ಬೆಳ್ತಂಗಡಿ : ಪಡಂದಡ್ಕ ವ್ಯಾಪ್ತಿಯ ಕಿರೋಡಿಯಿಂದ ಕಟ್ಟೆ ಬಳಿವರೆಗೆ ಇರುವ ರಸ್ತೆ ಸಂಪೂರ್ಣ ಹೊಂಡಗಳಿಂದ ತುಂಬಿಕೊಂಡು ಸಂಚಾರಕ್ಕೆ ಅಸಾಧ್ಯವಾಗಿದ್ದು ಹಲವು ವರ್ಷಗಳಿಂದ ವಿದ್ಯಾರ್ಥಿಗಳು, ಕೂಲಿ ಕಾರ್ಮಿಕರು ಹಾಗೂ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಸಾರ್ವಜನಿಕರ ಸುರಕ್ಷತೆಗೆ ಆದಷ್ಟು ಬೇಗ ಚರಂಡಿ ವ್ಯವಸ್ಥೆ ಮಾಡಿ ರಸ್ತೆ ಅಗಲೀಕರಣ ಹಾಗೂ ಡಾಂಬರೀಕರಣ ಕೈಗೊಳ್ಳಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್, ಲೋಕೋಪಯೋಗಿ ಇಲಾಖೆ ಉಪ ವಿಭಾಗ ಬೆಳ್ತಂಗಡಿ ಇವರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಎಸ್.ಡಿ.ಪಿ.ಐ ಪಡ್ಡಂದಡ್ಕ ಬ್ರಾಂಚ್ ಸಮಿತಿ ಅಧ್ಯಕ್ಷರು ಸಲ್ಮಾನ್ ಪಡ್ಡಂದಡ್ಕ, ಕೋಶಾಧಿಕಾರಿ ಇಮ್ತಿಯಾಜ್ ಹಾಗೂ ವೇಣೂರು ಬ್ಲಾಕ್ ಸಮಿತಿ ಸದಸ್ಯ ಜುನೈದ್ ಉಪಸ್ಥಿತರಿದ್ದರು.











