September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

ಧರ್ಮಸ್ಥಳ: ಪ್ರಧಾನ ಮಂತ್ರಿ ಪೋಷಣ್ ಶಕ್ತಿ ಯೋಜನೆಯ ಸಾಮಾಜಿಕ ಪರಿಶೋಧನಾ ಸಭೆಯ ಪ್ರಯುಕ್ತ ಪೋಷಕರ ಸಭೆಯು ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ತೋಟಗಾರಿಕಾ ಇಲಾಖೆಯ ಹಿರಿಯ ನಿರ್ದೇಶಕರಾದ ಚಂದ್ರಶೇಖರ್ ಇವರು ವಹಿಸಿ ಸರಕಾರದಿಂದ ವಿದ್ಯಾರ್ಥಿಗಳಿಗೆ ದೊರೆಯುವ ಸವಲತ್ತುಗಳನ್ನು ಪಡೆಯುವುದು ಹಾಗೂ ಇದು ಸರಿಯಾದ ರೀತಿಯಲ್ಲಿ ಮಕ್ಕಳಿಗೆ ಲಭಿಸುತ್ತದೆಯೇ ಎಂಬುದನ್ನು ಪೋಷಕರು ತಿಳಿದುಕೊಳ್ಳಬೇಕು ಎಂದು ಹೇಳಿದರು.

ಕಾರ್ಯಕ್ರಮದ ವ್ಯವಸ್ಥಾಪಕ ರಾಜೀವ ಸಾಲಿಯಾನ್ ಇವರು ಪ್ರಾಸ್ತಾವಿಕ ನುಡಿಗಳನ್ನಾಡಿದರು. ಪೋಷಕರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.
ವೇದಿಕೆಯಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ರಾಜೇಶ್, ಅಕ್ಷರದಾಸೋಹ ಸಹಾಯಕ ನಿರ್ದೇಶಕರಾದ ರಾಜೇಂದ್ರ, ಶಾಲಾ ಮುಖ್ಯ ಶಿಕ್ಷಕರಾದ ಕಮಲ್ ತೇಜು ರಜಪೂತ್, ಪ್ರಾಥಮಿಕ ಆರೋಗ್ಯ ಇಲಾಖಾ ಹಿರಿಯ ಅಧಿಕಾರಿ
ಶ್ರೀಮತಿ ವಿಜಯಲಕ್ಷ್ಮೀ, ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ವಸಂತಿ, ಅಡುಗೆ ಸಿಬ್ಬಂದಿ ಶ್ರೀಮತಿ ವಿಜಯಲಕ್ಷ್ಮೀ ಉಪಸ್ಥಿತರಿದ್ದರು.


ಶಿಕ್ಷಕಜೋಸೆಫ್ ಸ್ವಾಗತಿಸಿ ಶಿಕ್ಷಕಿ ಶ್ರೀಮತಿ ನಿಖಿಲಾ ವಂದಿಸಿದರು. ಶಿಕ್ಷಕಿ ಶೋಭಾ ಕಾರ್ಯಕ್ರಮ ನಿರ್ವಹಿಸಿದರು.

Related posts

ಅರಸಿನಮಕ್ಕಿ: ಓಮಿನಿ ಕಾರು ಮತ್ತು ಲಾರಿ ನಡುವೆ ಅಪಘಾತ

Suddi Udaya

ಲಾಯಿಲ ಪ್ರಸನ್ನ ಫಾರ್ಮಸಿ ಕಾಲೇಜಿನಲ್ಲಿ”ಪ್ರಚಲಿತ ಉತ್ತಮ ಉತ್ಪಾದನಾ ಅಭ್ಯಾಸಗಳು” ನಿಯಂತ್ರಣ ವ್ಯವಹಾರಗಳ ಕುರಿತಾದ ವಿಚಾರಗೋಷ್ಠಿ

Suddi Udaya

ಬೆಳ್ತಂಗಡಿ ಸ.ಪ್ರ.ದ ಕಾಲೇಜಿನಲ್ಲಿ ಮಾನವಿಕ ಸಂಘದ ಉದ್ಘಾಟನೆ

Suddi Udaya

ಉಜಿರೆ : ಅಮರ ಕವಿ ವಾಲ್ಮೀಕಿ ವಿಶೇಷ ಉಪನ್ಯಾಸ

Suddi Udaya

ಮಡಂತ್ಯಾರಿನಲ್ಲಿ ‘ಸರ್ಕಾರದ ನಡೆ ಕಾರ್ಯಕರ್ತರ ಕಡೆ ‘ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ಉತ್ತಮ ಶಾಸಕ ಪ್ರಶಸ್ತಿ ಪಡೆದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರವರಿಗೆ ಇಂದಬೆಟ್ಟು ಕಾರ್ಯಕರ್ತರಿಂದ ಗೌರವಾರ್ಪಣೆ

Suddi Udaya
error: Content is protected !!