣಿಸಿಕೊಂಡಬೆಂಕಿ

Suddi Udaya

ಧರ್ಮಸ್ಥಳಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ

Suddi Udaya

ಮಚ್ಚಿನ ಪ್ರೌಢಶಾಲೆಗೆ ಕ್ರೀಡಾ ಸಾಮಾಗ್ರಿಗಳ ವಿತರಣೆ ಹಾಗೂ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕರಿಗೆ ವಿವಿಧ ಕ್ರೀಡಾಕೂಟಗಳು

Suddi Udaya

ಶಾಸಕ ಹರೀಶ್ ಪೂಂಜಾ ಅಧ್ಯಕ್ಷತೆಯಲ್ಲಿ ಅಕ್ರಮ – ಸಕ್ರಮ ಸಮಿತಿ ಸಭೆ; ಅರ್ಹ 28  ಮಂದಿ  ಫಲಾನುಭವಿಗಳಿಗೆ 94 ಸಿ ಹಕ್ಕುಪತ್ರ  ವಿತರಣೆ

Suddi Udaya

ಬೆಳ್ತಂಗಡಿ ‘ಶಾಂತಿಶ್ರೀ’ ಜೈನ ಮಹಿಳಾ ಸಮಾಜದಿಂದ ಮಹಿಳಾ ದಿನಾಚರಣೆ

Suddi Udaya

ಜ.10: ವಿದ್ಯುತ್ ನಿಲುಗಡೆ

Suddi Udaya
error: Content is protected !!