July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಲೆಮರೆಸಿಕೊಂಡು ಮೃತಪಟ್ಟ ಆರೋಪಿಯ ಮರಣ ಪತ್ರ ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

ಬೆಳ್ತಂಗಡಿ: ಕರ್ತವ್ಯ ನಿರತ ಪೊಲೀಸ್ ಮೇಲೆ ಹಲ್ಲೆ ಪ್ರಕರಣದಲ್ಲಿ ತಲೆಮರೆಸಿಕೊಂಡು, 2001ರಲ್ಲಿ ವಾರಂಟ್ ಜಾರಿಯಾಗಿದ್ದ, ಧರ್ಮಸ್ಥಳ ಗ್ರಾಮದ ವಿದ್ಯುಷಿ ನಗರದ ಬಾಲಕೃಷ್ಣ ರಾವ್ 2007ರಲ್ಲಿ ಮೃತಪಟ್ಟಿರುವುದಾಗಿ ಅವರ ಮರಣ ಪ್ರಮಾಣ ಪತ್ರದ ಪ್ರತಿಯನ್ನು ಧರ್ಮಸ್ಥಳ ಪೊಲೀಸರು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಕರ್ತವ್ಯ ನಿರತ ಪೊಲೀಸ್ ಮೇಲೆ ಹಲ್ಲೆ ಪ್ರಕರಣದಲ್ಲಿ ಧರ್ಮಸ್ಥಳ ಗ್ರಾಮದ ವಿದ್ಯುಷಿ ನಗರ ನಿವಾಸಿ ಬಾಲಕೃಷ್ಣ ರಾವ್ ಎಂಬವರಿಗೆ 2001 ಫೆಬ್ರವರಿಯಲ್ಲಿ ಎಲ್.ಪಿ.ಸಿ ವಾರಂಟ್ ಹೊರಡಿಸಲಾಗಿತ್ತು. ಅವರ ಪತ್ತೆ ಬಗ್ಗೆ ಬೆಳ್ತಂಗಡಿ ಪೊಲೀಸ್ ಉಪ ಅಧಿಕ್ಷಕರಾದ ರೋಹಿಣಿ, ಪೊಲೀಸ್ ವೃತ್ತ ನಿರೀಕ್ಷಕರಾದ ರವಿ ಬಿ ಎಸ್, ಉಪ ನೀರಿಕ್ಷಕರಾದ ಸಮರ್ಥ್ ರವರ ಮಾರ್ಗದರ್ಶನದಲ್ಲಿ ಠಾಣಾ ಸಿಬ್ಬಂದಿಗಳಾದ ವೃಷಭ, ಚರಣ್‌ರಾಜ್, ರವರು ಉಡುಪಿ, ಪುತ್ತೂರು, ಚಿಕ್ಕಮಗಳೂರು ಅಂಚೆ ಉಪ ವಿಭಾಗಗಳಿಗೆ ಭೇಟಿ ನೀಡಿ ಅವರ ಬಗ್ಗೆ ವಿಚಾರಿಸಿದಾಗ, ೧೯೯೭ ರಲ್ಲಿ ಚಿಕ್ಕಮಗಳೂರು ಅಂಚೆ ವಿಭಾಗದಿಂದ ಕಡ್ಡಾಯ ನಿವೃತ್ತಿ ನೀಡಿದ್ದು, ೨೦೦೭ ಫೆ. ೧೨ ರಲ್ಲಿ ಮೃತ ಪಟ್ಟಿರುವುದಾಗಿ ತಿಳಿದುಬಂದಿತ್ತು. ಅದರಂತೆ ಅವರ ಮರಣ ಪ್ರಮಾಣ ಪತ್ರದ ಪ್ರತಿಯನ್ನು ಪಡೆದು ಪೊಲೀಸರು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ ಎಂದು ವರದಿಯಾಗಿದೆ.

Related posts

ಓಡಿಲ್ನಾಳ ಸ.ಉ. ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಕಲ್ಮಂಜ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯ ಮತ್ತು ಪೌಷ್ಟಿಕ ಆಹಾರದ ಕುರಿತು ಮಾಹಿತಿ ಕಾರ್ಯಕ್ರಮ

Suddi Udaya

ಕಣಿಯೂರು ಮಹಾಶಕ್ತಿ ಕೇಂದ್ರ ಬಿಜೆಪಿ ಯುವಮೋರ್ಚಾ ಸಂಚಾಲಕರಾಗಿ ಹರಿಪ್ರಸಾದ್

Suddi Udaya

ಲಾಯಿಲ ಗ್ರಾ.ಪಂ. ಅಧ್ಯಕ್ಷರಾಗಿ ಜಯಂತಿ ಎಂ.ಕೆ. ಉಪಾಧ್ಯಕ್ಷರಾಗಿ ಸುಗಂಧಿ ಜಗನ್ನಾಥ್ ಆಯ್ಕೆ

Suddi Udaya

ರಾಜ್ಯ”ಮಿನಿ ಒಲಿಂಪಿಕ್“: ಶಿಶಿರ್ ಜಯವಿಕ್ರಮ್ ನಾಯಕತ್ವದ ದ.ಕ. ವಾಲಿಬಾಲ್ ತಂಡ ಪ್ರಥಮ ಸ್ಥಾನ

Suddi Udaya

ಗುರುದೇವ ಮಠದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya
error: Content is protected !!